ಮಡಿಕೇರಿ: ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜು ಸಿದ್ಧಪಡಿಸಿರುವ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅನುಮೋದಿತ ಗ್ರಾಮೀಣಾಭಿವೃದ್ಧಿ ಯೋಜನೆಯ ಅಂಗವಾಗಿ ಕುಶಾಲನಗರದ ಕೆಎಂಟಿ ಆಂಗ್ಲ ವಾಧ್ಯಮ ಶಾಲೆಯ ಸಹಯೊಗದೊoದಿಗೆ ವಿಸ್ಡಂ ಪಿಯು ಕಾಲೇಜಿನಲ್ಲಿ ಅ.೧೮ ರಿಂದ ೨೦ರವರೆಗೆ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಕಾಲೇಜಿನ ಆಡಳಿತ ಅಧಿಕಾರಿ ಡಾ.ಸಚ್ಚಿದಾನಂದ ಮೂರ್ತಿ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ವಾತನಾಡಿದ ಅವರು, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಮಂಡ್ಯ ಜಿಲ್ಲೆಗಳ ಗ್ರಾಮೀಣ ಪ್ರದೇಶದ ೭ರಿಂದ ೧೨ನೇ ತರಗತಿಯವರೆಗಿನ ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಕೌಶಲ ಅಭಿವೃದ್ಧಿ ಮತ್ತು ವೈಜ್ಞಾನಿಕ ಸಂಶೋಧನೆಯ ಬಗ್ಗೆ ಆಸಕ್ತಿ ಬೆಳೆಸಲು ‘ಸೈನ್ಸ್ ಫಿೆುಂಸ್ಟಾ ಫಾರ್ ಸ್ಟೂಡೆಂಟ್ಸ್‘ ಎಂಬ ವಿಷುಂದ ಕುರಿತು ವಿವಿಧ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಅ.೧೮ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೩ ರವರೆಗೆ ವಿಜ್ಞಾನ ವಿಷುಂಕ್ಕೆ ಸಂಬಂಧಿಸಿದಂತ ಪ್ರಬಂಧ ಸ್ಪರ್ಧೆ, ‘ಆಶುಭಾಷಣ ಸ್ಪರ್ಧೆ ಮತ್ತು ಭಿತ್ತಿಪತ್ರ ಪ್ರದರ್ಶನ’’ ನಡೆಯಲಿದೆ. ಅ.೧೯ ರಂದು ಬೆಳಿಗ್ಗೆ ೯.೩೦ ರಿಂದ ಮಧ್ಯಾಹ್ನ ೩ ಗಂಟೆವರೆಗೆ ‘‘ಹ್ಯಾಕಾಥಾನ್’ ಮತ್ತು ‘ವಿಜ್ಞಾನ ರಸಪ್ರಶ್ನೆ’ ಸ್ಪರ್ಧೆ ನಡೆಯ ಲಿದ್ದು, ಅ ೨೦ ರಂದು ೯.೩೦ ರಿಂದ ೧.೩೦ ರವರೆಗೆ ವಿವಿಧ ತಾಂತ್ರಿಕ ಯೋಜನೆ ಪ್ರದರ್ಶನ ಸ್ಪರ್ಧೆ ನಡೆುಯಲಿದೆ ಎಂದು ತಿಳಿಸಿದರು.
ವಿಜೇತರಾದ ಸ್ಪರ್ಧಿಗಳಿಗೆ ನಗದು ಬಹುವಾನ, ಪ್ರಶಸ್ತಿ ಪತ್ರ ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರವಾಣ ಪತ್ರ ವಿತರಿಸಲಾಗುವುದು. ಕೊಡಗು ಜಿಲ್ಲೆಯ ವಿವಿಧ ತಾಲೂಕುಗಳಿಂದ ೭-೧೨ನೇ ತರಗತಿಯವರೆಗಿನ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಎಲ್ಲಾ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬಹುದು. ಆಸಕ್ತ ಸ್ಪರ್ಧಿಗಳು ಮುಂಚಿತವಾಗಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಾಹಿತಿಗಾಗಿ ದೂ: ೯೯೦೨೨೩೮೭೬೮, ೯೭೩೯೩೧೯೫೬೭ ಅವರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಯೋಜನೆ ಅನುಷ್ಠಾನ ಸಂಯೋಜಕ ಡಾ.ಎಲ್.ಯತೀಶ್, ಪ್ರೋ.ಕೆ.ಎಸ್.ಗುರುಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…