ಜಿಲ್ಲೆಗಳು

ಅ.17 ರಂದು ʼಪಂಡಿತ್‌ ರಾಜೀವ್‌ ತಾರಾನಾಥ್‌ʼ ರವರ ಜನ್ಮದಿನ ಆಚರಣೆ

ಮೈಸೂರು : ಸರೋದ್‌ ಮಾಂತ್ರಿಕ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರ 90ನೇ ವರ್ಷದ ಜನ್ಮದಿನದ ಪ್ರಯುಕ್ತ ಅ.17 ರಂದು ಸಂಜೆ 6.15 ಕ್ಕೆ  ನಗರ ಸರಸ್ವತಿಪುರಂನಲ್ಲಿರುವ ಜೆ ಎಸ್‌ ಎಸ್‌ ಮಹಿಳಾ ಕಾಲೇಜಿನಲ್ಲಿ ಹುಟ್ಡುಹಬ್ಬದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರ ಕುರಿತಾದ ಗಣೇಶ್‌ ಅಮೀನ್‌ಗಡ ಹಾಗೂ ರಘುಪತಿ ತಮಣ್‌ ಕರ್‌ ಅವರ ಸಂಪಾದಕತ್ವದಲ್ಲಿ ರಚನೆಯಾದ ʼಸರೋದ್‌ ಸ್ವರಯಾನʼ ದ 2ನೇ ಮುದ್ರಣವನ್ನು ಬಿಡುಗಡೆಗೊಳಿಸಲಾಗುವುದು.


ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಕವಿ, ಕಾದಂಬರಿಕಾರ ಚಂದ್ರಶೇಖರ ಕಂಬಾರರವರು, ಉಸ್ತಾದ್‌ ಫೈಯಾಜ್‌ ಖಾನ್‌, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಮನು ಬಳಿಗಾರ್‌ ಭಾಗಿಯಾಗಲಿದ್ದಾರೆ.
ಅಂದು ಪಂಡಿತ್‌ ರಾಜೀವ್‌ ತಾರಾನಾಥ್‌ ʼಎ ಲೈಫ್‌ ಇನ್‌ ಮ್ಯೂಸಿಕ್‌ʼ ಸಾಕ್ಷ್ಯಚಿತ್ರ ಹಾಗೂ ವಿಡಿಯೋ ತುಣುಕುಗಳ  ಪ್ರದರ್ಶನವಿರುತ್ತದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಬೇಕೆಂದು ಕಾರ್ಯಕ್ರಮದ ಆಯೋಜಕರು ಕೋರಿದ್ದಾರೆ.

andolanait

Recent Posts

ಓದುಗರ ಪತ್ರ | ಅನಗತ್ಯ ದೂರವಾಣಿ ಕರೆ ಕಿರಿಕಿರಿ ತಪ್ಪಿಸಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಏ.೨೪ರಂದು ಪ್ರಕಟವಾಗಲಿದೆ. ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದರು ಎಂಬ ನಾಣ್ಣುಡಿಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ…

12 mins ago

ಓದುಗರ ಪತ್ರ | ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ವ್ಯವಸ್ಥೆ ಕಲ್ಪಿಸಿ

ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ವ್ಯವಸ್ಥಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ಅಂಕಿಅಂಶಗಳ ಪ್ರಕಾರ…

19 mins ago

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…

59 mins ago

ರಸ್ತೆಗಳು ಗುಂಡಿಮಯ….ಜನರಿಗೆ ಜೀವ ಭಯ!

ಪ್ರಶಾಂತ್‌ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…

1 hour ago

ವಿದ್ಯುತ್‌ ಬಿಲ್‌ ಬಾಕಿ ; 3 ಗ್ರಾಪಂಗಳಿಗೆ ಸೆಸ್ಕ್‌ ಶಾಕ್‌

ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಪಂಚ್‌ ಕಾರ್ಟೂನ್‌ | ಏ.17 ಶುಕ್ರವಾರ

4 hours ago