ಮೈಸೂರು: ನಗರದ ಲಲಿತಮಹಲ್ ಅರಮನೆ ಬಳಿ ಇರುವ ಮೈದಾನದಲ್ಲಿ 5 ಲಕ್ಷಕ್ಕೂ ಅಧಿಕ ರುದ್ರಾಕ್ಷಿಗಳಿಂದ ನಿರ್ಮಿಸಿರುವ ತ್ರೀಡಿಯಿಂದ ಕಣ್ಮನ ಸೆಳೆಯುವ 21 ಅಡಿ ಎತ್ತರದ ಶಿವಲಿಂಗ ನಿರ್ಮಿಸಲಾಗಿದೆ.
ಮಹಾಶಿವರಾತ್ರಿ ಅಂಗವಾಗಿ ಫೆ.22ರವರೆಗೆ ಹರಿದ್ವಾರದಿಂದ ತಂದು ನಿರ್ಮಿಸಿರುವ ರುದ್ರಾಕ್ಷಿಯ ಬೃಹತ್ ಶಿವಲಿಂಗ ಸಾರ್ವಜನಿಕರ ಉಚಿತ ದರ್ಶನಕ್ಕೆ ನಿತ್ಯ ಬೆಳಿಗ್ಗೆ 8ರಿಂದ ರಾತ್ರಿ 9ರವರೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಆಲನಹಳ್ಳಿ ಸೇವಾ ಕೇಂದ್ರದಿಂದ ಹಿವಾಚ್ಛಾದಿತ ಕೈಲಾಸ ಪರ್ವತದೊಂದಿಗೆ ನಿರ್ಮಾಣಗೊಂಡಿರುವ ಶಿವಲಿಂಗ ತ್ರೀಡಿ ಎಫೆಕ್ಟ್ ಇರುವುದು ವಿಶೇಷ ಹಿಮಾಲಯದ ಪ್ರತಿಕೃತಿ ನಿರ್ಮಿಸಿ, ಅದರ ಮೇಲೆ 21 ಅಡಿ ಎತ್ತರ, 20 ಅಡಿ ಅಗಲದ ಶಿವಲಿಂಗವನ್ನು 5,16,108 ರುದ್ರಾಕ್ಷಿಗಳಿಂದ ನಿರ್ಮಿಸಲಾಗಿದ 100 100 ಅಡಿ ಪ್ರದೇಶದಲ್ಲಿ ಪಿಒಪಿ, ಮರದ ಕಟ್ಟಿಗೆ ಗೋಣಿಯನ್ನು ಬಳಸಿ ಹಿವಾಚ್ಛಾದಿತ ಕೈಲಾಸ ಪರ್ವತದ ಪ್ರತಿಕೃತಿ ಸಿದ್ಧವಾಗಿದೆ. 50 ಕ್ಕೂ ಅಧಿಕ ಮಂದಿ ವಾರಕ್ಕೂ ಹೆಚ್ಚು ಕಾಲ ಪ್ರತಿಕೃತಿ ನಿರ್ಮಾಣ ಕಾರ್ಯ ನಡೆಸಿದ್ದಾರೆ.
ದ್ವಾದಶ ಲಿಂಗದರ್ಶನ: ಬೃಹತ್ ರುದ್ರಾಕ್ಷಿ ಶಿವಲಿಂಗದ ಜತೆಗೆ ದ್ವಾದಶ ಲಿಂಗ ದರ್ಶನ ಮಾದರಿಯನ್ನು ಪ್ರತಿಷ್ಠಾಪಿಸಲಾಗಿದೆ. ಮಹಾಶಿವರಾತ್ರಿಯಂದು ಭಾರತದಾದ್ಯಂತ ಜನರು ಹಿಮಾಲಯ, ಕೇದಾರನಾಥ, ಕಾಶಿ ವಿಶ್ವನಾಥ ಸೇರಿದಂತೆ ಸ್ಥಳೀಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಅದರಂತೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಅಷ್ಟು ದೂರ ತೆರಳಲು ಸಾಧ್ಯವಾಗದ ಜನರಿಗೆ ಅಲ್ಲಿನ ಪ್ರತಿಕೃತಿಗಳನ್ನು ಮೈಸೂರಿನ ಕೆಲವೆಡೆ ವಿಭಿನ್ನವಾಗಿ ನಿರ್ಮಿಸಿ, ವಿಶೇಷ ಅನುಭವವನ್ನು ನೀಡುತ್ತಿದೆ. ಕಳೆದ ಬಾರಿ ಬೃಹತ್ ತೆಂಗಿನಕಾಯಿ ಶಿವಲಿಂಗ ನಿರ್ಮಾಣ ಮಾಡಿ ಎಲ್ಲರ ಗಮನ ಸೆಳೆದಿತ್ತು. ಕೈಲಾಸ ಪರ್ವತದ ಮಾದರಿಯ ಒಳ ಭಾಗದಲ್ಲಿ ಧ್ಯಾನ ಗುಹೆಯೂ ನಿರ್ಮಾಣಗೊಳ್ಳುತ್ತಿದ್ದು, ಅದರ ಸುತ್ತಲೂ ಜೋರ್ತಿಲಿಂಗ ಮತ್ತು ಆಧ್ಯಾತ್ಮಿಕ ಚಿಂತನೆ, ಶಿವ ಚರಿತ್ರೆಗಳು ಇವೆ ಎಂದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ.ರಂಗನಾಥ್ ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…