ಮೈಸೂರು : ಇದೇ ತಿಂಗಳ 10 ನೆ ದಿನಾಂಕದಂದು ನಗರದ ಐಶ್(AIISH)ನಲ್ಲಿ ಪದ್ಮಶ್ರೀ ಡಾ. ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
‘ಪರಿಸರ ಹಾಗೂ ಅದರ ಸಂರಕ್ಷಣೆ’ ಕುರಿತು ಪದ್ಮ ಶ್ರೀ ನಾಡೋಜ, ಡಾ. ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದೆ.
ಸಂಸ್ಥೆಯ ಎನ್ಎಸ್ಎಸ್ ಘಟಕವು ಅಂದು ಬೆಳಿಗ್ಗೆ 10ರಿಂದ 11ರವರೆಗೆ ಸಂಸ್ಥೆಯ ಶೈಕ್ಷಣಿಕ ವಿಭಾಗದ ವಿಚಾರಸಂಕಿರಣ ಸಭಾಂಗಣದಲ್ಲಿ ಈ ಸಂವಾದ ಕಾರ್ಯಕ್ರಮವನ್ನ ಆಯೋಜನೆಗೊಳಿಸಿದೆ. ಡಾ. ಸಾಲುಮರದ ತಿಮ್ಮಕ್ಕ ಅವರೊಂದಿಗೆ ಎನ್ ಎಸ್ ಎಸ್ ಸ್ವಯಂಸೇವಕರು ಪರಿಸರ ಹಾಗೂ ಅದರ ಸಂರಕ್ಷಣೆ’ ಕುರಿತು ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಸಂಸ್ಥೆಯ ಕ್ಯಾಂಪಸ್ ನಲ್ಲಿ ಸಾಲುಮರದ ತಿಮ್ಮಕ್ಕ ಅವರಿಂದ ಗಿಡ ನೆಡುವ ಕಾರ್ಯಕ್ರಮವಿರುತ್ತದೆ.
ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವಾಲಯದಡಿಯಲ್ಲಿ 1965ರಲ್ಲಿ ಸ್ಥಾಪನೆಗೊಂಡಿತು. ಸಂವಹನ ನ್ಯೂನತೆ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ, ವೃತ್ತಿಪರ ತರಬೇತಿ ನೀಡುವುದು, ಚಿಕಿತ್ಸಾ ಸೇವೆಗಳನ್ನು ಒದಗಿಸುವುದು, ಸಂಶೋಧನೆ ಕೈಗೊಳ್ಳುವುದು ಮತ್ತು ಶ್ರವಣ ನ್ಯೂನತೆ, ಬುದ್ಧಿಮಾಂದ್ಯತೆ, ಧ್ವನಿ ಹಾಗೂ ಮಾತಿನ ನಿರರ್ಗಳತೆ ಹಾಗೂ ಧ್ವನಿವಿಜ್ಞಾನ ಮತ್ತು ಭಾಷಾನ್ಯೂನತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಸಂಸ್ಥೆಯ ಪ್ರಮುಖ ಉದ್ದೇಶಗಳಾಗಿವೆ.
ಸಂಸ್ಥೆಯು ಇತ್ತೀಚೆಗೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದ್ದು ಸಂವಹನ ನ್ಯೂನತೆಗಳ ಬಗ್ಗೆ ಸಮಗ್ರ ಸಂಶೋದನೆಯನ್ನು ಕೈಗೊಳ್ಳುವ ಸಲುವಾಗಿ ಶ್ರೇಷ್ಟ ಕೇಂದ್ರವನ್ನು ಸ್ಥಾಪಿಸಿದೆ. ಕೇಂದ್ರವು ಇತ್ತೀಚೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆಗೊಂಡಿದೆ.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…