ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಕಂಪ್ಯೂಟರ್ ಕೇಂದ್ರ ಮತ್ತು ಸಿಸ್ಟ್ ನ ನಿವೃತ್ತ ನಿರ್ದೇಶಕರಾದ ಪ್ರೊ.ಎ.ಎಂ.ಸುಧಾಕರ ಅವರು ಕನ್ನಡ ವಿಕಾಸ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆಯು ಈ ವರ್ಷದಿಂದ ಆರಂಭಿಸಿರುವ ನೃಪತುಂಗ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ವಹಿಸಿಕೊಂಡರು. ಅವರು ನೃಪತುಂಗ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿಯೂ ಕಾರ್ಯನಿರ್ವಹಿಸುತ್ತಾರೆ.
ಸಂಸ್ಥೆಯ ಆವರಣದಲ್ಲಿ ನಡೆದ ಪದಾರೋಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಪ. ಮಲ್ಲೇಶ, ಉಪಾಧ್ಯಕ್ಷರಾದ ಸ.ರ. ಸುದರ್ಶನ, ಕಾರ್ಯದರ್ಶಿಯವರಾದ ಹೆಚ್.ಜಿ ಕೃಷ್ಣಪ್ಪ ಮತ್ತು ಪಿ. ಎಂ ಸವಿತಾ ಮಲ್ಲೇಶ್, ಖಜಾಂಚಿಯವರಾದ ಎಚ್ ಟಿ ಶೈಲಜಾ, ಸಹಕಾರ್ಯದರ್ಶಿಯವರಾದ ಶೀಲಾ ಮತ್ತಿತರರು ಉಪಸ್ಥಿತರಿದ್ದರು.
ಶಾಲಾ ಶಿಕ್ಷಣದಲ್ಲಿ ಕನ್ನಡ ಮಾಧ್ಯಮಕ್ಕೆ ಬದ್ಧವಾಗಿರುವ ಸಂಸ್ಥೆಯು ಅದಕ್ಕೆ ಗಟ್ಟಿಯಾದ ಆರ್ಥಿಕ ನೆಲೆಯನ್ನು ಒದಗಿಸಲು ಈ ವರ್ಷದಿಂದ ಬಿಸಿಎ ಮತ್ತು ಬಿಕಾಂ ಪದವಿ ತರಗತಿಗಳನ್ನು ಇಂಗ್ಲಿಷ್ ಮಾಧ್ಯಮದಲ್ಲಿ ಪ್ರಾರಂಭಿಸಿದೆ.
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…