ಮೈಸೂರು: ನಗರದ ಲಲಿತಮಹಲ್ ಅರಮನೆ ಬಳಿ ಇರುವ ಮೈದಾನದಲ್ಲಿ 5 ಲಕ್ಷಕ್ಕೂ ಅಧಿಕ ರುದ್ರಾಕ್ಷಿಗಳಿಂದ ನಿರ್ಮಿಸಿರುವ ತ್ರೀಡಿಯಿಂದ ಕಣ್ಮನ ಸೆಳೆಯುವ 21 ಅಡಿ ಎತ್ತರದ ಶಿವಲಿಂಗ ನಿರ್ಮಿಸಲಾಗಿದೆ.
ಮಹಾಶಿವರಾತ್ರಿ ಅಂಗವಾಗಿ ಫೆ.22ರವರೆಗೆ ಹರಿದ್ವಾರದಿಂದ ತಂದು ನಿರ್ಮಿಸಿರುವ ರುದ್ರಾಕ್ಷಿಯ ಬೃಹತ್ ಶಿವಲಿಂಗ ಸಾರ್ವಜನಿಕರ ಉಚಿತ ದರ್ಶನಕ್ಕೆ ನಿತ್ಯ ಬೆಳಿಗ್ಗೆ 8ರಿಂದ ರಾತ್ರಿ 9ರವರೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಆಲನಹಳ್ಳಿ ಸೇವಾ ಕೇಂದ್ರದಿಂದ ಹಿವಾಚ್ಛಾದಿತ ಕೈಲಾಸ ಪರ್ವತದೊಂದಿಗೆ ನಿರ್ಮಾಣಗೊಂಡಿರುವ ಶಿವಲಿಂಗ ತ್ರೀಡಿ ಎಫೆಕ್ಟ್ ಇರುವುದು ವಿಶೇಷ ಹಿಮಾಲಯದ ಪ್ರತಿಕೃತಿ ನಿರ್ಮಿಸಿ, ಅದರ ಮೇಲೆ 21 ಅಡಿ ಎತ್ತರ, 20 ಅಡಿ ಅಗಲದ ಶಿವಲಿಂಗವನ್ನು 5,16,108 ರುದ್ರಾಕ್ಷಿಗಳಿಂದ ನಿರ್ಮಿಸಲಾಗಿದ 100 100 ಅಡಿ ಪ್ರದೇಶದಲ್ಲಿ ಪಿಒಪಿ, ಮರದ ಕಟ್ಟಿಗೆ ಗೋಣಿಯನ್ನು ಬಳಸಿ ಹಿವಾಚ್ಛಾದಿತ ಕೈಲಾಸ ಪರ್ವತದ ಪ್ರತಿಕೃತಿ ಸಿದ್ಧವಾಗಿದೆ. 50 ಕ್ಕೂ ಅಧಿಕ ಮಂದಿ ವಾರಕ್ಕೂ ಹೆಚ್ಚು ಕಾಲ ಪ್ರತಿಕೃತಿ ನಿರ್ಮಾಣ ಕಾರ್ಯ ನಡೆಸಿದ್ದಾರೆ.
ದ್ವಾದಶ ಲಿಂಗದರ್ಶನ: ಬೃಹತ್ ರುದ್ರಾಕ್ಷಿ ಶಿವಲಿಂಗದ ಜತೆಗೆ ದ್ವಾದಶ ಲಿಂಗ ದರ್ಶನ ಮಾದರಿಯನ್ನು ಪ್ರತಿಷ್ಠಾಪಿಸಲಾಗಿದೆ. ಮಹಾಶಿವರಾತ್ರಿಯಂದು ಭಾರತದಾದ್ಯಂತ ಜನರು ಹಿಮಾಲಯ, ಕೇದಾರನಾಥ, ಕಾಶಿ ವಿಶ್ವನಾಥ ಸೇರಿದಂತೆ ಸ್ಥಳೀಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಅದರಂತೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಅಷ್ಟು ದೂರ ತೆರಳಲು ಸಾಧ್ಯವಾಗದ ಜನರಿಗೆ ಅಲ್ಲಿನ ಪ್ರತಿಕೃತಿಗಳನ್ನು ಮೈಸೂರಿನ ಕೆಲವೆಡೆ ವಿಭಿನ್ನವಾಗಿ ನಿರ್ಮಿಸಿ, ವಿಶೇಷ ಅನುಭವವನ್ನು ನೀಡುತ್ತಿದೆ. ಕಳೆದ ಬಾರಿ ಬೃಹತ್ ತೆಂಗಿನಕಾಯಿ ಶಿವಲಿಂಗ ನಿರ್ಮಾಣ ಮಾಡಿ ಎಲ್ಲರ ಗಮನ ಸೆಳೆದಿತ್ತು. ಕೈಲಾಸ ಪರ್ವತದ ಮಾದರಿಯ ಒಳ ಭಾಗದಲ್ಲಿ ಧ್ಯಾನ ಗುಹೆಯೂ ನಿರ್ಮಾಣಗೊಳ್ಳುತ್ತಿದ್ದು, ಅದರ ಸುತ್ತಲೂ ಜೋರ್ತಿಲಿಂಗ ಮತ್ತು ಆಧ್ಯಾತ್ಮಿಕ ಚಿಂತನೆ, ಶಿವ ಚರಿತ್ರೆಗಳು ಇವೆ ಎಂದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ.ರಂಗನಾಥ್ ತಿಳಿಸಿದ್ದಾರೆ.
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…
ಹೊಸದಿಲ್ಲಿ : ಕಳೆದ ಡಿಸೆಂಬರ್ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…
ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್ಸಿ…
ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…
ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…
ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…