ಜಿಲ್ಲೆಗಳು

ವೀರನಹೊಸಳ್ಳಿಯಲ್ಲಿ ಆಪರೇಷನ್ ಟೈಗರ್

ಮೈಸೂರು:  ಹುಣಸೂರು ತಾಲ್ಲೂಕು ಹನಗೋಡು ಹೋಬಳಿ ಸುತ್ತಮುತ್ತ 10ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿರುವ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಗುರುವಾರ ಕಾರ್ಯಾಚರಣೆ ಆರಂಭಿಸಿದೆ.

ಗ್ರಾಮಸ್ಥರು ನೀಡಿದ ದೂರುಗಳ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಗುರುವಾರ ಮುಂಜಾನೆ ಐದು ಗಂಟೆಯಿಂದಲೇ ಕಾರ್ಯಾಚರಣೆ ಆರಂಭಿಸಿದೆ. ಮತ್ತಿಗೋಡು ಆನೆ ಶಿಬಿರದ ಭೀಮ ಆನೆ ಸಹಾಯದಿಂದ ಬಿಆರ್ ಕಾವಲು, ಶೆಟ್ಟಿಹಳ್ಳಿ ಅರಣ್ಯ ಮತ್ತು ತೋಟಗಳ ಸುತ್ತಮುತ್ತ ಶೋಧ ಕಾರ್ಯಾಚರಣೆ ಪ್ರಾರಂಭವಾಗಿದೆ.

ಕಾರ್ಯಾಚರಣೆಯ ನಡುವೆಯೇ ಹುಲಿಯು ಹೆಮ್ಮಿಗೆ ಹಾಡಿಯ ತಾಯಮ್ಮ ಅವರಿಗೆ ಸೇರಿದ ಹಸುವನ್ನು ಎಳೆದುಕೊಂಡು ಹೋಗಿ ತಿಂದಿರುವ ಘಟನೆಯೂ ನಡೆದಿದೆ. ಈ ಭಾಗದಲ್ಲಿ ಬೆಳಗ್ಗೆ 10 ಗಂಟೆವರೆಗೂ ಹುಲಿಗಾಗಿ ಹುಡುಕಾಟ ನಡೆಸಿದರೂ ಹುಲಿ ಪತ್ತೆಯಾಗಿಲ್ಲ.

ಕೆಲ ದಿನಗಳ ಹಿಂದೆ ಹನಗೋಡು, ಅಬ್ಬೂರು, ಸಿಂಡೆನಹಳ್ಳಿ, ಹೆಮ್ಮಿಗೆ ಗ್ರಾಮಗಳಲ್ಲಿ ಈ ಹುಲಿ ಹತ್ತಕ್ಕೂ ಹೆಚ್ಚು ಹಸುಗಳನ್ನು ಕೊಂದು ಹಾಕಿದೆ. ಹುಲಿಯನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಈ ಸ್ಥಳದಲ್ಲಿ ಬೋನು ಇಟ್ಟಿದ್ದರೂ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಈಗ ಸೆರೆ ಕಾರ್ಯಾಚರಣೆ ಆರಂಭಿಸಲಾಗಿದೆ.

ಹುಲಿ ಕಾಣಿಸಿಕೊಂಡಿರುವ ವಿವಿಧೆಡೆ ಅತ್ಯಾಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, 11 ಮಂದಿ ಅರಣ್ಯ ಸಿಬ್ಬಂದಿ ಮರದ ತುದಿಯಿಂದ ಹುಲಿಯ ಚಲನವಲನದ ಮೇಲೆ ನಿಗಾ ಇಡಲು ಆರಂಭಿಸಿದ್ದಾರೆ.

ವಿಶೇಷ ಕಾರ್ಯಪಡೆಯ ನಾಲ್ಕು ಆನೆಗಳನ್ನೂ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿದೆ. ಆನೆ ಕಾರ್ಯಪಡೆಯ ಎಂಟು ಮಂದಿ ಸಿಬ್ಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ ಹುಲಿ ಸೆರೆ ಕಾರ್ಯಾಚರಣೆಗೆ ಸಹಕರಿಸುತ್ತಿದ್ದಾರೆ. ಡಿಸಿಎಫ್ ಡಾ.ಹರ್ಷವರ್ದನ್ ಮಾರ್ಗದರ್ಶನದಲ್ಲಿ ಎಸಿಎಫ್ ಧನಂಜಯ್, ಆರ್ ಎಫ್ ಒ ರತನ್ ಹಾಗೂ ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಡಿಸಿಎಫ್ ಡಾ ಹರ್ಷವರ್ಧನ್ ಮಾತನಾಡಿ ಹುಲಿಯಿಂದ ಜಾನುವಾರುಗಳನ್ನು ಕಳೆದುಕೊಂಡವರಿಗೆ ಹೆಚ್ಚಿನ ಪರಿಹಾರ ನೀಡಲು ಉನ್ನತ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ” ಈ ಪ್ರದೇಶದದಲ್ಲಿ ಹುಲಿ ಓಡಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು, ಪಗ್ ಗುರುತುಗಳೂ ಪತ್ತೆಯಾಗಿವೆ. ಅಕ್ಕಪಕ್ಕದ ಎಸ್ಟೇಟ್‌ ಗಳಲ್ಲಿ ಕ್ಯಾಮೆರಾ ಅಳವಡಿಸಿದ್ದು, ಹುಲಿಗೆ ಆಮಿಷವೊಡ್ಡಲು ಮೇಕೆಯೊಂದಿಗೆ ಪಂಜರವನ್ನೂ ಇರಿಸಿದ್ದೇವೆ ಎಂದು ಹುಣಸೂರು ವಲಯದ ವಲಯ ಅರಣ್ಯಾಧಿಕಾರಿ ರತನ್ ತಿಳಿಸಿದ್ದಾರೆ.

andolana

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

26 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

31 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

41 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago