ಜಿಲ್ಲೆಗಳು

ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ : ಶ್ರೀ ಪ್ರಸನ್ನಾನಂದಪುರಿಸ್ವಾಮೀಜಿ

ಚಾಮರಾಜನಗರ : ರಾಜ್ಯ, ಕೇಂದ್ರದಲ್ಲಿ ೭೫ ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ. ಈ ಚಳವಳಿ ನಿಂತ ನೀರಲ್ಲ ಸದಾ ಹರಿಯುವ ನೀರು ಇದ್ದಂತೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿಸ್ವಾಮೀಜಿ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸ್ವಾಭಿಮಾನಿ ಎಸ್‌ಸಿ ಮತ್ತು ಎಸ್‌ಟಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಘಟಕದ ವತಿಯಿಂದ ನಡೆದ ಎಸ್‌ಸಿ, ಎಸ್‌ಟಿ ಸಮುದಾಯಗಳು ಏಕೆ ಒಂದಾಗಬೇಕು ? ಒಂದು ಚೆರ್ಚೆ, ಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಭಿಮಾನಿಗಳಾದ ಎಸ್‌ಸಿ, ಎಸ್‌ಟಿಗಳು ಚುನಾವಣೆ ಸಂದರ್ಭದಲ್ಲಿ ಮಾತ್ರ ನಿಮ್ಮ ಶಾಸಕರು, ಸಚಿವರು, ಮುಖ್ಯಮಂತ್ರಿಗಳಿಗೆ ಪಕ್ಷ, ನಾಯಕರುಗಳಿಗೆ ಅಭಿಮಾನಯಾಗಿ ಇರಬೇಕು ಹೊರತು ಅನುಯಾಯಿಯಾಗಬಾರದು. ಚುನಾವಣೆಗಳು ಮುಗಿದ ಮೇಲೆ ನಾವು ಎಸ್‌ಸಿ, ಎಸ್‌ಟಿಗಳು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ವಾಲ್ಮೀಕಿಯವರಿಗೆ ಅನುಯಾಯಿಯಾಗಬೇಕು. ಎಸ್‌ಸಿ, ಎಸ್‌ಟಿಗಳಲ್ಲಿ ಸಾಮರಸ್ಯದ ಬೆಸುಗೆ ಮೂಡಿಸುವ ಸಲುವಾಗಿ ನಮ್ಮ ಎಲ್ಲ ಪರಮಪೂಜ್ಯರು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಶ್ರೇಣಿಕೃತ ಜಾತಿ ವ್ಯವಸ್ಥೆಯಲ್ಲಿ ಎಸ್‌ಸಿ, ಎಸ್‌ಟಿಗಳು ೧೫೧ ಜಾತಿಗಳಿದ್ದು, ಮರಳುಬೇರೆ, ಜಲ್ಲಿಬೇರೆ, ನೀರು ಬೇರೆ, ಸಿಮೆಂಟ್ ಬೇರೆ, ಕಬ್ಬಿಣಬೇರೆ ಆಗಿದ್ದು, ಇಂದು ನಾವೆಲ್ಲರೂ ಸಿಮೆಂಟ್ ಕಾಂಕ್ರಿಟ್ ತರ ಒಂದಾಗಿದ್ದೇವೆ. ಎಸ್‌ಸಿ, ಎಸ್‌ಟಿಗಳಲ್ಲಿ ಒಗ್ಗಟ್ಟು ಮೂಡಿಸಲು ಪರಮಪೂಜ್ಯರು ಈ ಒಂದು ಸಂಕಲ್ಪ ಮಾಡಿದ್ದೇವೆ. ಅದಕ್ಕಾಗಿ ಕರ್ನಾಟಕ ರಾಜ್ಯದಲ್ಲಿರುವ ಒಂದು ಮೂಕ್ಕಾಲು ಕೋಟೆ ಈ ಸಮುದಾಯಗಳು ನಾವೆಲ್ಲರೂ ಕೂಡ ಬಹುಸಂಖ್ಯಾತರು. ದೇಶ, ರಾಜ್ಯದಲ್ಲಿ ೭೫ ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ. ಇವತ್ತು ಮೀಸಲಾತಿ ಹೆಚ್ಚಳ ಆಗಿದೆ ಎಂದರೆ ಬಹುತೇಕ ಕರ್ನಾಟಕದ್ಯಂತ ಎಸ್‌ಸಿ,ಎಸ್‌ಟಿ ವರ್ಗದವರು ಹಳ್ಳಿಯಿಂದ, ಹೋಬಳಿಯಿÄಂದ ಹೋರಾಟ P ತಾಲೂಕು ಕೇಂದ್ರಗಳಲ್ಲಿ ನಮ್ಮ ಸಂವಿಧಾನ ಬದ್ದ ಹಕ್ಕುನ್ನು ಕೊಡಲೇಬೇಕು ಎಂದು ಹೋರಾಟ ಕೈಗೆತ್ತಿಕೊಂಡು ತಹಸೀಲ್ದಾರ್ ಅವರ ಮುಖೇನಾ ಮುಖ್ಯಮಂತ್ರಿ ಸಂದೇಶ ರವಾನೆ ಮಾಡಿದ್ರಿ ನಂತರ ೧೫೨ ದಿನಕ್ಕೆ ರಾಜ್ಯದ ೩೧ ಜಿಲ್ಲೆಗಳಲ್ಲಿ ಹೋರಾಟವನ್ನು ಕೈಗೆತ್ತಿಕೊಂಡು ಜಿಲ್ಲಾಧಿಕಾರಿಗಳ ಮುಖೇನಾ ಸಂದೇಶವನ್ನು ಮುಖ್ಯಮಂತ್ರಿ ರವಾನಿಸುವ ಮೂಲಕ ಎಸ್‌ಸಿ,ಎಸ್‌ಟಿಗಳು ನಾವೆಲ್ಲ ಒಂದಾಗಿದ್ದೇವೆ ಎಂಬ ಉತ್ತರವನ್ನು ಕೊಟ್ರಿ. ಕರ್ನಾಟಕ ಎಸ್‌ಸಿ, ಎಸ್‌ಟಿಗಳು ಒಂದು ಹೆಜ್ಜೆ ಇಟ್ಟಿದ್ದೇವೆ. ಇನ್ನೂ ೨೨ ಹೆಜ್ಜೆ ಇಡಬೇಕು. ಇದಕ್ಕಾಗಿ ಜಾಗೃತರಾಗಬೇPಕಿದೆ ಎಂದರು. ರುವಂದನಾ ಸ್ವೀಕರಿಸಿ ಮಾತನಾಡಿದರು.

andolanait

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

9 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

9 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

10 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

11 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

11 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

11 hours ago