ಮೈಸೂರು: ನಗರದ ಲಲಿತಮಹಲ್ ಅರಮನೆ ಬಳಿ ಇರುವ ಮೈದಾನದಲ್ಲಿ 5 ಲಕ್ಷಕ್ಕೂ ಅಧಿಕ ರುದ್ರಾಕ್ಷಿಗಳಿಂದ ನಿರ್ಮಿಸಿರುವ ತ್ರೀಡಿಯಿಂದ ಕಣ್ಮನ ಸೆಳೆಯುವ 21 ಅಡಿ ಎತ್ತರದ ಶಿವಲಿಂಗ ನಿರ್ಮಿಸಲಾಗಿದೆ.
ಮಹಾಶಿವರಾತ್ರಿ ಅಂಗವಾಗಿ ಫೆ.22ರವರೆಗೆ ಹರಿದ್ವಾರದಿಂದ ತಂದು ನಿರ್ಮಿಸಿರುವ ರುದ್ರಾಕ್ಷಿಯ ಬೃಹತ್ ಶಿವಲಿಂಗ ಸಾರ್ವಜನಿಕರ ಉಚಿತ ದರ್ಶನಕ್ಕೆ ನಿತ್ಯ ಬೆಳಿಗ್ಗೆ 8ರಿಂದ ರಾತ್ರಿ 9ರವರೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಆಲನಹಳ್ಳಿ ಸೇವಾ ಕೇಂದ್ರದಿಂದ ಹಿವಾಚ್ಛಾದಿತ ಕೈಲಾಸ ಪರ್ವತದೊಂದಿಗೆ ನಿರ್ಮಾಣಗೊಂಡಿರುವ ಶಿವಲಿಂಗ ತ್ರೀಡಿ ಎಫೆಕ್ಟ್ ಇರುವುದು ವಿಶೇಷ ಹಿಮಾಲಯದ ಪ್ರತಿಕೃತಿ ನಿರ್ಮಿಸಿ, ಅದರ ಮೇಲೆ 21 ಅಡಿ ಎತ್ತರ, 20 ಅಡಿ ಅಗಲದ ಶಿವಲಿಂಗವನ್ನು 5,16,108 ರುದ್ರಾಕ್ಷಿಗಳಿಂದ ನಿರ್ಮಿಸಲಾಗಿದ 100 100 ಅಡಿ ಪ್ರದೇಶದಲ್ಲಿ ಪಿಒಪಿ, ಮರದ ಕಟ್ಟಿಗೆ ಗೋಣಿಯನ್ನು ಬಳಸಿ ಹಿವಾಚ್ಛಾದಿತ ಕೈಲಾಸ ಪರ್ವತದ ಪ್ರತಿಕೃತಿ ಸಿದ್ಧವಾಗಿದೆ. 50 ಕ್ಕೂ ಅಧಿಕ ಮಂದಿ ವಾರಕ್ಕೂ ಹೆಚ್ಚು ಕಾಲ ಪ್ರತಿಕೃತಿ ನಿರ್ಮಾಣ ಕಾರ್ಯ ನಡೆಸಿದ್ದಾರೆ.
ದ್ವಾದಶ ಲಿಂಗದರ್ಶನ: ಬೃಹತ್ ರುದ್ರಾಕ್ಷಿ ಶಿವಲಿಂಗದ ಜತೆಗೆ ದ್ವಾದಶ ಲಿಂಗ ದರ್ಶನ ಮಾದರಿಯನ್ನು ಪ್ರತಿಷ್ಠಾಪಿಸಲಾಗಿದೆ. ಮಹಾಶಿವರಾತ್ರಿಯಂದು ಭಾರತದಾದ್ಯಂತ ಜನರು ಹಿಮಾಲಯ, ಕೇದಾರನಾಥ, ಕಾಶಿ ವಿಶ್ವನಾಥ ಸೇರಿದಂತೆ ಸ್ಥಳೀಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಅದರಂತೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಅಷ್ಟು ದೂರ ತೆರಳಲು ಸಾಧ್ಯವಾಗದ ಜನರಿಗೆ ಅಲ್ಲಿನ ಪ್ರತಿಕೃತಿಗಳನ್ನು ಮೈಸೂರಿನ ಕೆಲವೆಡೆ ವಿಭಿನ್ನವಾಗಿ ನಿರ್ಮಿಸಿ, ವಿಶೇಷ ಅನುಭವವನ್ನು ನೀಡುತ್ತಿದೆ. ಕಳೆದ ಬಾರಿ ಬೃಹತ್ ತೆಂಗಿನಕಾಯಿ ಶಿವಲಿಂಗ ನಿರ್ಮಾಣ ಮಾಡಿ ಎಲ್ಲರ ಗಮನ ಸೆಳೆದಿತ್ತು. ಕೈಲಾಸ ಪರ್ವತದ ಮಾದರಿಯ ಒಳ ಭಾಗದಲ್ಲಿ ಧ್ಯಾನ ಗುಹೆಯೂ ನಿರ್ಮಾಣಗೊಳ್ಳುತ್ತಿದ್ದು, ಅದರ ಸುತ್ತಲೂ ಜೋರ್ತಿಲಿಂಗ ಮತ್ತು ಆಧ್ಯಾತ್ಮಿಕ ಚಿಂತನೆ, ಶಿವ ಚರಿತ್ರೆಗಳು ಇವೆ ಎಂದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ.ರಂಗನಾಥ್ ತಿಳಿಸಿದ್ದಾರೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…