ಮೈಸೂರು : ಇದೇ ತಿಂಗಳ 10 ನೆ ದಿನಾಂಕದಂದು ನಗರದ ಐಶ್(AIISH)ನಲ್ಲಿ ಪದ್ಮಶ್ರೀ ಡಾ. ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ.
‘ಪರಿಸರ ಹಾಗೂ ಅದರ ಸಂರಕ್ಷಣೆ’ ಕುರಿತು ಪದ್ಮ ಶ್ರೀ ನಾಡೋಜ, ಡಾ. ಸಾಲುಮರದ ತಿಮ್ಮಕ್ಕ ಅವರೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದೆ.
ಸಂಸ್ಥೆಯ ಎನ್ಎಸ್ಎಸ್ ಘಟಕವು ಅಂದು ಬೆಳಿಗ್ಗೆ 10ರಿಂದ 11ರವರೆಗೆ ಸಂಸ್ಥೆಯ ಶೈಕ್ಷಣಿಕ ವಿಭಾಗದ ವಿಚಾರಸಂಕಿರಣ ಸಭಾಂಗಣದಲ್ಲಿ ಈ ಸಂವಾದ ಕಾರ್ಯಕ್ರಮವನ್ನ ಆಯೋಜನೆಗೊಳಿಸಿದೆ. ಡಾ. ಸಾಲುಮರದ ತಿಮ್ಮಕ್ಕ ಅವರೊಂದಿಗೆ ಎನ್ ಎಸ್ ಎಸ್ ಸ್ವಯಂಸೇವಕರು ಪರಿಸರ ಹಾಗೂ ಅದರ ಸಂರಕ್ಷಣೆ’ ಕುರಿತು ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಸಂಸ್ಥೆಯ ಕ್ಯಾಂಪಸ್ ನಲ್ಲಿ ಸಾಲುಮರದ ತಿಮ್ಮಕ್ಕ ಅವರಿಂದ ಗಿಡ ನೆಡುವ ಕಾರ್ಯಕ್ರಮವಿರುತ್ತದೆ.
ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವಾಲಯದಡಿಯಲ್ಲಿ 1965ರಲ್ಲಿ ಸ್ಥಾಪನೆಗೊಂಡಿತು. ಸಂವಹನ ನ್ಯೂನತೆ ಕ್ಷೇತ್ರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ, ವೃತ್ತಿಪರ ತರಬೇತಿ ನೀಡುವುದು, ಚಿಕಿತ್ಸಾ ಸೇವೆಗಳನ್ನು ಒದಗಿಸುವುದು, ಸಂಶೋಧನೆ ಕೈಗೊಳ್ಳುವುದು ಮತ್ತು ಶ್ರವಣ ನ್ಯೂನತೆ, ಬುದ್ಧಿಮಾಂದ್ಯತೆ, ಧ್ವನಿ ಹಾಗೂ ಮಾತಿನ ನಿರರ್ಗಳತೆ ಹಾಗೂ ಧ್ವನಿವಿಜ್ಞಾನ ಮತ್ತು ಭಾಷಾನ್ಯೂನತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಸಂಸ್ಥೆಯ ಪ್ರಮುಖ ಉದ್ದೇಶಗಳಾಗಿವೆ.
ಸಂಸ್ಥೆಯು ಇತ್ತೀಚೆಗೆ ತನ್ನ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದ್ದು ಸಂವಹನ ನ್ಯೂನತೆಗಳ ಬಗ್ಗೆ ಸಮಗ್ರ ಸಂಶೋದನೆಯನ್ನು ಕೈಗೊಳ್ಳುವ ಸಲುವಾಗಿ ಶ್ರೇಷ್ಟ ಕೇಂದ್ರವನ್ನು ಸ್ಥಾಪಿಸಿದೆ. ಕೇಂದ್ರವು ಇತ್ತೀಚೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆಗೊಂಡಿದೆ.
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್ ಹಾಕಲಾಗಿದೆ.…
ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…
ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…
ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…
ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…
ಅಮಿತ್ ಶಾ, ಅಜಿತ್ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರದ…