ಜಿಲ್ಲೆಗಳು

ಎನ್‌ಟಿಎಂ ಶಾಲೆ ಉಳಿವಿಗೆ ಮುಂದುವರಿದ ಹೋರಾಟ

ಮೈಸೂರು : ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಡಾ. ರಾಜ್‌ಕುಮಾರ್‌ ಅವರ ಪುತ್ತಳಿ ಮುಂಭಾಗ ಎನ್‌ಟಿಎಂ ಶಾಲೆಯನ್ನು ಕೆಡವಿ ವಿದ್ಯಾಭ್ಯಾಸ ಮಾಡುತ್ತಿದ್ದ ಮಕ್ಕಳಿಗೆ ದ್ರೋಹ ಎಸಗಿರುವ ರಾಮಕೃಷ್ಣ ಆಶ್ರಮದವರು ಕೂಡಲೇ ಶಾಲೆಯನ್ನು ಮರು ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿ  ಎನ್‌ಟಿಎಂ ಶಾಲೆ ಉಳಿಸಿ ಹೋರಾಟ ಸಮಿತಿ ವತಿಯಿಂದ  ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಬಡವರ ಮಕ್ಕಳು ಕಲಿಯುತ್ತಿದ್ದ ಶಾಲೆಯನ್ನು ರಾಮಕೃಷ್ಣ ಆಶ್ರಮದವರು ಕೆಡವಿದ್ದಾರೆ. ಅದೇ ಸ್ಥಳದಲ್ಲಿ ಹೊಸದಾಗಿ ಶಾಲೆ ನಿರ್ಮಿಸುತ್ತೇವೆ ಎಂದು ಪ್ರಮುಖರ ಮುಂದೆ ಭರವಸೆ ನೀಡಿದ್ದರು. ಇದೀಗ ತಮ್ಮ ಒಪ್ಪಂದವನ್ನು ಮರೆತಿದ್ದಾರೆ. ಕೊಟ್ಟ ಮಾತನ್ನು ಉಲ್ಲಂಘಿಸಿರುವ ರಾಮಕೃಷ್ಣ ಮಠದವರು ಶಾಲೆಯನ್ನು ತೆರವುಗೊಳಿಸಿದ್ದಾರೆ. ಹೀಗಾಗಿ ಮತ್ತೆ ಶಾಲೆ ಉಳಿಸಿ ಹೋರಾಟ ಆರಂಭಿಸಲಾಗಿದೆ ಎಂದು ತಿಳಿಸಿದರು.
ಸಮಿತಿ ಸಂಚಾಲಕ ಎಂ.ಮೋಹನ್‌ಕುವಾರ್‌ಗೌಡ, ರವೀಗೌಡ, ಕೃಷ್ಣ, ರವಿ, ರಾಜ್ ಕಿಶೋರ್, ಸುರೇಶ್, ಪ್ರಕಾಶ್, , ಪಾರ್ಥಸಾರಥಿ. ಬಾಲಕಲೃಷ್ಣ ಸಂಗಾಪುರ, ಬಸವರಾಜ್, ಸ್ವಾಮಿ, ಪ್ರಕಾಶ್, ಕರಿಗೌಡ, ಹೊಸಕೋಟೆ ಬಸವರಾಜು ಮತ್ತಿತರರು ಹಾಜರಿದ್ದರು.

andolanait

Recent Posts

ರಾಮನಗರದಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಸಾವು

ರಾಮನಗರ: ಕನಕಪುರ ಪಟ್ಟಣದಲ್ಲಿ ನಡೆದಿದ್ದ ಭೀಕರ ಗ್ಯಾಸ್‌ ಸಿಲಿಂಡರ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮನಕಲಕುವ ಸುದ್ದಿ ಹೊರಬಂದಿದೆ. ಗ್ಯಾಸ್‌…

38 mins ago

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

4 hours ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

5 hours ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

5 hours ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

5 hours ago