ಹನೂರು: ಶಾಲಾ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ರಸ್ತೆ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಪಟ್ಟಣ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ತಿಳಿಸಿದರು.
ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷಾ ಸಪ್ತಾಹ ಮತ್ತು 112 ಅರಿವು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಪ್ರತಿದಿನ ಐನೂರಕ್ಕೂ ಹೆಚ್ಚು ಜನರು ಮೃತಪಡುತ್ತಿದ್ದಾರೆ. ಇದರಲ್ಲಿ ಹೆಚ್ಚಿನವರು ಅಪಘಾತದಿಂದ ಮೃತಪಡುತ್ತಿರುವುದು ನೋವಿನಸಂಗತಿ.ಶಾಲಾ ವಿದ್ಯಾರ್ಥಿಗಳು 18ವರ್ಷ ತುಂಬುವ ವರೆಗೂ ವಾಹನ ಚಾಲನೆ ಮಾಡಬಾರದು ಇದು ಅಪರಾಧ. ವಾಹನ ಚಾಲಕರು ಪ್ರತಿಯೊಬ್ಬರು ಡ್ರೈವಿಂಗ್ ಲೈಸನ್ಸ್, ಇನ್ಸುರೆನ್ಸ್ ,ಹೆಲ್ಮೆಟ್ ಸೇರಿದಂತೆ ಸರ್ಕಾರ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ಸಪ್ತಾಹ ದ ಬಗ್ಗೆ ತಮ್ಮ ನೆರೆಹೊರೆಯವರಿಗೆ ಪೋಷಕರಿಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಒಂದು ನಿಗದಿತ ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕು. ಅದನ್ನು ಹೊರತುಪಡಿಸಿ ಸಮಾಜಘಾತುಕ ಕೆಲಸಗಳಲ್ಲಿ ಭಾಗಿಯಾಗಬಾರದು ಇದರಿಂದ ತಮ್ಮ ಜೀವನವೇ ಕಷ್ಟದ ಬದುಕಿನಲ್ಲಿ ಸಿಲುಕಿಕೊಳ್ಳಲಿದೆ. ಇದರಿಂದ ಪೋಷಕರಿಗೆ ಸಹ ಅತೀವ ನೋವು ಉಂಟಾಗುತ್ತದೆ . ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ಸಂದರ್ಭದಲ್ಲಿ ಓದಿಗಷ್ಟೇ ಮಹತ್ವ ನೀಡಿ ಉನ್ನತ ಸ್ಥಾನಮಾನಗಳನ್ನು ಪಡೆಯುವ ಮೂಲಕ ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸಬೇಕು ಎಂದು ತಿಳಿಸಿದರು.
ಪೊಲೀಸ್ ಇಲಾಖೆ ರಾಜ್ಯಾದ್ಯಂತ 112 ಸೇವೆ ಜಾರಿಗೆ ತಂದಿದ್ದು ,ತುರ್ತು ಸಂದರ್ಭಗಳಲ್ಲಿ, ಗಲಾಟೆ, ಅಪಘಾತ ಸೇರಿದಂತೆ ಸಮಾಜದ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಪರಾಧ ಪ್ರಕರಣಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡಿ ನಿಮ್ಮ ಹೆಸರನ್ನು ಗೌಪ್ಯವಾಗಿಡಲಾಗುವುದು.ಪೊಲೀಸ್ ಇಲಾಖೆ ಸದಾ 24 ಗಂಟೆಯೂ ನಿಮ್ಮ ಜೊತೆಯಲ್ಲಿರಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವೇಕಾನಂದ ಶಾಲೆ ಪ್ರಾಂಶುಪಾಲ ಮಧುಸೂದನ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…