ಜಿಲ್ಲೆಗಳು

ಕೇವಲ ಆಹ್ವಾನ ಪತ್ರಿಕೆಯಲ್ಲಷ್ಟೇ ಅಧ್ಯಕ್ಷತೆ ವಹಿಸುವಂತಾದ ಜಿಟಿಡಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಇಂದು ಚಾಮುಂಡೇಶ್ವರಿ ಬೆಟ್ಟದಲ್ಲಿ ನಡೆದ ನಾಡಹಬ್ಬ ದಸರಾ ಮಹೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಬೇಕಿದ್ದ ಶಾಸಕ ಜಿ.ಟಿ.ದೇವೇಗೌಡ ಅವರೇ ವೇದಿಕೆ ಕೆಳಗಡೆ ಕುಳಿತು ಕಾರ್ಯಕ್ರಮ ವೀಕ್ಷಿಸುವಂತಹ ಪ್ರಸಂಗ ನಿರ್ಮಾಣವಾಯಿತು.
ರಾಜ್ಯ ಸರ್ಕಾರ ಮುದ್ರಿಸಿದ್ದ ದಸರಾ ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಅಧ್ಯಕ್ಷತೆ ವಹಿ ಸಲಿದ್ದಾರೆ ಎಂದು ಹೇಳಲಾಗಿತ್ತು. ಅದೇ ರೀತಿ ಶಾಸಕ ಜಿ.ಟಿ.ದೇವೇಗೌಡ ಅವರು ೯.೩೦ಕ್ಕೆ ಆಗಮಿಸಿ ವೇದಿಕೆಯನ್ನೇರಿದರಲ್ಲದೆ ಉತ್ಸವ ಮೂರ್ತಿಗೆ ಕೈಮುಗಿಯುವ ಜತೆಗೆ ಸಭಿಕರತ್ತ ಕೈ ಬೀಸಿ ವಾಪಸ್ ದೇವಸ್ಥಾನಕ್ಕೆ ತೆರಳಿದ್ದರು. ರಾಷ್ಟ್ರಪತಿಗಳ ಜತೆಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊರ ಬರುತ್ತಿದ್ದಂತೆ ವೇದಿಕೆಯಲ್ಲಿ ಅವಕಾಶವಿಲ್ಲವೆಂದು ಮಾಹಿತಿ ತಲುಪಿತು. ಇದರಿಂದಾಗಿ ಬೇಸರದಿಂದಲೇ ಶಾಸಕರ ಗ್ಯಾಲರಿಯತ್ತ ಆಗಮಿಸಿ ಕುಳಿತರು.
ಶಾಸಕರಿಗೂ ಅವಕಾಶವಿಲ್ಲವೆಂದ ಕಾರಣ ಇಲ್ಲಿಗೆ ಬಂದು ಕುಳಿತಿದ್ದೇನೆ ಎಂದು ಜಿ.ಟಿ.ದೇವೇಗೌಡ ಅವರು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಬೇಕಿದ್ದ ಜಿ.ಟಿ.ದೇವೇಗೌಡ ಅವರೇ ವೇದಿಕೆಯಲ್ಲಿ ಇಲ್ಲದ ಕಾರಣ ಯಾರೂ ಅಧ್ಯಕ್ಷತೆ ವಹಿಸಲಿಲ್ಲ. ಪ್ರಾಸ್ತಾವಿಕವಾಗಿ ಮಾತನ್ನಾಡಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ವಾಗತ ಭಾಷಣಕ್ಕೆ ಸೀಮಿತವಾದರು.

andolanait

Recent Posts

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಚಿವ ಆರ್.‌ಬಿ.ತಿಮ್ಮಾಪುರ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಖಂಡಿಸಿ, ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಸದಸ್ಯರು ಆರ್.‌ಅಶೋಕ್‌ ನೇತೃತ್ವದಲ್ಲಿ…

40 mins ago

ಮಾರ್ಚ್.‌18ರಿಂದ ಏಪ್ರಿಲ್.‌2ರವರೆಗೆ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ…

44 mins ago

ಹನೂರು| 6 ಹಸುಗಳು ಅನುಮಾನಸ್ಪದ ಸಾವು: ವಿಷಪ್ರಾಶನ ಶಂಕೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…

2 hours ago

ಸಿದ್ದಾಪುರ| ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ನವೀನ್‌ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು  ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…

3 hours ago

ಓದುಗರ ಪತ್ರ: ಗಾಂಜಾ ಮಾರಾಟ ತಡೆಗಟ್ಟಿ

ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…

3 hours ago

ಓದುಗರ ಪತ್ರ: ಕೇರಳದಲ್ಲಿ ಉಚಿತ ಶಿಕ್ಷಣ ಶ್ಲಾಘನೀಯ

ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…

4 hours ago