ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಕಂಪ್ಯೂಟರ್ ಕೇಂದ್ರ ಮತ್ತು ಸಿಸ್ಟ್ ನ ನಿವೃತ್ತ ನಿರ್ದೇಶಕರಾದ ಪ್ರೊ.ಎ.ಎಂ.ಸುಧಾಕರ ಅವರು ಕನ್ನಡ ವಿಕಾಸ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆಯು ಈ ವರ್ಷದಿಂದ ಆರಂಭಿಸಿರುವ ನೃಪತುಂಗ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ವಹಿಸಿಕೊಂಡರು. ಅವರು ನೃಪತುಂಗ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿಯೂ ಕಾರ್ಯನಿರ್ವಹಿಸುತ್ತಾರೆ.
ಸಂಸ್ಥೆಯ ಆವರಣದಲ್ಲಿ ನಡೆದ ಪದಾರೋಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಪ. ಮಲ್ಲೇಶ, ಉಪಾಧ್ಯಕ್ಷರಾದ ಸ.ರ. ಸುದರ್ಶನ, ಕಾರ್ಯದರ್ಶಿಯವರಾದ ಹೆಚ್.ಜಿ ಕೃಷ್ಣಪ್ಪ ಮತ್ತು ಪಿ. ಎಂ ಸವಿತಾ ಮಲ್ಲೇಶ್, ಖಜಾಂಚಿಯವರಾದ ಎಚ್ ಟಿ ಶೈಲಜಾ, ಸಹಕಾರ್ಯದರ್ಶಿಯವರಾದ ಶೀಲಾ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಶಿಕ್ಷಣದಲ್ಲಿ ಕನ್ನಡ ಮಾಧ್ಯಮಕ್ಕೆ ಬದ್ಧವಾಗಿರುವ ಸಂಸ್ಥೆಯು ಅದಕ್ಕೆ ಗಟ್ಟಿಯಾದ ಆರ್ಥಿಕ ನೆಲೆಯನ್ನು ಒದಗಿಸಲು ಈ ವರ್ಷದಿಂದ ಬಿಸಿಎ ಮತ್ತು ಬಿಕಾಂ ಪದವಿ ತರಗತಿಗಳನ್ನು ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಾರಂಭಿಸಿದೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…