ಮೈಸೂರು: ಬೆಂಗಳೂರಿನ ಪ್ರವರ ಥಿಯೇಟರ್ ರಂಗ ತಂಡದ ವತಿಯಿಂದ ಫೆ.26ರಂದು ಸಂಜೆ 4 ಮತ್ತು 7ಕ್ಕೆ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ‘ಅಣ್ಣನ ನೆನಪು’ ಕೃತಿ ಆಧರಿಸಿದ ಸಾಕ್ಷ್ಯ ನಾಟಕ ಪ್ರದರ್ಶನ ನಡೆಯಲಿದೆ ಎಂದು ನಿರ್ದೇಶಕ ಹನು ರಾಮ ಸಂಜೀವ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃತಿಯನ್ನು ಕರಣಂ ಪವನ್ ಪ್ರಸಾದ್ ರಂಗರೂಪಕ್ಕಿಳಿಸಿದ್ದು, ಅಕ್ಷಯ್ ಭೋಂಸ್ಲೆ ಸಂಗೀತ, ಅಶ್ವಿನಿ ಗಲಗಲಿ ಮತ್ತು ವಿಭಾ ಗುರುರಾಜ್ ಗಾಯನ, ಸಿ.ಎನ್.ಚೇತನ್ ನಿರ್ವಹಣೆ, ಭಟ್ ಕಾರ್ತಿಕೇಯ ಪ್ರಚಾರ ಕಲೆ, ಮಾಲತೇಶ ಬಡಿಗೇರ ಪ್ರಸಾಧನ ಮತ್ತು ಸೂರ್ಯ ಸಾಥಿ ಅವರು ಬೆಳಕು ನೀಡಲಿದ್ದಾರೆ. ಮಹೇಶ್ ಶಿವಣ್ನ, ಗೋಕುಲ ಸಹೃದಯ, ಬಿ.ಇ.ಭರತ್, ಸೋಹನ್ ನಾಗರಾಜು, ನಾಗಶ್ರೀ ಪುಟ್ಟರಾಜು, ಸುಭಿಕ್ಷ, ನಿಖಿಲ್ ಪ್ರಭು, ವೈ.ಎಂ.ಹೇಮಂತ್ ಪಾತ್ರಧಾರಗಳಾಗಿದ್ದಾರೆ ಎಂದು ಹೇಳಿದರು. ಇದೆ ವೇಳೆ ನಾಟಕದ ಭಿತ್ತಿಚಿತ್ರವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಂಗೀತ ನಿರ್ದೇಶಕ ಅಕ್ಷ್ಂ ಭೋಂಸ್ಲೆ, ಸಿ.ಎನ್.ಚೇತನ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…