ಮೈಸೂರು : ಮೂರು ಸಾವಿನ ಬಳಿಕ ಎಚ್ಚೆತ್ತ ಅಧಿಕಾರಿಗಳು ಇದೀಗ ಯಮಸ್ವರೂಪಿಯಾಗಿದ್ದ ಹಂಪ್ಗಳನ್ನು ತೆರವುಗೊಳಿಸಿದ್ದಾರೆ.
ವಿಶ್ವವಿದ್ಯಾನಿಲಯದ ಕುವೆಂಪು ಪ್ರತಿಮೆ ಮುಂದೆ ರಾತ್ರೋರಾತ್ರಿ ಅವೈಜ್ಞಾನಿಕವಾಗಿ ರಸ್ತೆ ಹಂಪ್ ನಿರ್ಮಿಸಿ ಅದಕ್ಕೆ ಮಾರ್ಕ್ ಮಾಡದ ಪರಿಣಾಮ 20 ಅಪಘಾತಗಳಾಗಿದ್ದು, ಮೂವರು ಸವಾರರು ಮೃತಪಟ್ಟಿದ್ದರು.
ಈ ರಸ್ತೆಯಲ್ಲಿ ಸಂಚರಿಸುವ ಸವಾರರು ಹೊಸದಾಗಿ ಹಂಪ್ಸ್ ಹಾಕಿರುವುದನ್ನು ಗಮನಿಸದೆ ವೇಗವಾಗಿ ವಾಹನ ಚಾಲನೆ ಮಾಡಿದ್ದಾರೆ. ಇದರಿಂದ ವಾಹನಗಳು ನಿಯಂತ್ರಣ ತಪ್ಪಿ ಅಪಘಾತಕ್ಕೆ ಒಳಗಾಗಿವೆ.
ಕಳೆದ ಎರಡು ದಿನದಲ್ಲಿ 20ಕ್ಕೂ ಹೆಚ್ಚು ಅಪಘಾತ ಈ ಹಂಪ್ನಿಂದ ಆಗಿದ್ದು, ಮೂರು ಸವಾರರು ಮೃತಪಟ್ಟಿದ್ದಾರೆ. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರ ಗಮನಕ್ಕೆ ತಾರದೆ ಅವೈಜ್ಞಾನಿಕವಾಗಿ ಹಂಪ್ ನಿರ್ಮಿಸಿದ ಪಾಲಿಕೆ ಎಂಜಿನಿಯರ್ ಸೇರಿದಂತೆ ಗುತ್ತಿಗೆದಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಮೂರು ಸಾವಿನ ಬಳಿಕ ಎಚ್ಚೆತ್ತ ಅಧಿಕಾರಿಗಳು ರಸ್ತೆಯಲ್ಲಿ ನಿರ್ಮಿಸಿದ್ದ ಹಂಪ್ಗಳನ್ನು ತೆರವುಗೊಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…