ಜಿಲ್ಲೆಗಳು

ವೀರನಹೊಸಳ್ಳಿಯಲ್ಲಿ ಆಪರೇಷನ್ ಟೈಗರ್

ಮೈಸೂರು:  ಹುಣಸೂರು ತಾಲ್ಲೂಕು ಹನಗೋಡು ಹೋಬಳಿ ಸುತ್ತಮುತ್ತ 10ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿರುವ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಗುರುವಾರ ಕಾರ್ಯಾಚರಣೆ ಆರಂಭಿಸಿದೆ.

ಗ್ರಾಮಸ್ಥರು ನೀಡಿದ ದೂರುಗಳ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಗುರುವಾರ ಮುಂಜಾನೆ ಐದು ಗಂಟೆಯಿಂದಲೇ ಕಾರ್ಯಾಚರಣೆ ಆರಂಭಿಸಿದೆ. ಮತ್ತಿಗೋಡು ಆನೆ ಶಿಬಿರದ ಭೀಮ ಆನೆ ಸಹಾಯದಿಂದ ಬಿಆರ್ ಕಾವಲು, ಶೆಟ್ಟಿಹಳ್ಳಿ ಅರಣ್ಯ ಮತ್ತು ತೋಟಗಳ ಸುತ್ತಮುತ್ತ ಶೋಧ ಕಾರ್ಯಾಚರಣೆ ಪ್ರಾರಂಭವಾಗಿದೆ.

ಕಾರ್ಯಾಚರಣೆಯ ನಡುವೆಯೇ ಹುಲಿಯು ಹೆಮ್ಮಿಗೆ ಹಾಡಿಯ ತಾಯಮ್ಮ ಅವರಿಗೆ ಸೇರಿದ ಹಸುವನ್ನು ಎಳೆದುಕೊಂಡು ಹೋಗಿ ತಿಂದಿರುವ ಘಟನೆಯೂ ನಡೆದಿದೆ. ಈ ಭಾಗದಲ್ಲಿ ಬೆಳಗ್ಗೆ 10 ಗಂಟೆವರೆಗೂ ಹುಲಿಗಾಗಿ ಹುಡುಕಾಟ ನಡೆಸಿದರೂ ಹುಲಿ ಪತ್ತೆಯಾಗಿಲ್ಲ.

ಕೆಲ ದಿನಗಳ ಹಿಂದೆ ಹನಗೋಡು, ಅಬ್ಬೂರು, ಸಿಂಡೆನಹಳ್ಳಿ, ಹೆಮ್ಮಿಗೆ ಗ್ರಾಮಗಳಲ್ಲಿ ಈ ಹುಲಿ ಹತ್ತಕ್ಕೂ ಹೆಚ್ಚು ಹಸುಗಳನ್ನು ಕೊಂದು ಹಾಕಿದೆ. ಹುಲಿಯನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಈ ಸ್ಥಳದಲ್ಲಿ ಬೋನು ಇಟ್ಟಿದ್ದರೂ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಈಗ ಸೆರೆ ಕಾರ್ಯಾಚರಣೆ ಆರಂಭಿಸಲಾಗಿದೆ.

ಹುಲಿ ಕಾಣಿಸಿಕೊಂಡಿರುವ ವಿವಿಧೆಡೆ ಅತ್ಯಾಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, 11 ಮಂದಿ ಅರಣ್ಯ ಸಿಬ್ಬಂದಿ ಮರದ ತುದಿಯಿಂದ ಹುಲಿಯ ಚಲನವಲನದ ಮೇಲೆ ನಿಗಾ ಇಡಲು ಆರಂಭಿಸಿದ್ದಾರೆ.

ವಿಶೇಷ ಕಾರ್ಯಪಡೆಯ ನಾಲ್ಕು ಆನೆಗಳನ್ನೂ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿದೆ. ಆನೆ ಕಾರ್ಯಪಡೆಯ ಎಂಟು ಮಂದಿ ಸಿಬ್ಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ ಹುಲಿ ಸೆರೆ ಕಾರ್ಯಾಚರಣೆಗೆ ಸಹಕರಿಸುತ್ತಿದ್ದಾರೆ. ಡಿಸಿಎಫ್ ಡಾ.ಹರ್ಷವರ್ದನ್ ಮಾರ್ಗದರ್ಶನದಲ್ಲಿ ಎಸಿಎಫ್ ಧನಂಜಯ್, ಆರ್ ಎಫ್ ಒ ರತನ್ ಹಾಗೂ ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಡಿಸಿಎಫ್ ಡಾ ಹರ್ಷವರ್ಧನ್ ಮಾತನಾಡಿ ಹುಲಿಯಿಂದ ಜಾನುವಾರುಗಳನ್ನು ಕಳೆದುಕೊಂಡವರಿಗೆ ಹೆಚ್ಚಿನ ಪರಿಹಾರ ನೀಡಲು ಉನ್ನತ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ” ಈ ಪ್ರದೇಶದದಲ್ಲಿ ಹುಲಿ ಓಡಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು, ಪಗ್ ಗುರುತುಗಳೂ ಪತ್ತೆಯಾಗಿವೆ. ಅಕ್ಕಪಕ್ಕದ ಎಸ್ಟೇಟ್‌ ಗಳಲ್ಲಿ ಕ್ಯಾಮೆರಾ ಅಳವಡಿಸಿದ್ದು, ಹುಲಿಗೆ ಆಮಿಷವೊಡ್ಡಲು ಮೇಕೆಯೊಂದಿಗೆ ಪಂಜರವನ್ನೂ ಇರಿಸಿದ್ದೇವೆ ಎಂದು ಹುಣಸೂರು ವಲಯದ ವಲಯ ಅರಣ್ಯಾಧಿಕಾರಿ ರತನ್ ತಿಳಿಸಿದ್ದಾರೆ.

andolana

Recent Posts

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

5 hours ago

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

8 hours ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

11 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

11 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

11 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

11 hours ago