ಶಾಸಕರಿಗೆ ಅನಾರೋಗ್ಯ; ಮಳೆ ಹಾನಿ ಪರಿಹಾರಕ್ಕಾಗಿ ಕಚೇರಿಗೆ ಅಲೆದಾಡುತ್ತಿರುವ ನೊಂದವರು
ಮಂಜು ಕೋಟೆ
ಎಚ್.ಡಿ.ಕೋಟೆ: ಕ್ಷೇತ್ರದ ಶಾಸಕರಿಗೆ ಅನಾರೋಗ್ಯವಿದ್ದರೆ ಅಧಿಕಾರಿಗಳ ಕಾರುಬಾರು ನಡೆಸುತ್ತಿದ್ದು, ಇತ್ತ ಮಳೆ ಹಾನಿಯ ಪರಿಹಾರಕ್ಕಾಗಿ ರೈತರು ಮತ್ತು ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ.
ಹಿಂದುಳಿದ ತಾಲ್ಲೂಕಿನಲ್ಲಿ ಮಹಾಮಳೆಯ ಆರ್ಭಟದಿಂದ ಅನೇಕ ಮನೆಗಳು ರೈತರ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳು ಹಾಳಾಗಿ ರೈತರು ಮತ್ತು ಜನಸಾಮಾನ್ಯರು ಬೀದಿಪಾಲಾಗುವ ಪರಿಸ್ಥಿತಿ ಬಂದಿದೆ. ಇವರುಗಳಿಗೆ ಸ್ಪಂದಿಸಬೇಕಾಗಿದ್ದ ಅಧಿಕಾರಿ ವರ್ಗ ಆನೆ ನಡೆದಿದ್ದೇ ದಾರಿ ಎಂಬಂತೆ ಕಾರ್ಯವಹಿಸುತ್ತಿರುವುದರಿಂದ ನೊಂದವರಿಗೆ ಮತ್ತು ಬಡವರಿಗೆ ದಿಕ್ಕೇ ತೋಚದಂತಾಗಿದೆ.
ಕಳೆದ ಹತ್ತು ದಿನಗಳಿಂದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ತಾಲ್ಲೂಕಿನಲ್ಲಿರುವ ಅಧಿಕಾರಿಗಳಿಗೆ ಯಾರೂ ಹೇಳುವವರು ಕೇಳುವವರು ಇಲ್ಲವಾಗಿದೆ. ಅಧಿಕಾರಿಗಳು ಹೇಳುವ ಮಾತುಗಳೇ ಅಂತಿಮವಾಗಿದೆ. ಇದರಿಂದಾಗಿ ಮಳೆ ಹಾನಿಯಿಂದ ಅನಾಹುತವಾಗಿಮನೆ ಮತ್ತು ಬೆಳೆ ಕಳೆದುಕೊಂಡವರು ಅಧಿಕಾರಿಗಳು ಕೇಳಿದ ಎಲ್ಲಾ ದಾಖಲಾತಿಗಳು ಮತ್ತು ಹಣ ಕೊಟ್ಟು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.
ಪ್ರತಿನಿತ್ಯ ಸರಗೂರು ಮತ್ತು ಕೋಟೆ ತಾಲ್ಲೂಕು ಕಚೇರಿಗಳಿಗೆ ಆ ಗ್ರಾಮ ಪಂಚಾಯಿತಿಗಳು ಕಂದಾಯ ಅಧಿಕಾರಿಗಳ ಜಿಲ್ಲಾ ಪಂಚಾಯಿತಿ ಅಧಿಕಾರಿಗಳನ್ನು ಸಂಪರ್ಕಿಸಿ ಕಚೇರಿಗೆ ನೂರಾರು ಮಂದಿ ಅಲೆದಾಡಿದರೂ ಕೆಲವರ ಕೆಲಸ ಕಾರ್ಯಗಳು ಮಾತ್ರ ಆಗುತ್ತಿದ್ದು ಉಳಿದವರ ಕೆಲಸ ಕಾರ್ಯಗಳು ಹಾಗೇ ಉಳಿದುಕೊಳ್ಳುತ್ತಿವೆ.
ಮಳೆಹಾನಿ ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡಿರುವ ಕೆಲ ದಲ್ಲಾಳಿಗಳು ಹಣ ಪಡೆದು ಅಧಿಕಾರಿಗಳು ಮೂಲಕ ಕೆಲಸ ಕಾರ್ಯಗಳನ್ನು ಭರದಿಂದ ಮಾಡಿಸಿಕೊಡುವಲ್ಲಿ ಮುಂದಾಗುತ್ತಾರೆ. ಆದರೆ, ನೊಂದವರಿಗೆ ಮತ್ತು ರೈತರ ಪರವಾಗಿ ಅಧಿಕಾರಿಗಳು ಕೆಲಸ ನಿರ್ವಹಿಸಿದಾಗ ಮಾತ್ರ ಸರ್ಕಾರ ನೀಡುವ ೋಂಜನೆಗಳು ಹಿಂದುಳಿದ ತಾಲ್ಲೂಕಿನಲ್ಲಿ ಸಮರ್ಪಕವಾಗಿ ಸದ್ಬಳಕೆಯಾಗಲು ಸಾಧ್ಯವಾಗಲಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್, ಶಾಸಕ ಅನಿಲ್ ಚಿಕ್ಕಮಾದು ಮಳೆ ಹಾನಿಯ ಪರಿಹಾರದ ವಿಚಾರದಲ್ಲಿ ಹೆಚ್ಚಿನ ರೀತಿ ಗಮನಹರಿಸಬೇಕಾಗಿದೆ.
ಬೆಂಗಳೂರು: ಕೆಜಿಎಫ್-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಭಿನಯದ…
ತುಮಕೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…
ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…
ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…
ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…