ಜಿಲ್ಲೆಗಳು

ಮಲೆಯಾಳ ಸವಾಜದಿಂದ ವೈವಿಧ್ಯಮಯ ಓಣಂ ಆಚರಣೆ

ಚಾಮರಾಜನಗರ: ನಗರದ ಸಂತ ಪೌಲರ ಸಮುದಾಯ ಭವನದಲ್ಲಿ ವೈವಿದ್ಯಮಯ ಓಣಂ ಹಬ್ಬವನ್ನು ಆಚರಿಸಲಾಯಿತು.

ಜಿಲ್ಲಾ ಮಲೆಯಾಳ ಸವಾಜದಿಂದ ನಡೆದ ಕಾರ್ಯಕ್ರಮದಲ್ಲಿ ಹೂವಿನ ರಂಗೋಲಿ ಸಿಂಗಾರಿಮೇಳ ಓಣಂನ ಪ್ರಮುಖ ಆಕರ್ಷಣೆಯಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಸವಾಜದ ಅಧ್ಯಕ್ಷ ರಾಜು ವರ್ಗೀಸ್ ಮಾತನಾಡಿ, ನಾವು ಮೂಲತಃ ಕೇರಳದವರಾದರೂ ಈಗ ಜಿಲ್ಲೆಯಲ್ಲಿ ನೆಲೆಸಿದ್ದೇವೆ. ಕನ್ನಡ ಭಾಷೆ ಕಲಿಯಬೇಕು. ಕನ್ನಡ ಸಂಸ್ಕೃತಿ ಅಳವಡಿಸಿಕೊಳ್ಳಬೇಕು. ಕನ್ನಡಿಗರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

೨೦೦೮ರಲ್ಲಿ ಜಿಲ್ಲಾ ಮಲೆಯಾಳ ಸಮಾಜ ಸ್ಥಾಪನೆಯಾಯಿತು. ಆದರೆ ೨೦೧೮ ರಲ್ಲಿ ನೋಂದಣಿಯಾಯಿತು. ಅಲ್ಲಿಂದ ಓಣಂ ಆಚರಿಸಿಕೊಂಡು ಬರುತ್ತಿದ್ದೇವೆ. ಇದರ ಜೊತೆಗೆ ಸೇವಾ ಕಾರ್ಯಗಳನ್ನು ನಡೆಸುತ್ತಿದ್ದೇವೆ. ಶವಸಾಗಾಣಿಕೆ ವಾಹನವನ್ನು ಎಲ್ಲ ವರ್ಗದ ಬಡವರಿಗೆ ಉಚಿತವಾಗಿ ಒದಗಿಸುತ್ತಿದ್ದೇವೆ ಎಂದು ತಿಳಿಸಿದರು.

ಮೂಡಲಧ್ವನಿ ವೃದ್ಧಾಶ್ರಮದ ಶಂಕರ್ ಹಾಗೂ ಗೋಪಕುಮಾರ್, ಸ್ವಾಮಿನಾಥನ್, ಸ್ವಾಮಿನಾಥ ಅಯ್ಯರ್, ಸುಬ್ರಹ್ಮಣ್ಯ, ವೇಣುಗೋಪಾಲ್ ರಾಜಮ್ಮ, ಗಂಗಾಧರನ್, ಶಾಂತಮ್ಮ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.
ಸವಾಜದ ಕಾರ್ಯದರ್ಶಿ ಸೆಬಾಸ್ಟಿಯನ್ ಜೋಕಿಂ, ಸಿ.ಆರ್.ಹರೀಶ್, ಮೊಹಮ್ಮದ್ ಆಲಿ, ಸುಧಾ, ರವಿ ಮೊದಲಾದವರು ಹಾಜರಿದ್ದರು.

andolana

Recent Posts

ಶಿವಾನಂದಪುರಿ ಶ್ರೀಗಳಿಗೆ ಕನಕ ಭವನ ನಿರ್ವಹಣೆ ಹೊಣೆ

ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…

2 hours ago

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…

2 hours ago

ಹುಲಿ ಸೆರೆಗೆ ಬಂತು ಥರ್ಮಲ್ ಡ್ರೋನ್‌

ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…

2 hours ago

ಕೃಷಿ ಮೇಳಕ್ಕೆ 10 ಲಕ್ಷ ಜನ ಭೇಟಿ

ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ  ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…

2 hours ago

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ಮಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

12 hours ago