ಮೈಸೂರು : ಸರೋದ್ ಮಾಂತ್ರಿಕ ಪಂಡಿತ್ ರಾಜೀವ್ ತಾರಾನಾಥ್ ಅವರ 90ನೇ ವರ್ಷದ ಜನ್ಮದಿನದ ಪ್ರಯುಕ್ತ ಅ.17 ರಂದು ಸಂಜೆ 6.15 ಕ್ಕೆ ನಗರ ಸರಸ್ವತಿಪುರಂನಲ್ಲಿರುವ ಜೆ ಎಸ್ ಎಸ್ ಮಹಿಳಾ ಕಾಲೇಜಿನಲ್ಲಿ ಹುಟ್ಡುಹಬ್ಬದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ಪಂಡಿತ್ ರಾಜೀವ್ ತಾರಾನಾಥ್ ಅವರ ಕುರಿತಾದ ಗಣೇಶ್ ಅಮೀನ್ಗಡ ಹಾಗೂ ರಘುಪತಿ ತಮಣ್ ಕರ್ ಅವರ ಸಂಪಾದಕತ್ವದಲ್ಲಿ ರಚನೆಯಾದ ʼಸರೋದ್ ಸ್ವರಯಾನʼ ದ 2ನೇ ಮುದ್ರಣವನ್ನು ಬಿಡುಗಡೆಗೊಳಿಸಲಾಗುವುದು.
ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಕವಿ, ಕಾದಂಬರಿಕಾರ ಚಂದ್ರಶೇಖರ ಕಂಬಾರರವರು, ಉಸ್ತಾದ್ ಫೈಯಾಜ್ ಖಾನ್, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಮನು ಬಳಿಗಾರ್ ಭಾಗಿಯಾಗಲಿದ್ದಾರೆ.
ಅಂದು ಪಂಡಿತ್ ರಾಜೀವ್ ತಾರಾನಾಥ್ ʼಎ ಲೈಫ್ ಇನ್ ಮ್ಯೂಸಿಕ್ʼ ಸಾಕ್ಷ್ಯಚಿತ್ರ ಹಾಗೂ ವಿಡಿಯೋ ತುಣುಕುಗಳ ಪ್ರದರ್ಶನವಿರುತ್ತದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಬೇಕೆಂದು ಕಾರ್ಯಕ್ರಮದ ಆಯೋಜಕರು ಕೋರಿದ್ದಾರೆ.
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…