ಜಿಲ್ಲೆಗಳು

ಅಧಿಕಾರಿಗಳ ಕಾರುಬಾರಿನಲ್ಲಿ ರೈತರು, ಜನರ ಗೋಳು ಕೇಳುವವರಾರು?

ಶಾಸಕರಿಗೆ ಅನಾರೋಗ್ಯ; ಮಳೆ ಹಾನಿ ಪರಿಹಾರಕ್ಕಾಗಿ ಕಚೇರಿಗೆ ಅಲೆದಾಡುತ್ತಿರುವ ನೊಂದವರು

ಮಂಜು ಕೋಟೆ
ಎಚ್.ಡಿ.ಕೋಟೆ: ಕ್ಷೇತ್ರದ ಶಾಸಕರಿಗೆ ಅನಾರೋಗ್ಯವಿದ್ದರೆ ಅಧಿಕಾರಿಗಳ ಕಾರುಬಾರು ನಡೆಸುತ್ತಿದ್ದು, ಇತ್ತ ಮಳೆ ಹಾನಿಯ ಪರಿಹಾರಕ್ಕಾಗಿ ರೈತರು ಮತ್ತು ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಎದುರಾಗಿದೆ.
ಹಿಂದುಳಿದ ತಾಲ್ಲೂಕಿನಲ್ಲಿ ಮಹಾಮಳೆಯ ಆರ್ಭಟದಿಂದ ಅನೇಕ ಮನೆಗಳು ರೈತರ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳು ಹಾಳಾಗಿ ರೈತರು ಮತ್ತು ಜನಸಾಮಾನ್ಯರು ಬೀದಿಪಾಲಾಗುವ ಪರಿಸ್ಥಿತಿ ಬಂದಿದೆ. ಇವರುಗಳಿಗೆ ಸ್ಪಂದಿಸಬೇಕಾಗಿದ್ದ ಅಧಿಕಾರಿ ವರ್ಗ ಆನೆ ನಡೆದಿದ್ದೇ ದಾರಿ ಎಂಬಂತೆ ಕಾರ್ಯವಹಿಸುತ್ತಿರುವುದರಿಂದ ನೊಂದವರಿಗೆ ಮತ್ತು ಬಡವರಿಗೆ ದಿಕ್ಕೇ ತೋಚದಂತಾಗಿದೆ.
ಕಳೆದ ಹತ್ತು ದಿನಗಳಿಂದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ತಾಲ್ಲೂಕಿನಲ್ಲಿರುವ ಅಧಿಕಾರಿಗಳಿಗೆ ಯಾರೂ ಹೇಳುವವರು ಕೇಳುವವರು ಇಲ್ಲವಾಗಿದೆ. ಅಧಿಕಾರಿಗಳು ಹೇಳುವ ಮಾತುಗಳೇ ಅಂತಿಮವಾಗಿದೆ. ಇದರಿಂದಾಗಿ ಮಳೆ ಹಾನಿಯಿಂದ ಅನಾಹುತವಾಗಿಮನೆ ಮತ್ತು ಬೆಳೆ ಕಳೆದುಕೊಂಡವರು ಅಧಿಕಾರಿಗಳು ಕೇಳಿದ ಎಲ್ಲಾ ದಾಖಲಾತಿಗಳು ಮತ್ತು ಹಣ ಕೊಟ್ಟು ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.
ಪ್ರತಿನಿತ್ಯ ಸರಗೂರು ಮತ್ತು ಕೋಟೆ ತಾಲ್ಲೂಕು ಕಚೇರಿಗಳಿಗೆ ಆ ಗ್ರಾಮ ಪಂಚಾಯಿತಿಗಳು ಕಂದಾಯ ಅಧಿಕಾರಿಗಳ ಜಿಲ್ಲಾ ಪಂಚಾಯಿತಿ ಅಧಿಕಾರಿಗಳನ್ನು ಸಂಪರ್ಕಿಸಿ ಕಚೇರಿಗೆ ನೂರಾರು ಮಂದಿ ಅಲೆದಾಡಿದರೂ ಕೆಲವರ ಕೆಲಸ ಕಾರ್ಯಗಳು ಮಾತ್ರ ಆಗುತ್ತಿದ್ದು ಉಳಿದವರ ಕೆಲಸ ಕಾರ್ಯಗಳು ಹಾಗೇ ಉಳಿದುಕೊಳ್ಳುತ್ತಿವೆ.
ಮಳೆಹಾನಿ ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡಿರುವ ಕೆಲ ದಲ್ಲಾಳಿಗಳು ಹಣ ಪಡೆದು ಅಧಿಕಾರಿಗಳು ಮೂಲಕ ಕೆಲಸ ಕಾರ್ಯಗಳನ್ನು ಭರದಿಂದ ಮಾಡಿಸಿಕೊಡುವಲ್ಲಿ ಮುಂದಾಗುತ್ತಾರೆ. ಆದರೆ, ನೊಂದವರಿಗೆ ಮತ್ತು ರೈತರ ಪರವಾಗಿ ಅಧಿಕಾರಿಗಳು ಕೆಲಸ ನಿರ್ವಹಿಸಿದಾಗ ಮಾತ್ರ ಸರ್ಕಾರ ನೀಡುವ ೋಂಜನೆಗಳು ಹಿಂದುಳಿದ ತಾಲ್ಲೂಕಿನಲ್ಲಿ ಸಮರ್ಪಕವಾಗಿ ಸದ್ಬಳಕೆಯಾಗಲು ಸಾಧ್ಯವಾಗಲಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್, ಶಾಸಕ ಅನಿಲ್ ಚಿಕ್ಕಮಾದು ಮಳೆ ಹಾನಿಯ ಪರಿಹಾರದ ವಿಚಾರದಲ್ಲಿ ಹೆಚ್ಚಿನ ರೀತಿ ಗಮನಹರಿಸಬೇಕಾಗಿದೆ.


andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

21 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

23 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

26 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

3 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

3 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago