ಜಿಲ್ಲೆಗಳು

ವೀರನಹೊಸಳ್ಳಿಯಲ್ಲಿ ಆಪರೇಷನ್ ಟೈಗರ್

ಮೈಸೂರು:  ಹುಣಸೂರು ತಾಲ್ಲೂಕು ಹನಗೋಡು ಹೋಬಳಿ ಸುತ್ತಮುತ್ತ 10ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿರುವ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಗುರುವಾರ ಕಾರ್ಯಾಚರಣೆ ಆರಂಭಿಸಿದೆ.

ಗ್ರಾಮಸ್ಥರು ನೀಡಿದ ದೂರುಗಳ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಗುರುವಾರ ಮುಂಜಾನೆ ಐದು ಗಂಟೆಯಿಂದಲೇ ಕಾರ್ಯಾಚರಣೆ ಆರಂಭಿಸಿದೆ. ಮತ್ತಿಗೋಡು ಆನೆ ಶಿಬಿರದ ಭೀಮ ಆನೆ ಸಹಾಯದಿಂದ ಬಿಆರ್ ಕಾವಲು, ಶೆಟ್ಟಿಹಳ್ಳಿ ಅರಣ್ಯ ಮತ್ತು ತೋಟಗಳ ಸುತ್ತಮುತ್ತ ಶೋಧ ಕಾರ್ಯಾಚರಣೆ ಪ್ರಾರಂಭವಾಗಿದೆ.

ಕಾರ್ಯಾಚರಣೆಯ ನಡುವೆಯೇ ಹುಲಿಯು ಹೆಮ್ಮಿಗೆ ಹಾಡಿಯ ತಾಯಮ್ಮ ಅವರಿಗೆ ಸೇರಿದ ಹಸುವನ್ನು ಎಳೆದುಕೊಂಡು ಹೋಗಿ ತಿಂದಿರುವ ಘಟನೆಯೂ ನಡೆದಿದೆ. ಈ ಭಾಗದಲ್ಲಿ ಬೆಳಗ್ಗೆ 10 ಗಂಟೆವರೆಗೂ ಹುಲಿಗಾಗಿ ಹುಡುಕಾಟ ನಡೆಸಿದರೂ ಹುಲಿ ಪತ್ತೆಯಾಗಿಲ್ಲ.

ಕೆಲ ದಿನಗಳ ಹಿಂದೆ ಹನಗೋಡು, ಅಬ್ಬೂರು, ಸಿಂಡೆನಹಳ್ಳಿ, ಹೆಮ್ಮಿಗೆ ಗ್ರಾಮಗಳಲ್ಲಿ ಈ ಹುಲಿ ಹತ್ತಕ್ಕೂ ಹೆಚ್ಚು ಹಸುಗಳನ್ನು ಕೊಂದು ಹಾಕಿದೆ. ಹುಲಿಯನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಈ ಸ್ಥಳದಲ್ಲಿ ಬೋನು ಇಟ್ಟಿದ್ದರೂ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಈಗ ಸೆರೆ ಕಾರ್ಯಾಚರಣೆ ಆರಂಭಿಸಲಾಗಿದೆ.

ಹುಲಿ ಕಾಣಿಸಿಕೊಂಡಿರುವ ವಿವಿಧೆಡೆ ಅತ್ಯಾಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, 11 ಮಂದಿ ಅರಣ್ಯ ಸಿಬ್ಬಂದಿ ಮರದ ತುದಿಯಿಂದ ಹುಲಿಯ ಚಲನವಲನದ ಮೇಲೆ ನಿಗಾ ಇಡಲು ಆರಂಭಿಸಿದ್ದಾರೆ.

ವಿಶೇಷ ಕಾರ್ಯಪಡೆಯ ನಾಲ್ಕು ಆನೆಗಳನ್ನೂ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿದೆ. ಆನೆ ಕಾರ್ಯಪಡೆಯ ಎಂಟು ಮಂದಿ ಸಿಬ್ಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ ಹುಲಿ ಸೆರೆ ಕಾರ್ಯಾಚರಣೆಗೆ ಸಹಕರಿಸುತ್ತಿದ್ದಾರೆ. ಡಿಸಿಎಫ್ ಡಾ.ಹರ್ಷವರ್ದನ್ ಮಾರ್ಗದರ್ಶನದಲ್ಲಿ ಎಸಿಎಫ್ ಧನಂಜಯ್, ಆರ್ ಎಫ್ ಒ ರತನ್ ಹಾಗೂ ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಡಿಸಿಎಫ್ ಡಾ ಹರ್ಷವರ್ಧನ್ ಮಾತನಾಡಿ ಹುಲಿಯಿಂದ ಜಾನುವಾರುಗಳನ್ನು ಕಳೆದುಕೊಂಡವರಿಗೆ ಹೆಚ್ಚಿನ ಪರಿಹಾರ ನೀಡಲು ಉನ್ನತ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ” ಈ ಪ್ರದೇಶದದಲ್ಲಿ ಹುಲಿ ಓಡಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು, ಪಗ್ ಗುರುತುಗಳೂ ಪತ್ತೆಯಾಗಿವೆ. ಅಕ್ಕಪಕ್ಕದ ಎಸ್ಟೇಟ್‌ ಗಳಲ್ಲಿ ಕ್ಯಾಮೆರಾ ಅಳವಡಿಸಿದ್ದು, ಹುಲಿಗೆ ಆಮಿಷವೊಡ್ಡಲು ಮೇಕೆಯೊಂದಿಗೆ ಪಂಜರವನ್ನೂ ಇರಿಸಿದ್ದೇವೆ ಎಂದು ಹುಣಸೂರು ವಲಯದ ವಲಯ ಅರಣ್ಯಾಧಿಕಾರಿ ರತನ್ ತಿಳಿಸಿದ್ದಾರೆ.

andolana

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

6 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

10 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

11 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

11 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

11 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

12 hours ago