ಜಿಲ್ಲೆಗಳು

ಅಧಿಕಾರಿಗಳ ಕಾರುಬಾರಿನಲ್ಲಿ ರೈತರು, ಜನರ ಗೋಳು ಕೇಳುವವರಾರು?

ಶಾಸಕರಿಗೆ ಅನಾರೋಗ್ಯ; ಮಳೆ ಹಾನಿ ಪರಿಹಾರಕ್ಕಾಗಿ ಕಚೇರಿಗೆ ಅಲೆದಾಡುತ್ತಿರುವ ನೊಂದವರು

ಮಂಜು ಕೋಟೆ
ಎಚ್.ಡಿ.ಕೋಟೆ: ಕ್ಷೇತ್ರದ ಶಾಸಕರಿಗೆ ಅನಾರೋಗ್ಯವಿದ್ದರೆ ಅಧಿಕಾರಿಗಳ ಕಾರುಬಾರು ನಡೆಸುತ್ತಿದ್ದು, ಇತ್ತ ಮಳೆ ಹಾನಿಯ ಪರಿಹಾರಕ್ಕಾಗಿ ರೈತರು ಮತ್ತು ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ.
ಹಿಂದುಳಿದ ತಾಲ್ಲೂಕಿನಲ್ಲಿ ಮಹಾಮಳೆಯ ಆರ್ಭಟದಿಂದ ಅನೇಕ ಮನೆಗಳು ರೈತರ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳು ಹಾಳಾಗಿ ರೈತರು ಮತ್ತು ಜನಸಾಮಾನ್ಯರು ಬೀದಿಪಾಲಾಗುವ ಪರಿಸ್ಥಿತಿ ಬಂದಿದೆ. ಇವರುಗಳಿಗೆ ಸ್ಪಂದಿಸಬೇಕಾಗಿದ್ದ ಅಧಿಕಾರಿ ವರ್ಗ ಆನೆ ನಡೆದಿದ್ದೇ ದಾರಿ ಎಂಬಂತೆ ಕಾರ್ಯವಹಿಸುತ್ತಿರುವುದರಿಂದ ನೊಂದವರಿಗೆ ಮತ್ತು ಬಡವರಿಗೆ ದಿಕ್ಕೇ ತೋಚದಂತಾಗಿದೆ.
ಕಳೆದ ಹತ್ತು ದಿನಗಳಿಂದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ತಾಲ್ಲೂಕಿನಲ್ಲಿರುವ ಅಧಿಕಾರಿಗಳಿಗೆ ಯಾರೂ ಹೇಳುವವರು ಕೇಳುವವರು ಇಲ್ಲವಾಗಿದೆ. ಅಧಿಕಾರಿಗಳು ಹೇಳುವ ಮಾತುಗಳೇ ಅಂತಿಮವಾಗಿದೆ. ಇದರಿಂದಾಗಿ ಮಳೆ ಹಾನಿಯಿಂದ ಅನಾಹುತವಾಗಿಮನೆ ಮತ್ತು ಬೆಳೆ ಕಳೆದುಕೊಂಡವರು ಅಧಿಕಾರಿಗಳು ಕೇಳಿದ ಎಲ್ಲಾ ದಾಖಲಾತಿಗಳು ಮತ್ತು ಹಣ ಕೊಟ್ಟು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.
ಪ್ರತಿನಿತ್ಯ ಸರಗೂರು ಮತ್ತು ಕೋಟೆ ತಾಲ್ಲೂಕು ಕಚೇರಿಗಳಿಗೆ ಆ ಗ್ರಾಮ ಪಂಚಾಯಿತಿಗಳು ಕಂದಾಯ ಅಧಿಕಾರಿಗಳ ಜಿಲ್ಲಾ ಪಂಚಾಯಿತಿ ಅಧಿಕಾರಿಗಳನ್ನು ಸಂಪರ್ಕಿಸಿ ಕಚೇರಿಗೆ ನೂರಾರು ಮಂದಿ ಅಲೆದಾಡಿದರೂ ಕೆಲವರ ಕೆಲಸ ಕಾರ್ಯಗಳು ಮಾತ್ರ ಆಗುತ್ತಿದ್ದು ಉಳಿದವರ ಕೆಲಸ ಕಾರ್ಯಗಳು ಹಾಗೇ ಉಳಿದುಕೊಳ್ಳುತ್ತಿವೆ.
ಮಳೆಹಾನಿ ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡಿರುವ ಕೆಲ ದಲ್ಲಾಳಿಗಳು ಹಣ ಪಡೆದು ಅಧಿಕಾರಿಗಳು ಮೂಲಕ ಕೆಲಸ ಕಾರ್ಯಗಳನ್ನು ಭರದಿಂದ ಮಾಡಿಸಿಕೊಡುವಲ್ಲಿ ಮುಂದಾಗುತ್ತಾರೆ. ಆದರೆ, ನೊಂದವರಿಗೆ ಮತ್ತು ರೈತರ ಪರವಾಗಿ ಅಧಿಕಾರಿಗಳು ಕೆಲಸ ನಿರ್ವಹಿಸಿದಾಗ ಮಾತ್ರ ಸರ್ಕಾರ ನೀಡುವ ೋಂಜನೆಗಳು ಹಿಂದುಳಿದ ತಾಲ್ಲೂಕಿನಲ್ಲಿ ಸಮರ್ಪಕವಾಗಿ ಸದ್ಬಳಕೆಯಾಗಲು ಸಾಧ್ಯವಾಗಲಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್, ಶಾಸಕ ಅನಿಲ್ ಚಿಕ್ಕಮಾದು ಮಳೆ ಹಾನಿಯ ಪರಿಹಾರದ ವಿಚಾರದಲ್ಲಿ ಹೆಚ್ಚಿನ ರೀತಿ ಗಮನಹರಿಸಬೇಕಾಗಿದೆ.


andolanait

Recent Posts

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…

37 mins ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…

43 mins ago

ಚಿತ್ರದುರ್ಗದಲ್ಲಿ ಬಸ್‌ ದುರಂತ ಪ್ರಕರಣ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…

52 mins ago

ಎಲ್ಲೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್‌ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್‌ ಹಬ್ಬವು ನಂಬಿಕೆಯೆಂಬ…

1 hour ago

ಚಿತ್ರದುರ್ಗದಲ್ಲಿ ಭೀಕರ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…

2 hours ago

ಭೀಕರ ರಸ್ತೆ ದುರಂತ: ಬಸ್‌ಗೆ ಬೆಂಕಿ ತಗುಲಿ 10ಕ್ಕೂ ಹೆಚ್ಚು ಮಂದಿ ಸಾವು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್‌ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ…

2 hours ago