ಜಿಲ್ಲೆಗಳು

ವಿದ್ಯಾರ್ಥಿ ಜೀವನದಿಂದಲೇ ರಸ್ತೆ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ತಿಳಿದುಕೊಳ್ಳಬೇಕು : ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್

ಹನೂರು: ಶಾಲಾ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ರಸ್ತೆ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಪಟ್ಟಣ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ತಿಳಿಸಿದರು.

ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷಾ ಸಪ್ತಾಹ ಮತ್ತು 112 ಅರಿವು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಪ್ರತಿದಿನ ಐನೂರಕ್ಕೂ ಹೆಚ್ಚು ಜನರು ಮೃತಪಡುತ್ತಿದ್ದಾರೆ. ಇದರಲ್ಲಿ ಹೆಚ್ಚಿನವರು ಅಪಘಾತದಿಂದ ಮೃತಪಡುತ್ತಿರುವುದು ನೋವಿನಸಂಗತಿ.ಶಾಲಾ ವಿದ್ಯಾರ್ಥಿಗಳು 18ವರ್ಷ ತುಂಬುವ ವರೆಗೂ ವಾಹನ ಚಾಲನೆ ಮಾಡಬಾರದು ಇದು ಅಪರಾಧ. ವಾಹನ ಚಾಲಕರು ಪ್ರತಿಯೊಬ್ಬರು ಡ್ರೈವಿಂಗ್ ಲೈಸನ್ಸ್, ಇನ್ಸುರೆನ್ಸ್ ,ಹೆಲ್ಮೆಟ್ ಸೇರಿದಂತೆ ಸರ್ಕಾರ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ಸಪ್ತಾಹ ದ ಬಗ್ಗೆ ತಮ್ಮ ನೆರೆಹೊರೆಯವರಿಗೆ ಪೋಷಕರಿಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಒಂದು ನಿಗದಿತ ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕು. ಅದನ್ನು ಹೊರತುಪಡಿಸಿ ಸಮಾಜಘಾತುಕ ಕೆಲಸಗಳಲ್ಲಿ ಭಾಗಿಯಾಗಬಾರದು ಇದರಿಂದ ತಮ್ಮ ಜೀವನವೇ ಕಷ್ಟದ ಬದುಕಿನಲ್ಲಿ ಸಿಲುಕಿಕೊಳ್ಳಲಿದೆ. ಇದರಿಂದ ಪೋಷಕರಿಗೆ ಸಹ ಅತೀವ ನೋವು ಉಂಟಾಗುತ್ತದೆ . ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ಸಂದರ್ಭದಲ್ಲಿ ಓದಿಗಷ್ಟೇ ಮಹತ್ವ ನೀಡಿ ಉನ್ನತ ಸ್ಥಾನಮಾನಗಳನ್ನು ಪಡೆಯುವ ಮೂಲಕ ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸಬೇಕು ಎಂದು ತಿಳಿಸಿದರು.

ಪೊಲೀಸ್ ಇಲಾಖೆ ರಾಜ್ಯಾದ್ಯಂತ 112 ಸೇವೆ ಜಾರಿಗೆ ತಂದಿದ್ದು ,ತುರ್ತು ಸಂದರ್ಭಗಳಲ್ಲಿ, ಗಲಾಟೆ, ಅಪಘಾತ ಸೇರಿದಂತೆ ಸಮಾಜದ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಪರಾಧ ಪ್ರಕರಣಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡಿ ನಿಮ್ಮ ಹೆಸರನ್ನು ಗೌಪ್ಯವಾಗಿಡಲಾಗುವುದು.ಪೊಲೀಸ್ ಇಲಾಖೆ ಸದಾ 24 ಗಂಟೆಯೂ ನಿಮ್ಮ ಜೊತೆಯಲ್ಲಿರಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವೇಕಾನಂದ ಶಾಲೆ ಪ್ರಾಂಶುಪಾಲ ಮಧುಸೂದನ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

andolana

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

5 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

5 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

5 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

6 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

6 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

6 hours ago