ಜಿಲ್ಲೆಗಳು

ಪ್ರಜಾಪ್ರಭುತ್ವಕ್ಕಾಗಿ ಒಂದು ಗಂಟೆ..

22, 23ರಂದು ಯುವ ಮತದಾರರ ನೋಂದಣಿಗೆ‌ ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮ

ಮೈಸೂರು: ಯುವ ಮತದಾರರ ನೋಂದಣಿ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ನವೆಂಬರ್ 22 ಹಾಗೂ 23 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಅರ್ಹ ಯುವ ಮತದಾರರ ನೋಂದಣಿ ಮಾಡಿಸಲು ‘ ‘ ‘ಪ್ರಜಾಪ್ರಭುತ್ವಕ್ಕಾಗಿ ಒಂದು ಯುವ ಮತದಾರರ ನೋಂದಣಿಗೆ ವಿಶೇಷ ಅಭಿಯಾನ ‘ ಕೈಗೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮತದಾರರ ನೋಂದಣಿಗೆ ಸಂಬಂಧಿಸಿದಂತೆ ಪದವಿ ಪೂರ್ವ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಅಧೀನದಲ್ಲಿ ಬರುವ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ನೇಮಕಗೊಂಡ ನೋಡಲ್ ಅಧಿಕಾರಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಯುವ ಮತದಾರರ ನೋಂದಣಿಯಾಗಿರುವ ಪ್ರಮಾಣ ಮೈಸೂರು ಜಿಲ್ಲೆಯಲ್ಲಿ ಕಡಿಮೆ ಇರುವ ಹಿನ್ನೆಲೆಯಲ್ಲಿ ಅರ್ಹ ಯುವ ಮತದಾರರ ನೋಂದಣಿಯನ್ನು ಹೆಚ್ಚಿಸಲು ಹಾಗೂ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಕೈ ಬಿಟ್ಟು ಹೋಗದಂತೆ ಕ್ರಮ ವಹಿಸಬೇಕಾಗಿರುತ್ತದೆ. ಈ ಸಂಬಂಧ ಹೆಚ್ಚಿನ ಆದ್ಯತೆ ನೀಡುವ ಅವಶ್ಯಕತೆ ಇರುತ್ತದೆ ಎಂದು ಅವರು ತಿಳಿಸಿದರು.

ಜಿಲ್ಲೆಯ ಪದವಿ ಪೂರ್ವ ಮಟ್ಟದ ಎಲ್ಲಾ ಕಾಲೇಜುಗಳಲ್ಲಿ, ಎಲ್ಲಾ ವೈದ್ಯಕೀಯ ಶಿಕ್ಷಣ ಕಾಲೇಜುಗಳಲ್ಲಿ, ಡೆಂಟಲ್ ಕಾಲೇಜು, ಆಯುರ್ವೇದ ಕಾಲೇಜು, ನರ್ಸಿಂಗ್ ಕಾಲೇಜು, ಇಂಜಿನಿಯರಿಂಗ್ ಹಾಗೂ ಡಿಪ್ಲೋಮಾ ಕಾಲೇಜು ಹಾಗೂ ಇಲಾಖೆಯ ಎಲ್ಲಾ ಹಾಸ್ಟೆಲ್‌ಗಳ ಮೂಲಕ ಅರ್ಹ ಯುವ ಮತದಾರರ ನೋಂದಣಿಗೆ ಮತ್ತು ಮಾನ್ಯ ಭಾರತ ಚುನಾವಣಾ ಆಯೋಗವು ಕಲ್ಪಿಸಿರುವ ಅವಕಾಶದಂತೆ 17+ ವಯಸ್ಸಿನ ಯುವಕರಿಗೆ ಮುಂಗಡ ಅರ್ಜಿ ಸಲ್ಲಿಸಲು ಕಲ್ಪಸಿರುವ ಸೌಲಭ್ಯದಂತೆ ನೋಂದಣಿ ಮಾಡಿಸಲು ಪ್ರಜಾ ಪ್ರಭುತ್ವಕ್ಕಾಗಿ ಒಂದು ಗಂಟೆ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಯುವ ಮತದಾರರು ತಮ್ಮು ನೋಂದಣಿ ಮಾಡಿಕೊಳ್ಳಲು ಮೊಬೈಲ್‌ಗಳಲ್ಲಿ ವೋಟರ್ಸ್ ಹೆಲ್ಪ್ಲೈನ್ ಆಪ್ (VHA) ಮೂಲಕ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ. ಈ ಸೌಲಭ್ಯವನ್ನು ಯುವ ಮತದಾರರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹಾಗೂ ವಿಶೇಷ ಅಭೀಯಾನವನ್ನು ಯಶಸ್ವಿಗೊಳಿಸಬೇಕೆಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ. ಮಂಜುನಾಥಸ್ವಾಮಿ, ಚುನಾವಣಾ ತಹಶೀಲ್ದಾರ್ ರಾಮ್‌ಪ್ರಸಾದ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

andolana

Recent Posts

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

8 mins ago

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

1 hour ago

ಆಪರೇಷನ್‌ ಶೆರಾವಲಿ ವೇಳೆ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…

2 hours ago

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…

2 hours ago

ಶಿವಾಜಿ ಗಣೇಶನ್ ಅವರ ವಾರದ ಅಂಕಣ : ಬಂಗಾಳ, ತಮಿಳುನಾಡಿನ ರಾಜಕಾರಣದಲ್ಲಿ ಬಿರುಗಾಳಿ

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…

4 hours ago

ಭಾನುವಾರದ ಹಾಡುಪಾಡು | ಆಡುಮಾತಿಗೆ ಹತ್ತಿರವಿರುವ ಕಾವ್ಯಾನುವಾದ

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…

5 hours ago