ಜಿಲ್ಲೆಗಳು

ವಂದೇ ಮಾತರಂ ಹಾಡಿನ ಮೂಲಕ ಯೋಗಾಸನಗಳ ಪ್ರದರ್ಶನದೊಂದಿಗೆ ಯೋಗ ದಸರಾಗೆ ಚಾಲನೆ

ಮೈಸೂರು : ವಿಶ್ವವಿಖ್ಯಾ ಮೈಸೂರು ದಸರಾ 2022ರ ಅಂಗವಾಗಿ ಇಂದು ನಗರದ ಓವೆಲ್ ಮೈದಾನದ ಆವರಣದಲ್ಲಿ ಮಾ ತುಜೇ ಸಲಾಮ್…, ವಂದೇ ಮಾತರಂ.., ಎಂಬ ಹಾಡಿಗೆ ವಿವಿಧ ಯೋಗಾಸನಗಳ ಪ್ರದರ್ಶನದೊಂದಿಗೆ ನೃತ್ಯ ರೂಪಕದ ಮೂಲಕ ಯೋಗ ದಸರಾಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಲ್.ನಾಗೇಂದ್ರ, ಅನೇಕ ಸಮಸ್ಯಗಳಿಗೆ ಯೋಗ ಉತ್ತಮ ಪರಿಹಾರ. ನಿಯಮಿತವಾಗಿ ಯೋಗವನ್ನು ಮಾಡುವ ಮೂಲಕ ಜನರು ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಬಹುದು ಎಂದರು. ಈ ಹಿಂದೆ ರಾಜರುಗಳು  ಬೇರೆ ಬೇರೆ ರಾಜ್ಯಗಳಿಂದ ಯೋಗ ಗುರುಗಳನ್ನು ಕರೆಯಿಸಿ ಮೈಸೂರಿಗರಿಗೆ ಯೋಗದ ತರಬೇತಿ ಕೊಡಿಸಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಯೋಗ ದಸರಾ ಸಮಿತಿ ಅಧ್ಯಕ್ಷ ಬಾಲಕೃಷ್ಣ, ಡಾ.ಚಂದ್ರಶೇಖರ್, ಶ್ರೀಹರಿ, ಡಾ.ಒಉಷ್ಪ, ಡಾ.ಕುಸುಮ, ಗಜಾನನ ಹೆಗಡೆ, ಡಾ.ಮಹೇಶ್, ದೇವರಾಜ್ ಮುಂತಾದವರು ಹಾಜರಿದ್ದರು. ವಿವಿಧ ೧೦ ಸಂಸ್ಥೆಗಳ ವಿದ್ಯಾರ್ಥಿಗಳು ನೃತ್ಯ ರೂಪಕ ನಡೆಸಿಕೊಟ್ಟರು. ಸಾಧಕರನ್ನು ಸನ್ಮಾನಿಸಲಾಯಿತು.

andolanait

Recent Posts

ಅಕ್ರಮ ಗಾಂಜಾ ಮಾರಾಟ : ಮಹಿಳೆ ಪೊಲೀಸ್ ವಶಕ್ಕೆ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

35 mins ago

ಮತಗಳ್ಳತನದ ಹೋರಾಟದಲ್ಲಿ ರಾಜಕೀಯ ಉದ್ದೇಶವಿಲ್ಲ : ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…

1 hour ago

10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…

3 hours ago

ವರ್ಷಾಂತ್ಯಕ್ಕೂ ಸಫಾರಿ ಪುನಾರಂಭ ಸಾಧ್ಯತೆ ಕ್ಷೀಣ

ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…

3 hours ago

ಪ್ರತಿಭಟನೆ ಮಾಹಿತಿ ತಿಳಿದು ಕೆರೆಗೆ ನೀರು ತುಂಬಿಸಿದ ಅಧಿಕಾರಿಗಳು!

ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…

6 hours ago

ಓದುಗರ ಪತ್ರ | ರಸ್ತೆ ದುರಸ್ತಿ ಮಾಡಿ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…

6 hours ago