ಜಿಲ್ಲೆಗಳು

ವಿದ್ಯಾರ್ಥಿ ಜೀವನದಿಂದಲೇ ರಸ್ತೆ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ತಿಳಿದುಕೊಳ್ಳಬೇಕು : ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್

ಹನೂರು: ಶಾಲಾ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ರಸ್ತೆ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಪಟ್ಟಣ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಸಂತೋಷ್ ಕಶ್ಯಪ್ ತಿಳಿಸಿದರು.

ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಸ್ತೆ ಸುರಕ್ಷಾ ಸಪ್ತಾಹ ಮತ್ತು 112 ಅರಿವು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಪ್ರತಿದಿನ ಐನೂರಕ್ಕೂ ಹೆಚ್ಚು ಜನರು ಮೃತಪಡುತ್ತಿದ್ದಾರೆ. ಇದರಲ್ಲಿ ಹೆಚ್ಚಿನವರು ಅಪಘಾತದಿಂದ ಮೃತಪಡುತ್ತಿರುವುದು ನೋವಿನಸಂಗತಿ.ಶಾಲಾ ವಿದ್ಯಾರ್ಥಿಗಳು 18ವರ್ಷ ತುಂಬುವ ವರೆಗೂ ವಾಹನ ಚಾಲನೆ ಮಾಡಬಾರದು ಇದು ಅಪರಾಧ. ವಾಹನ ಚಾಲಕರು ಪ್ರತಿಯೊಬ್ಬರು ಡ್ರೈವಿಂಗ್ ಲೈಸನ್ಸ್, ಇನ್ಸುರೆನ್ಸ್ ,ಹೆಲ್ಮೆಟ್ ಸೇರಿದಂತೆ ಸರ್ಕಾರ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ಸಪ್ತಾಹ ದ ಬಗ್ಗೆ ತಮ್ಮ ನೆರೆಹೊರೆಯವರಿಗೆ ಪೋಷಕರಿಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಒಂದು ನಿಗದಿತ ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕು. ಅದನ್ನು ಹೊರತುಪಡಿಸಿ ಸಮಾಜಘಾತುಕ ಕೆಲಸಗಳಲ್ಲಿ ಭಾಗಿಯಾಗಬಾರದು ಇದರಿಂದ ತಮ್ಮ ಜೀವನವೇ ಕಷ್ಟದ ಬದುಕಿನಲ್ಲಿ ಸಿಲುಕಿಕೊಳ್ಳಲಿದೆ. ಇದರಿಂದ ಪೋಷಕರಿಗೆ ಸಹ ಅತೀವ ನೋವು ಉಂಟಾಗುತ್ತದೆ . ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದ ಸಂದರ್ಭದಲ್ಲಿ ಓದಿಗಷ್ಟೇ ಮಹತ್ವ ನೀಡಿ ಉನ್ನತ ಸ್ಥಾನಮಾನಗಳನ್ನು ಪಡೆಯುವ ಮೂಲಕ ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸಬೇಕು ಎಂದು ತಿಳಿಸಿದರು.

ಪೊಲೀಸ್ ಇಲಾಖೆ ರಾಜ್ಯಾದ್ಯಂತ 112 ಸೇವೆ ಜಾರಿಗೆ ತಂದಿದ್ದು ,ತುರ್ತು ಸಂದರ್ಭಗಳಲ್ಲಿ, ಗಲಾಟೆ, ಅಪಘಾತ ಸೇರಿದಂತೆ ಸಮಾಜದ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಪರಾಧ ಪ್ರಕರಣಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡಿ ನಿಮ್ಮ ಹೆಸರನ್ನು ಗೌಪ್ಯವಾಗಿಡಲಾಗುವುದು.ಪೊಲೀಸ್ ಇಲಾಖೆ ಸದಾ 24 ಗಂಟೆಯೂ ನಿಮ್ಮ ಜೊತೆಯಲ್ಲಿರಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವೇಕಾನಂದ ಶಾಲೆ ಪ್ರಾಂಶುಪಾಲ ಮಧುಸೂದನ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago