ಮೈಸೂರು : ಸರೋದ್ ಮಾಂತ್ರಿಕ ಪಂಡಿತ್ ರಾಜೀವ್ ತಾರಾನಾಥ್ ಅವರ 90ನೇ ವರ್ಷದ ಜನ್ಮದಿನದ ಪ್ರಯುಕ್ತ ಅ.17 ರಂದು ಸಂಜೆ 6.15 ಕ್ಕೆ ನಗರ ಸರಸ್ವತಿಪುರಂನಲ್ಲಿರುವ ಜೆ ಎಸ್ ಎಸ್ ಮಹಿಳಾ ಕಾಲೇಜಿನಲ್ಲಿ ಹುಟ್ಡುಹಬ್ಬದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ಪಂಡಿತ್ ರಾಜೀವ್ ತಾರಾನಾಥ್ ಅವರ ಕುರಿತಾದ ಗಣೇಶ್ ಅಮೀನ್ಗಡ ಹಾಗೂ ರಘುಪತಿ ತಮಣ್ ಕರ್ ಅವರ ಸಂಪಾದಕತ್ವದಲ್ಲಿ ರಚನೆಯಾದ ʼಸರೋದ್ ಸ್ವರಯಾನʼ ದ 2ನೇ ಮುದ್ರಣವನ್ನು ಬಿಡುಗಡೆಗೊಳಿಸಲಾಗುವುದು.
ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಕವಿ, ಕಾದಂಬರಿಕಾರ ಚಂದ್ರಶೇಖರ ಕಂಬಾರರವರು, ಉಸ್ತಾದ್ ಫೈಯಾಜ್ ಖಾನ್, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಮನು ಬಳಿಗಾರ್ ಭಾಗಿಯಾಗಲಿದ್ದಾರೆ.
ಅಂದು ಪಂಡಿತ್ ರಾಜೀವ್ ತಾರಾನಾಥ್ ʼಎ ಲೈಫ್ ಇನ್ ಮ್ಯೂಸಿಕ್ʼ ಸಾಕ್ಷ್ಯಚಿತ್ರ ಹಾಗೂ ವಿಡಿಯೋ ತುಣುಕುಗಳ ಪ್ರದರ್ಶನವಿರುತ್ತದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಬೇಕೆಂದು ಕಾರ್ಯಕ್ರಮದ ಆಯೋಜಕರು ಕೋರಿದ್ದಾರೆ.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…