ಜಿಲ್ಲೆಗಳು

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ವಿರೋಧ

ನ.2ರಿಂದ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ

ಮೈಸೂರು: ಉದ್ಯೋಗ ಸೃಷ್ಟಿ ನೆಪದಲ್ಲಿ ರಾಜ್ಯದ ಫಲವತ್ತಾದ ಕೃಷಿ ಭೂಮಿ, ನೀರು, ವಿದ್ಯುತ್ ಅನ್ನು ಖಾಸಗಿ ಕಂಪೆನಿಗಳಿಗೆ ನೀಡಲು ನಡೆಸುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ವಿರೋಧಿಸಿ ನ.2ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸವಾವೇಶ ಆಯೋಜಿಸಲಾಗಿದೆ ಎಂದು ಸಂಯುಕ್ತ ಹೋರಾಟ ಕರ್ನಾಟಕದ ಸಂಯೋಜಕ ಬಡಗಲಪುರ ನಾಗೇಂದ್ರ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.2ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆyuತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ರಾಜ್ಯಕ್ಕೆ ಹೊಸತಲ್ಲ. ಈ ಹಿಂದೆಯೂ ಇಂತಹ ಸಮಾವೇಶ ನಡೆದಿದೆ. ಸಾಮಾನ್ಯವಾಗಿ ಚುನಾವಣೆಗಳು ಸಮೀಪಿಸುತ್ತಿರುವ ಸಮಯದಲ್ಲಿ ಇಂತಹ ಸಮಾವೇಶ ಸಂಘಟಿಸಿ, ಇಷ್ಟು ಲಕ್ಷ ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುತ್ತಿದೆ. ಇದರ ಫಲವಾಗಿ ಇಷ್ಟು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಇದರಿಂದ ನಮ್ಮ ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಸಿಗುತ್ತದೆ ಎಂದು ಅಬ್ಬರದ ಪ್ರಚಾರ ಮಾಡಲಾಗುತ್ತದೆ. ಆ ಮೂಲಕ ಈ ರೀತಿ ಭ್ರಮೆ ಸೃಷ್ಟಿಸಲಾಗುತ್ತದೆ ಎಂದು ಆರೋಪಿಸಿದರು.

ವಾಸ್ತವದಲ್ಲಿ ಇಂತಹ ಹೂಡಿಕೆದಾರರ ಸಮಾವೇಶಗಳಿಂದ ರಾಜ್ಯದ ಅಭಿವೃದ್ಧಿ, ಉದ್ಯೋಗ ಸೃಷ್ಟಿಗೆ ಅನುಕೂಲವಾಗುವ ಬದಲು ಕಾರ್ಪೊರೇಟ್ ಕಂಪೆನಿಗಳು, ಏಜೆಂಟರಿಗೆ ಲಾಭವಾಗುತ್ತದೆ. ಅಲ್ಲದೆ, ಒಂದು ಕಡೆ ರೈತರು ತಮ್ಮ ಭೂಮಿ ಕಳೆದುಕೊಳ್ಳುತ್ತಾರೆ. ಕಾರ್ಮಿಕರ ಶೋಷಣೆ ಇನ್ನಷ್ಟು ಹೆಚ್ಚುತ್ತದೆ. ಹೀಗಾಗಿ ಇಂತಹ ಹೂಡಿಕೆದಾರರ ಸಮಾವೇಶ ಅಗತ್ಯವಿಲ್ಲ. ಬಲವಂತವಾಗಿ ಭೂಮಿ ಕಸಿದುಕೊಳ್ಳಬಾರದು, ರೈತರು, ದಲಿತರ ಸ್ವಾಧೀನದಲ್ಲಿರುವ ಕೃಷಿ ಭೂಮಿ ಸಕ್ರಮಗೊಳಿಸಬೇಕು, ಅತಿವೃಷ್ಟಿಯಿಂದ ನಷ್ಟಕ್ಕೆ ಗುರಿಯದವರಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು, ವಿದ್ಯುತ್ ಕ್ಷೇತ್ರದ ಖಾಸಗೀಕರಣ ನಿಲ್ಲಬೇಕು ಎಂದು ಒತ್ತಾಯಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನಾ ಸವಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಪಿ.ಮರಂಕಯ್ಯ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

10 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

11 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago