ಜಿಲ್ಲೆಗಳು

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ವಿರೋಧ

ನ.2ರಿಂದ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಮೈಸೂರು: ಉದ್ಯೋಗ ಸೃಷ್ಟಿ ನೆಪದಲ್ಲಿ ರಾಜ್ಯದ ಫಲವತ್ತಾದ ಕೃಷಿ ಭೂಮಿ, ನೀರು, ವಿದ್ಯುತ್ ಅನ್ನು ಖಾಸಗಿ ಕಂಪೆನಿಗಳಿಗೆ ನೀಡಲು ನಡೆಸುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ವಿರೋಧಿಸಿ ನ.2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸವಾವೇಶ ಆಯೋಜಿಸಲಾಗಿದೆ ಎಂದು ಸಂಯುಕ್ತ ಹೋರಾಟ ಕರ್ನಾಟಕದ ಸಂಯೋಜಕ ಬಡಗಲಪುರ ನಾಗೇಂದ್ರ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.2ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆyuತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ರಾಜ್ಯಕ್ಕೆ ಹೊಸತಲ್ಲ. ಈ ಹಿಂದೆಯೂ ಇಂತಹ ಸಮಾವೇಶ ನಡೆದಿದೆ. ಸಾಮಾನ್ಯವಾಗಿ ಚುನಾವಣೆಗಳು ಸಮೀಪಿಸುತ್ತಿರುವ ಸಮಯದಲ್ಲಿ ಇಂತಹ ಸಮಾವೇಶ ಸಂಘಟಿಸಿ, ಇಷ್ಟು ಲಕ್ಷ ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುತ್ತಿದೆ. ಇದರ ಫಲವಾಗಿ ಇಷ್ಟು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಇದರಿಂದ ನಮ್ಮ ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಸಿಗುತ್ತದೆ ಎಂದು ಅಬ್ಬರದ ಪ್ರಚಾರ ಮಾಡಲಾಗುತ್ತದೆ. ಆ ಮೂಲಕ ಈ ರೀತಿ ಭ್ರಮೆ ಸೃಷ್ಟಿಸಲಾಗುತ್ತದೆ ಎಂದು ಆರೋಪಿಸಿದರು.

ವಾಸ್ತವದಲ್ಲಿ ಇಂತಹ ಹೂಡಿಕೆದಾರರ ಸಮಾವೇಶಗಳಿಂದ ರಾಜ್ಯದ ಅಭಿವೃದ್ಧಿ, ಉದ್ಯೋಗ ಸೃಷ್ಟಿಗೆ ಅನುಕೂಲವಾಗುವ ಬದಲು ಕಾರ್ಪೊರೇಟ್ ಕಂಪೆನಿಗಳು, ಏಜೆಂಟರಿಗೆ ಲಾಭವಾಗುತ್ತದೆ. ಅಲ್ಲದೆ, ಒಂದು ಕಡೆ ರೈತರು ತಮ್ಮ ಭೂಮಿ ಕಳೆದುಕೊಳ್ಳುತ್ತಾರೆ. ಕಾರ್ಮಿಕರ ಶೋಷಣೆ ಇನ್ನಷ್ಟು ಹೆಚ್ಚುತ್ತದೆ. ಹೀಗಾಗಿ ಇಂತಹ ಹೂಡಿಕೆದಾರರ ಸಮಾವೇಶ ಅಗತ್ಯವಿಲ್ಲ. ಬಲವಂತವಾಗಿ ಭೂಮಿ ಕಸಿದುಕೊಳ್ಳಬಾರದು, ರೈತರು, ದಲಿತರ ಸ್ವಾಧೀನದಲ್ಲಿರುವ ಕೃಷಿ ಭೂಮಿ ಸಕ್ರಮಗೊಳಿಸಬೇಕು, ಅತಿವೃಷ್ಟಿಯಿಂದ ನಷ್ಟಕ್ಕೆ ಗುರಿಯದವರಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು, ವಿದ್ಯುತ್ ಕ್ಷೇತ್ರದ ಖಾಸಗೀಕರಣ ನಿಲ್ಲಬೇಕು ಎಂದು ಒತ್ತಾಯಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನಾ ಸವಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಪಿ.ಮರಂಕಯ್ಯ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolana

Recent Posts

ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: 10 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್‌ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ…

34 mins ago

ಯುದ್ಧಕ್ಕೆ ನಾವು ಸದಾ ಸಿದ್ಧ: ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶತ್ರು ರಾಷ್ಟ್ರಗಳಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್‌…

1 hour ago

ಕಾವೇರಿ ನದಿ ದಡದಲ್ಲಿ ತ್ಯಾಜ್ಯದ ರಾಶಿ..!

ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ…

1 hour ago

ಇಂದು ರಕ್ತ ಚಂದ್ರಗ್ರಹಣ: ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ

ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ…

2 hours ago

ಸಾಲೂರು ಶ್ರೀ ರಚಿಸಿದ್ದ ಮಹಾಪ್ರಬಂಧಕ್ಕೆ ಸಂಸ್ಕೃತ ಗ್ರಂಥ ಪುರಸ್ಕಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ.ಶ್ರೀ ಶಾಂತಮಲ್ಲಿಕಾರ್ಜುನ…

3 hours ago

ಹನೂರು: ಕಾಡಂಚಿನ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ: ಜಿಲ್ಲಾಧಿಕಾರಿ ಶ್ರೀರೂಪ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಿಗೆ…

3 hours ago