ಶಾಸಕರಿಗೆ ಅನಾರೋಗ್ಯ; ಮಳೆ ಹಾನಿ ಪರಿಹಾರಕ್ಕಾಗಿ ಕಚೇರಿಗೆ ಅಲೆದಾಡುತ್ತಿರುವ ನೊಂದವರು
ಮಂಜು ಕೋಟೆ
ಎಚ್.ಡಿ.ಕೋಟೆ: ಕ್ಷೇತ್ರದ ಶಾಸಕರಿಗೆ ಅನಾರೋಗ್ಯವಿದ್ದರೆ ಅಧಿಕಾರಿಗಳ ಕಾರುಬಾರು ನಡೆಸುತ್ತಿದ್ದು, ಇತ್ತ ಮಳೆ ಹಾನಿಯ ಪರಿಹಾರಕ್ಕಾಗಿ ರೈತರು ಮತ್ತು ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ.
ಹಿಂದುಳಿದ ತಾಲ್ಲೂಕಿನಲ್ಲಿ ಮಹಾಮಳೆಯ ಆರ್ಭಟದಿಂದ ಅನೇಕ ಮನೆಗಳು ರೈತರ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳು ಹಾಳಾಗಿ ರೈತರು ಮತ್ತು ಜನಸಾಮಾನ್ಯರು ಬೀದಿಪಾಲಾಗುವ ಪರಿಸ್ಥಿತಿ ಬಂದಿದೆ. ಇವರುಗಳಿಗೆ ಸ್ಪಂದಿಸಬೇಕಾಗಿದ್ದ ಅಧಿಕಾರಿ ವರ್ಗ ಆನೆ ನಡೆದಿದ್ದೇ ದಾರಿ ಎಂಬಂತೆ ಕಾರ್ಯವಹಿಸುತ್ತಿರುವುದರಿಂದ ನೊಂದವರಿಗೆ ಮತ್ತು ಬಡವರಿಗೆ ದಿಕ್ಕೇ ತೋಚದಂತಾಗಿದೆ.
ಕಳೆದ ಹತ್ತು ದಿನಗಳಿಂದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ತಾಲ್ಲೂಕಿನಲ್ಲಿರುವ ಅಧಿಕಾರಿಗಳಿಗೆ ಯಾರೂ ಹೇಳುವವರು ಕೇಳುವವರು ಇಲ್ಲವಾಗಿದೆ. ಅಧಿಕಾರಿಗಳು ಹೇಳುವ ಮಾತುಗಳೇ ಅಂತಿಮವಾಗಿದೆ. ಇದರಿಂದಾಗಿ ಮಳೆ ಹಾನಿಯಿಂದ ಅನಾಹುತವಾಗಿಮನೆ ಮತ್ತು ಬೆಳೆ ಕಳೆದುಕೊಂಡವರು ಅಧಿಕಾರಿಗಳು ಕೇಳಿದ ಎಲ್ಲಾ ದಾಖಲಾತಿಗಳು ಮತ್ತು ಹಣ ಕೊಟ್ಟು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.
ಪ್ರತಿನಿತ್ಯ ಸರಗೂರು ಮತ್ತು ಕೋಟೆ ತಾಲ್ಲೂಕು ಕಚೇರಿಗಳಿಗೆ ಆ ಗ್ರಾಮ ಪಂಚಾಯಿತಿಗಳು ಕಂದಾಯ ಅಧಿಕಾರಿಗಳ ಜಿಲ್ಲಾ ಪಂಚಾಯಿತಿ ಅಧಿಕಾರಿಗಳನ್ನು ಸಂಪರ್ಕಿಸಿ ಕಚೇರಿಗೆ ನೂರಾರು ಮಂದಿ ಅಲೆದಾಡಿದರೂ ಕೆಲವರ ಕೆಲಸ ಕಾರ್ಯಗಳು ಮಾತ್ರ ಆಗುತ್ತಿದ್ದು ಉಳಿದವರ ಕೆಲಸ ಕಾರ್ಯಗಳು ಹಾಗೇ ಉಳಿದುಕೊಳ್ಳುತ್ತಿವೆ.
ಮಳೆಹಾನಿ ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡಿರುವ ಕೆಲ ದಲ್ಲಾಳಿಗಳು ಹಣ ಪಡೆದು ಅಧಿಕಾರಿಗಳು ಮೂಲಕ ಕೆಲಸ ಕಾರ್ಯಗಳನ್ನು ಭರದಿಂದ ಮಾಡಿಸಿಕೊಡುವಲ್ಲಿ ಮುಂದಾಗುತ್ತಾರೆ. ಆದರೆ, ನೊಂದವರಿಗೆ ಮತ್ತು ರೈತರ ಪರವಾಗಿ ಅಧಿಕಾರಿಗಳು ಕೆಲಸ ನಿರ್ವಹಿಸಿದಾಗ ಮಾತ್ರ ಸರ್ಕಾರ ನೀಡುವ ೋಂಜನೆಗಳು ಹಿಂದುಳಿದ ತಾಲ್ಲೂಕಿನಲ್ಲಿ ಸಮರ್ಪಕವಾಗಿ ಸದ್ಬಳಕೆಯಾಗಲು ಸಾಧ್ಯವಾಗಲಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್, ಶಾಸಕ ಅನಿಲ್ ಚಿಕ್ಕಮಾದು ಮಳೆ ಹಾನಿಯ ಪರಿಹಾರದ ವಿಚಾರದಲ್ಲಿ ಹೆಚ್ಚಿನ ರೀತಿ ಗಮನಹರಿಸಬೇಕಾಗಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…