ಜಿಲ್ಲೆಗಳು

ಅ.17 ರಂದು ʼಪಂಡಿತ್‌ ರಾಜೀವ್‌ ತಾರಾನಾಥ್‌ʼ ರವರ ಜನ್ಮದಿನ ಆಚರಣೆ

ಮೈಸೂರು : ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರ 90ನೇ ವರ್ಷದ ಜನ್ಮದಿನದ ಪ್ರಯುಕ್ತ ಅ.17 ರಂದು ಸಂಜೆ 6.15 ಕ್ಕೆ  ನಗರ ಸರಸ್ವತಿಪುರಂನಲ್ಲಿರುವ ಜೆ ಎಸ್‌ ಎಸ್‌ ಮಹಿಳಾ ಕಾಲೇಜಿನಲ್ಲಿ ಹುಟ್ಡುಹಬ್ಬದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರ ಕುರಿತಾದ ಗಣೇಶ್‌ ಅಮೀನ್‌ಗಡ ಹಾಗೂ ರಘುಪತಿ ತಮಣ್‌ ಕರ್‌ ಅವರ ಸಂಪಾದಕತ್ವದಲ್ಲಿ ರಚನೆಯಾದ ʼಸರೋದ್‌ ಸ್ವರಯಾನʼ ದ 2ನೇ ಮುದ್ರಣವನ್ನು ಬಿಡುಗಡೆಗೊಳಿಸಲಾಗುವುದು.


ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಕವಿ, ಕಾದಂಬರಿಕಾರ ಚಂದ್ರಶೇಖರ ಕಂಬಾರರವರು, ಉಸ್ತಾದ್‌ ಫೈಯಾಜ್‌ ಖಾನ್‌, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಮನು ಬಳಿಗಾರ್‌ ಭಾಗಿಯಾಗಲಿದ್ದಾರೆ.
ಅಂದು ಪಂಡಿತ್‌ ರಾಜೀವ್‌ ತಾರಾನಾಥ್‌ ʼಎ ಲೈಫ್‌ ಇನ್‌ ಮ್ಯೂಸಿಕ್‌ʼ ಸಾಕ್ಷ್ಯಚಿತ್ರ ಹಾಗೂ ವಿಡಿಯೋ ತುಣುಕುಗಳ  ಪ್ರದರ್ಶನವಿರುತ್ತದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಬೇಕೆಂದು ಕಾರ್ಯಕ್ರಮದ ಆಯೋಜಕರು ಕೋರಿದ್ದಾರೆ.

andolanait

Recent Posts

ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿದ ಜೆಡಿಎಸ್‌

ಬೆಂಗಳೂರು: ಜೆಡಿಎಸ್‌ ಪಕ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಜಿಬಿಎಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ…

1 hour ago

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಶೂನ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…

2 hours ago

ಸ್ಪೀಕರ್‌ ಆಫ್‌ ದಿ ನೆಸ್ಸೆಟ್‌ ಪದಕ ಪಡೆದ ಮೊದಲ ಜಾಗತಿಕ ನಾಯಕ ಪ್ರಧಾನಿ ನರೇಂದ್ರ ಮೋದಿ

ಇಸ್ರೇಲ್:‌ ಭಾರತ ಮತ್ತು ಇಸ್ರೇಲ್‌ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…

2 hours ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಜಯ್‌ ದೇವರಕೊಂಡ-ರಶ್ಮಿಕಾ ಮಂದಣ್ಣ

ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್‌ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…

2 hours ago

ಮೈಸೂರು ರೇಷ್ಮೆಗೆ ದೊಡ್ಡ ಇತಿಹಾಸವಿದೆ: ಬಡಗಲಪುರ ನಾಗೇಂದ್ರ

ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…

2 hours ago

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

6 hours ago