ಮೈಸೂರು : ಮೂರು ಸಾವಿನ ಬಳಿಕ ಎಚ್ಚೆತ್ತ ಅಧಿಕಾರಿಗಳು ಇದೀಗ ಯಮಸ್ವರೂಪಿಯಾಗಿದ್ದ ಹಂಪ್ಗಳನ್ನು ತೆರವುಗೊಳಿಸಿದ್ದಾರೆ.
ವಿಶ್ವವಿದ್ಯಾನಿಲಯದ ಕುವೆಂಪು ಪ್ರತಿಮೆ ಮುಂದೆ ರಾತ್ರೋರಾತ್ರಿ ಅವೈಜ್ಞಾನಿಕವಾಗಿ ರಸ್ತೆ ಹಂಪ್ ನಿರ್ಮಿಸಿ ಅದಕ್ಕೆ ಮಾರ್ಕ್ ಮಾಡದ ಪರಿಣಾಮ 20 ಅಪಘಾತಗಳಾಗಿದ್ದು, ಮೂವರು ಸವಾರರು ಮೃತಪಟ್ಟಿದ್ದರು.
ಈ ರಸ್ತೆಯಲ್ಲಿ ಸಂಚರಿಸುವ ಸವಾರರು ಹೊಸದಾಗಿ ಹಂಪ್ಸ್ ಹಾಕಿರುವುದನ್ನು ಗಮನಿಸದೆ ವೇಗವಾಗಿ ವಾಹನ ಚಾಲನೆ ಮಾಡಿದ್ದಾರೆ. ಇದರಿಂದ ವಾಹನಗಳು ನಿಯಂತ್ರಣ ತಪ್ಪಿ ಅಪಘಾತಕ್ಕೆ ಒಳಗಾಗಿವೆ.
ಕಳೆದ ಎರಡು ದಿನದಲ್ಲಿ 20ಕ್ಕೂ ಹೆಚ್ಚು ಅಪಘಾತ ಈ ಹಂಪ್ನಿಂದ ಆಗಿದ್ದು, ಮೂರು ಸವಾರರು ಮೃತಪಟ್ಟಿದ್ದಾರೆ. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರ ಗಮನಕ್ಕೆ ತಾರದೆ ಅವೈಜ್ಞಾನಿಕವಾಗಿ ಹಂಪ್ ನಿರ್ಮಿಸಿದ ಪಾಲಿಕೆ ಎಂಜಿನಿಯರ್ ಸೇರಿದಂತೆ ಗುತ್ತಿಗೆದಾರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಮೂರು ಸಾವಿನ ಬಳಿಕ ಎಚ್ಚೆತ್ತ ಅಧಿಕಾರಿಗಳು ರಸ್ತೆಯಲ್ಲಿ ನಿರ್ಮಿಸಿದ್ದ ಹಂಪ್ಗಳನ್ನು ತೆರವುಗೊಳಿಸಿದ್ದಾರೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…