ಜಿಲ್ಲೆಗಳು

ಫೆ.26ರಂದು ತೇಜಸ್ವಿಯ ‘ಅಣ್ಣನ ನೆನಪು’ ಕೃತಿ ಆಧರಿಸಿದ ನಾಟಕ ಪ್ರದರ್ಶನ

ಮೈಸೂರು: ಬೆಂಗಳೂರಿನ ಪ್ರವರ ಥಿಯೇಟರ್ ರಂಗ ತಂಡದ ವತಿಯಿಂದ ಫೆ.26ರಂದು ಸಂಜೆ 4 ಮತ್ತು 7ಕ್ಕೆ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ‘ಅಣ್ಣನ ನೆನಪು’ ಕೃತಿ ಆಧರಿಸಿದ ಸಾಕ್ಷ್ಯ ನಾಟಕ ಪ್ರದರ್ಶನ ನಡೆಯಲಿದೆ ಎಂದು ನಿರ್ದೇಶಕ ಹನು ರಾಮ ಸಂಜೀವ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃತಿಯನ್ನು ಕರಣಂ ಪವನ್ ಪ್ರಸಾದ್ ರಂಗರೂಪಕ್ಕಿಳಿಸಿದ್ದು, ಅಕ್ಷಯ್ ಭೋಂಸ್ಲೆ ಸಂಗೀತ, ಅಶ್ವಿನಿ ಗಲಗಲಿ ಮತ್ತು ವಿಭಾ ಗುರುರಾಜ್ ಗಾಯನ, ಸಿ.ಎನ್.ಚೇತನ್ ನಿರ್ವಹಣೆ, ಭಟ್ ಕಾರ್ತಿಕೇಯ ಪ್ರಚಾರ ಕಲೆ, ಮಾಲತೇಶ ಬಡಿಗೇರ ಪ್ರಸಾಧನ ಮತ್ತು ಸೂರ್ಯ ಸಾಥಿ ಅವರು ಬೆಳಕು ನೀಡಲಿದ್ದಾರೆ. ಮಹೇಶ್ ಶಿವಣ್ನ, ಗೋಕುಲ ಸಹೃದಯ, ಬಿ.ಇ.ಭರತ್, ಸೋಹನ್ ನಾಗರಾಜು, ನಾಗಶ್ರೀ ಪುಟ್ಟರಾಜು, ಸುಭಿಕ್ಷ, ನಿಖಿಲ್ ಪ್ರಭು, ವೈ.ಎಂ.ಹೇಮಂತ್ ಪಾತ್ರಧಾರಗಳಾಗಿದ್ದಾರೆ ಎಂದು ಹೇಳಿದರು. ಇದೆ ವೇಳೆ ನಾಟಕದ ಭಿತ್ತಿಚಿತ್ರವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಂಗೀತ ನಿರ್ದೇಶಕ ಅಕ್ಷ್‌ಂ ಭೋಂಸ್ಲೆ, ಸಿ.ಎನ್.ಚೇತನ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

2 hours ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

2 hours ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

2 hours ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

16 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

16 hours ago