ಜಿಲ್ಲೆಗಳು

ವಂದೇ ಮಾತರಂ ಹಾಡಿನ ಮೂಲಕ ಯೋಗಾಸನಗಳ ಪ್ರದರ್ಶನದೊಂದಿಗೆ ಯೋಗ ದಸರಾಗೆ ಚಾಲನೆ

ಮೈಸೂರು : ವಿಶ್ವವಿಖ್ಯಾ ಮೈಸೂರು ದಸರಾ 2022ರ ಅಂಗವಾಗಿ ಇಂದು ನಗರದ ಓವೆಲ್ ಮೈದಾನದ ಆವರಣದಲ್ಲಿ ಮಾ ತುಜೇ ಸಲಾಮ್…, ವಂದೇ ಮಾತರಂ.., ಎಂಬ ಹಾಡಿಗೆ ವಿವಿಧ ಯೋಗಾಸನಗಳ ಪ್ರದರ್ಶನದೊಂದಿಗೆ ನೃತ್ಯ ರೂಪಕದ ಮೂಲಕ ಯೋಗ ದಸರಾಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎಲ್.ನಾಗೇಂದ್ರ, ಅನೇಕ ಸಮಸ್ಯಗಳಿಗೆ ಯೋಗ ಉತ್ತಮ ಪರಿಹಾರ. ನಿಯಮಿತವಾಗಿ ಯೋಗವನ್ನು ಮಾಡುವ ಮೂಲಕ ಜನರು ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳಬಹುದು ಎಂದರು. ಈ ಹಿಂದೆ ರಾಜರುಗಳು  ಬೇರೆ ಬೇರೆ ರಾಜ್ಯಗಳಿಂದ ಯೋಗ ಗುರುಗಳನ್ನು ಕರೆಯಿಸಿ ಮೈಸೂರಿಗರಿಗೆ ಯೋಗದ ತರಬೇತಿ ಕೊಡಿಸಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಯೋಗ ದಸರಾ ಸಮಿತಿ ಅಧ್ಯಕ್ಷ ಬಾಲಕೃಷ್ಣ, ಡಾ.ಚಂದ್ರಶೇಖರ್, ಶ್ರೀಹರಿ, ಡಾ.ಒಉಷ್ಪ, ಡಾ.ಕುಸುಮ, ಗಜಾನನ ಹೆಗಡೆ, ಡಾ.ಮಹೇಶ್, ದೇವರಾಜ್ ಮುಂತಾದವರು ಹಾಜರಿದ್ದರು. ವಿವಿಧ ೧೦ ಸಂಸ್ಥೆಗಳ ವಿದ್ಯಾರ್ಥಿಗಳು ನೃತ್ಯ ರೂಪಕ ನಡೆಸಿಕೊಟ್ಟರು. ಸಾಧಕರನ್ನು ಸನ್ಮಾನಿಸಲಾಯಿತು.

andolanait

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

1 hour ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

1 hour ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

2 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

2 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

3 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

11 hours ago