ಜಿಲ್ಲೆಗಳು

ವಂದೇ ಮಾತರಂ ಹಾಡಿನ ಮೂಲಕ ಯೋಗಾಸನಗಳ ಪ್ರದರ್ಶನದೊಂದಿಗೆ ಯೋಗ ದಸರಾಗೆ ಚಾಲನೆ

ಮೈಸೂರು : ವಿಶ್ವವಿಖ್ಯಾ ಮೈಸೂರು ದಸರಾ 2022ರ ಅಂಗವಾಗಿ ಇಂದು ನಗರದ ಓವೆಲ್ ಮೈದಾನದ ಆವರಣದಲ್ಲಿ ಮಾ ತುಜೇ ಸಲಾಮ್…, ವಂದೇ ಮಾತರಂ.., ಎಂಬ ಹಾಡಿಗೆ ವಿವಿಧ ಯೋಗಾಸನಗಳ ಪ್ರದರ್ಶನದೊಂದಿಗೆ ನೃತ್ಯ ರೂಪಕದ ಮೂಲಕ ಯೋಗ ದಸರಾಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಲ್.ನಾಗೇಂದ್ರ, ಅನೇಕ ಸಮಸ್ಯಗಳಿಗೆ ಯೋಗ ಉತ್ತಮ ಪರಿಹಾರ. ನಿಯಮಿತವಾಗಿ ಯೋಗವನ್ನು ಮಾಡುವ ಮೂಲಕ ಜನರು ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಬಹುದು ಎಂದರು. ಈ ಹಿಂದೆ ರಾಜರುಗಳು  ಬೇರೆ ಬೇರೆ ರಾಜ್ಯಗಳಿಂದ ಯೋಗ ಗುರುಗಳನ್ನು ಕರೆಯಿಸಿ ಮೈಸೂರಿಗರಿಗೆ ಯೋಗದ ತರಬೇತಿ ಕೊಡಿಸಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಯೋಗ ದಸರಾ ಸಮಿತಿ ಅಧ್ಯಕ್ಷ ಬಾಲಕೃಷ್ಣ, ಡಾ.ಚಂದ್ರಶೇಖರ್, ಶ್ರೀಹರಿ, ಡಾ.ಒಉಷ್ಪ, ಡಾ.ಕುಸುಮ, ಗಜಾನನ ಹೆಗಡೆ, ಡಾ.ಮಹೇಶ್, ದೇವರಾಜ್ ಮುಂತಾದವರು ಹಾಜರಿದ್ದರು. ವಿವಿಧ ೧೦ ಸಂಸ್ಥೆಗಳ ವಿದ್ಯಾರ್ಥಿಗಳು ನೃತ್ಯ ರೂಪಕ ನಡೆಸಿಕೊಟ್ಟರು. ಸಾಧಕರನ್ನು ಸನ್ಮಾನಿಸಲಾಯಿತು.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

4 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

5 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

5 hours ago

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

1 day ago