ಜಿಲ್ಲೆಗಳು

ಕೇವಲ ಆಹ್ವಾನ ಪತ್ರಿಕೆಯಲ್ಲಷ್ಟೇ ಅಧ್ಯಕ್ಷತೆ ವಹಿಸುವಂತಾದ ಜಿಟಿಡಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಅಂಗವಾಗಿ ಇಂದು ಚಾಮುಂಡೇಶ್ವರಿ ಬೆಟ್ಟದಲ್ಲಿ ನಡೆದ ನಾಡಹಬ್ಬ ದಸರಾ ಮಹೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಬೇಕಿದ್ದ ಶಾಸಕ ಜಿ.ಟಿ.ದೇವೇಗೌಡ ಅವರೇ ವೇದಿಕೆ ಕೆಳಗಡೆ ಕುಳಿತು ಕಾರ್ಯಕ್ರಮ ವೀಕ್ಷಿಸುವಂತಹ ಪ್ರಸಂಗ ನಿರ್ಮಾಣವಾಯಿತು.
ರಾಜ್ಯ ಸರ್ಕಾರ ಮುದ್ರಿಸಿದ್ದ ದಸರಾ ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಅಧ್ಯಕ್ಷತೆ ವಹಿ ಸಲಿದ್ದಾರೆ ಎಂದು ಹೇಳಲಾಗಿತ್ತು. ಅದೇ ರೀತಿ ಶಾಸಕ ಜಿ.ಟಿ.ದೇವೇಗೌಡ ಅವರು ೯.೩೦ಕ್ಕೆ ಆಗಮಿಸಿ ವೇದಿಕೆಯನ್ನೇರಿದರಲ್ಲದೆ ಉತ್ಸವ ಮೂರ್ತಿಗೆ ಕೈಮುಗಿಯುವ ಜತೆಗೆ ಸಭಿಕರತ್ತ ಕೈ ಬೀಸಿ ವಾಪಸ್ ದೇವಸ್ಥಾನಕ್ಕೆ ತೆರಳಿದ್ದರು. ರಾಷ್ಟ್ರಪತಿಗಳ ಜತೆಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಹೊರ ಬರುತ್ತಿದ್ದಂತೆ ವೇದಿಕೆಯಲ್ಲಿ ಅವಕಾಶವಿಲ್ಲವೆಂದು ಮಾಹಿತಿ ತಲುಪಿತು. ಇದರಿಂದಾಗಿ ಬೇಸರದಿಂದಲೇ ಶಾಸಕರ ಗ್ಯಾಲರಿಯತ್ತ ಆಗಮಿಸಿ ಕುಳಿತರು.
ಶಾಸಕರಿಗೂ ಅವಕಾಶವಿಲ್ಲವೆಂದ ಕಾರಣ ಇಲ್ಲಿಗೆ ಬಂದು ಕುಳಿತಿದ್ದೇನೆ ಎಂದು ಜಿ.ಟಿ.ದೇವೇಗೌಡ ಅವರು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಬೇಕಿದ್ದ ಜಿ.ಟಿ.ದೇವೇಗೌಡ ಅವರೇ ವೇದಿಕೆಯಲ್ಲಿ ಇಲ್ಲದ ಕಾರಣ ಯಾರೂ ಅಧ್ಯಕ್ಷತೆ ವಹಿಸಲಿಲ್ಲ. ಪ್ರಾಸ್ತಾವಿಕವಾಗಿ ಮಾತನ್ನಾಡಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ವಾಗತ ಭಾಷಣಕ್ಕೆ ಸೀಮಿತವಾದರು.

andolanait

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

3 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

3 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

6 hours ago