ಶಾಸಕರಿಗೆ ಅನಾರೋಗ್ಯ; ಮಳೆ ಹಾನಿ ಪರಿಹಾರಕ್ಕಾಗಿ ಕಚೇರಿಗೆ ಅಲೆದಾಡುತ್ತಿರುವ ನೊಂದವರು
ಮಂಜು ಕೋಟೆ
ಎಚ್.ಡಿ.ಕೋಟೆ: ಕ್ಷೇತ್ರದ ಶಾಸಕರಿಗೆ ಅನಾರೋಗ್ಯವಿದ್ದರೆ ಅಧಿಕಾರಿಗಳ ಕಾರುಬಾರು ನಡೆಸುತ್ತಿದ್ದು, ಇತ್ತ ಮಳೆ ಹಾನಿಯ ಪರಿಹಾರಕ್ಕಾಗಿ ರೈತರು ಮತ್ತು ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ.
ಹಿಂದುಳಿದ ತಾಲ್ಲೂಕಿನಲ್ಲಿ ಮಹಾಮಳೆಯ ಆರ್ಭಟದಿಂದ ಅನೇಕ ಮನೆಗಳು ರೈತರ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳು ಹಾಳಾಗಿ ರೈತರು ಮತ್ತು ಜನಸಾಮಾನ್ಯರು ಬೀದಿಪಾಲಾಗುವ ಪರಿಸ್ಥಿತಿ ಬಂದಿದೆ. ಇವರುಗಳಿಗೆ ಸ್ಪಂದಿಸಬೇಕಾಗಿದ್ದ ಅಧಿಕಾರಿ ವರ್ಗ ಆನೆ ನಡೆದಿದ್ದೇ ದಾರಿ ಎಂಬಂತೆ ಕಾರ್ಯವಹಿಸುತ್ತಿರುವುದರಿಂದ ನೊಂದವರಿಗೆ ಮತ್ತು ಬಡವರಿಗೆ ದಿಕ್ಕೇ ತೋಚದಂತಾಗಿದೆ.
ಕಳೆದ ಹತ್ತು ದಿನಗಳಿಂದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ತಾಲ್ಲೂಕಿನಲ್ಲಿರುವ ಅಧಿಕಾರಿಗಳಿಗೆ ಯಾರೂ ಹೇಳುವವರು ಕೇಳುವವರು ಇಲ್ಲವಾಗಿದೆ. ಅಧಿಕಾರಿಗಳು ಹೇಳುವ ಮಾತುಗಳೇ ಅಂತಿಮವಾಗಿದೆ. ಇದರಿಂದಾಗಿ ಮಳೆ ಹಾನಿಯಿಂದ ಅನಾಹುತವಾಗಿಮನೆ ಮತ್ತು ಬೆಳೆ ಕಳೆದುಕೊಂಡವರು ಅಧಿಕಾರಿಗಳು ಕೇಳಿದ ಎಲ್ಲಾ ದಾಖಲಾತಿಗಳು ಮತ್ತು ಹಣ ಕೊಟ್ಟು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.
ಪ್ರತಿನಿತ್ಯ ಸರಗೂರು ಮತ್ತು ಕೋಟೆ ತಾಲ್ಲೂಕು ಕಚೇರಿಗಳಿಗೆ ಆ ಗ್ರಾಮ ಪಂಚಾಯಿತಿಗಳು ಕಂದಾಯ ಅಧಿಕಾರಿಗಳ ಜಿಲ್ಲಾ ಪಂಚಾಯಿತಿ ಅಧಿಕಾರಿಗಳನ್ನು ಸಂಪರ್ಕಿಸಿ ಕಚೇರಿಗೆ ನೂರಾರು ಮಂದಿ ಅಲೆದಾಡಿದರೂ ಕೆಲವರ ಕೆಲಸ ಕಾರ್ಯಗಳು ಮಾತ್ರ ಆಗುತ್ತಿದ್ದು ಉಳಿದವರ ಕೆಲಸ ಕಾರ್ಯಗಳು ಹಾಗೇ ಉಳಿದುಕೊಳ್ಳುತ್ತಿವೆ.
ಮಳೆಹಾನಿ ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡಿರುವ ಕೆಲ ದಲ್ಲಾಳಿಗಳು ಹಣ ಪಡೆದು ಅಧಿಕಾರಿಗಳು ಮೂಲಕ ಕೆಲಸ ಕಾರ್ಯಗಳನ್ನು ಭರದಿಂದ ಮಾಡಿಸಿಕೊಡುವಲ್ಲಿ ಮುಂದಾಗುತ್ತಾರೆ. ಆದರೆ, ನೊಂದವರಿಗೆ ಮತ್ತು ರೈತರ ಪರವಾಗಿ ಅಧಿಕಾರಿಗಳು ಕೆಲಸ ನಿರ್ವಹಿಸಿದಾಗ ಮಾತ್ರ ಸರ್ಕಾರ ನೀಡುವ ೋಂಜನೆಗಳು ಹಿಂದುಳಿದ ತಾಲ್ಲೂಕಿನಲ್ಲಿ ಸಮರ್ಪಕವಾಗಿ ಸದ್ಬಳಕೆಯಾಗಲು ಸಾಧ್ಯವಾಗಲಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್, ಶಾಸಕ ಅನಿಲ್ ಚಿಕ್ಕಮಾದು ಮಳೆ ಹಾನಿಯ ಪರಿಹಾರದ ವಿಚಾರದಲ್ಲಿ ಹೆಚ್ಚಿನ ರೀತಿ ಗಮನಹರಿಸಬೇಕಾಗಿದೆ.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…