ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ನ.೧೮ ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಪರಿಷ್ಕೃತ ವಿವರ ಇಂತಿದೆ.
ಬೆಳಿಗ್ಗೆ ೧೧.೩೦ ಗಂಟೆಗೆ ತಾಲ್ಲೂಕಿನ ತಮ್ಮಡಹಳ್ಳಿಗೆ ಆಗಮಿಸಿ ಜಿಲ್ಲೆಯಲ್ಲಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಂಬಂಧಿಸಿದಂತೆ ತಾಲ್ಲೂಕಿನ ತಮ್ಮಡಹಳ್ಳಿ, ಉಡಿಗಾಲ ಹಾಗೂ ಆನೆಮಡುವಿನ ಕೆರೆಗಳಲ್ಲಿ ಸ್ಥಳ ಪರಿವೀಕ್ಷಣೆ ನಡೆಸುವರು.
ಮಧ್ಯಾಹ್ನ ೧೨.೩೦ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿರುವ ಕೆರೆಗಳಿಗೆ ನೀರು ತುಂಬಿಸುವ ಹಾಗೂ ರೈತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಸಭೆ ನಡೆಸುವರು.
ಮಧ್ಯಾಹ್ನ ೧.೪೫ ಗಂಟೆಗೆ ತಾಲ್ಲೂಕಿನ ಸಿದ್ದಯ್ಯನಪುರದ ಮಂಟೇಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವರು. ಸಂಜೆ ೪ ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಅವರು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸುವರು. ಸಂಜೆ ೬.೩೦ ಗಂಟೆಗೆ ಶಿಂಷಾಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…