ಜಿಲ್ಲೆಗಳು

ಅಧಿಕಾರಿಗಳ ಕಾರುಬಾರಿನಲ್ಲಿ ರೈತರು, ಜನರ ಗೋಳು ಕೇಳುವವರಾರು?

ಶಾಸಕರಿಗೆ ಅನಾರೋಗ್ಯ; ಮಳೆ ಹಾನಿ ಪರಿಹಾರಕ್ಕಾಗಿ ಕಚೇರಿಗೆ ಅಲೆದಾಡುತ್ತಿರುವ ನೊಂದವರು

ಮಂಜು ಕೋಟೆ
ಎಚ್.ಡಿ.ಕೋಟೆ: ಕ್ಷೇತ್ರದ ಶಾಸಕರಿಗೆ ಅನಾರೋಗ್ಯವಿದ್ದರೆ ಅಧಿಕಾರಿಗಳ ಕಾರುಬಾರು ನಡೆಸುತ್ತಿದ್ದು, ಇತ್ತ ಮಳೆ ಹಾನಿಯ ಪರಿಹಾರಕ್ಕಾಗಿ ರೈತರು ಮತ್ತು ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ.
ಹಿಂದುಳಿದ ತಾಲ್ಲೂಕಿನಲ್ಲಿ ಮಹಾಮಳೆಯ ಆರ್ಭಟದಿಂದ ಅನೇಕ ಮನೆಗಳು ರೈತರ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳು ಹಾಳಾಗಿ ರೈತರು ಮತ್ತು ಜನಸಾಮಾನ್ಯರು ಬೀದಿಪಾಲಾಗುವ ಪರಿಸ್ಥಿತಿ ಬಂದಿದೆ. ಇವರುಗಳಿಗೆ ಸ್ಪಂದಿಸಬೇಕಾಗಿದ್ದ ಅಧಿಕಾರಿ ವರ್ಗ ಆನೆ ನಡೆದಿದ್ದೇ ದಾರಿ ಎಂಬಂತೆ ಕಾರ್ಯವಹಿಸುತ್ತಿರುವುದರಿಂದ ನೊಂದವರಿಗೆ ಮತ್ತು ಬಡವರಿಗೆ ದಿಕ್ಕೇ ತೋಚದಂತಾಗಿದೆ.
ಕಳೆದ ಹತ್ತು ದಿನಗಳಿಂದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ತಾಲ್ಲೂಕಿನಲ್ಲಿರುವ ಅಧಿಕಾರಿಗಳಿಗೆ ಯಾರೂ ಹೇಳುವವರು ಕೇಳುವವರು ಇಲ್ಲವಾಗಿದೆ. ಅಧಿಕಾರಿಗಳು ಹೇಳುವ ಮಾತುಗಳೇ ಅಂತಿಮವಾಗಿದೆ. ಇದರಿಂದಾಗಿ ಮಳೆ ಹಾನಿಯಿಂದ ಅನಾಹುತವಾಗಿಮನೆ ಮತ್ತು ಬೆಳೆ ಕಳೆದುಕೊಂಡವರು ಅಧಿಕಾರಿಗಳು ಕೇಳಿದ ಎಲ್ಲಾ ದಾಖಲಾತಿಗಳು ಮತ್ತು ಹಣ ಕೊಟ್ಟು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.
ಪ್ರತಿನಿತ್ಯ ಸರಗೂರು ಮತ್ತು ಕೋಟೆ ತಾಲ್ಲೂಕು ಕಚೇರಿಗಳಿಗೆ ಆ ಗ್ರಾಮ ಪಂಚಾಯಿತಿಗಳು ಕಂದಾಯ ಅಧಿಕಾರಿಗಳ ಜಿಲ್ಲಾ ಪಂಚಾಯಿತಿ ಅಧಿಕಾರಿಗಳನ್ನು ಸಂಪರ್ಕಿಸಿ ಕಚೇರಿಗೆ ನೂರಾರು ಮಂದಿ ಅಲೆದಾಡಿದರೂ ಕೆಲವರ ಕೆಲಸ ಕಾರ್ಯಗಳು ಮಾತ್ರ ಆಗುತ್ತಿದ್ದು ಉಳಿದವರ ಕೆಲಸ ಕಾರ್ಯಗಳು ಹಾಗೇ ಉಳಿದುಕೊಳ್ಳುತ್ತಿವೆ.
ಮಳೆಹಾನಿ ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡಿರುವ ಕೆಲ ದಲ್ಲಾಳಿಗಳು ಹಣ ಪಡೆದು ಅಧಿಕಾರಿಗಳು ಮೂಲಕ ಕೆಲಸ ಕಾರ್ಯಗಳನ್ನು ಭರದಿಂದ ಮಾಡಿಸಿಕೊಡುವಲ್ಲಿ ಮುಂದಾಗುತ್ತಾರೆ. ಆದರೆ, ನೊಂದವರಿಗೆ ಮತ್ತು ರೈತರ ಪರವಾಗಿ ಅಧಿಕಾರಿಗಳು ಕೆಲಸ ನಿರ್ವಹಿಸಿದಾಗ ಮಾತ್ರ ಸರ್ಕಾರ ನೀಡುವ ೋಂಜನೆಗಳು ಹಿಂದುಳಿದ ತಾಲ್ಲೂಕಿನಲ್ಲಿ ಸಮರ್ಪಕವಾಗಿ ಸದ್ಬಳಕೆಯಾಗಲು ಸಾಧ್ಯವಾಗಲಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್, ಶಾಸಕ ಅನಿಲ್ ಚಿಕ್ಕಮಾದು ಮಳೆ ಹಾನಿಯ ಪರಿಹಾರದ ವಿಚಾರದಲ್ಲಿ ಹೆಚ್ಚಿನ ರೀತಿ ಗಮನಹರಿಸಬೇಕಾಗಿದೆ.


andolanait

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

6 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

9 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

11 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

11 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

12 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

15 hours ago