ಜಿಲ್ಲೆಗಳು

ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ : ಶ್ರೀ ಪ್ರಸನ್ನಾನಂದಪುರಿಸ್ವಾಮೀಜಿ

ಚಾಮರಾಜನಗರ : ರಾಜ್ಯ, ಕೇಂದ್ರದಲ್ಲಿ ೭೫ ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ. ಈ ಚಳವಳಿ ನಿಂತ ನೀರಲ್ಲ ಸದಾ ಹರಿಯುವ ನೀರು ಇದ್ದಂತೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿಸ್ವಾಮೀಜಿ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸ್ವಾಭಿಮಾನಿ ಎಸ್‌ಸಿ ಮತ್ತು ಎಸ್‌ಟಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಘಟಕದ ವತಿಯಿಂದ ನಡೆದ ಎಸ್‌ಸಿ, ಎಸ್‌ಟಿ ಸಮುದಾಯಗಳು ಏಕೆ ಒಂದಾಗಬೇಕು ? ಒಂದು ಚೆರ್ಚೆ, ಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಭಿಮಾನಿಗಳಾದ ಎಸ್‌ಸಿ, ಎಸ್‌ಟಿಗಳು ಚುನಾವಣೆ ಸಂದರ್ಭದಲ್ಲಿ ಮಾತ್ರ ನಿಮ್ಮ ಶಾಸಕರು, ಸಚಿವರು, ಮುಖ್ಯಮಂತ್ರಿಗಳಿಗೆ ಪಕ್ಷ, ನಾಯಕರುಗಳಿಗೆ ಅಭಿಮಾನಯಾಗಿ ಇರಬೇಕು ಹೊರತು ಅನುಯಾಯಿಯಾಗಬಾರದು. ಚುನಾವಣೆಗಳು ಮುಗಿದ ಮೇಲೆ ನಾವು ಎಸ್‌ಸಿ, ಎಸ್‌ಟಿಗಳು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ವಾಲ್ಮೀಕಿಯವರಿಗೆ ಅನುಯಾಯಿಯಾಗಬೇಕು. ಎಸ್‌ಸಿ, ಎಸ್‌ಟಿಗಳಲ್ಲಿ ಸಾಮರಸ್ಯದ ಬೆಸುಗೆ ಮೂಡಿಸುವ ಸಲುವಾಗಿ ನಮ್ಮ ಎಲ್ಲ ಪರಮಪೂಜ್ಯರು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಶ್ರೇಣಿಕೃತ ಜಾತಿ ವ್ಯವಸ್ಥೆಯಲ್ಲಿ ಎಸ್‌ಸಿ, ಎಸ್‌ಟಿಗಳು ೧೫೧ ಜಾತಿಗಳಿದ್ದು, ಮರಳುಬೇರೆ, ಜಲ್ಲಿಬೇರೆ, ನೀರು ಬೇರೆ, ಸಿಮೆಂಟ್ ಬೇರೆ, ಕಬ್ಬಿಣಬೇರೆ ಆಗಿದ್ದು, ಇಂದು ನಾವೆಲ್ಲರೂ ಸಿಮೆಂಟ್ ಕಾಂಕ್ರಿಟ್ ತರ ಒಂದಾಗಿದ್ದೇವೆ. ಎಸ್‌ಸಿ, ಎಸ್‌ಟಿಗಳಲ್ಲಿ ಒಗ್ಗಟ್ಟು ಮೂಡಿಸಲು ಪರಮಪೂಜ್ಯರು ಈ ಒಂದು ಸಂಕಲ್ಪ ಮಾಡಿದ್ದೇವೆ. ಅದಕ್ಕಾಗಿ ಕರ್ನಾಟಕ ರಾಜ್ಯದಲ್ಲಿರುವ ಒಂದು ಮೂಕ್ಕಾಲು ಕೋಟೆ ಈ ಸಮುದಾಯಗಳು ನಾವೆಲ್ಲರೂ ಕೂಡ ಬಹುಸಂಖ್ಯಾತರು. ದೇಶ, ರಾಜ್ಯದಲ್ಲಿ ೭೫ ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ. ಇವತ್ತು ಮೀಸಲಾತಿ ಹೆಚ್ಚಳ ಆಗಿದೆ ಎಂದರೆ ಬಹುತೇಕ ಕರ್ನಾಟಕದ್ಯಂತ ಎಸ್‌ಸಿ,ಎಸ್‌ಟಿ ವರ್ಗದವರು ಹಳ್ಳಿಯಿಂದ, ಹೋಬಳಿಯಿÄಂದ ಹೋರಾಟ P ತಾಲೂಕು ಕೇಂದ್ರಗಳಲ್ಲಿ ನಮ್ಮ ಸಂವಿಧಾನ ಬದ್ದ ಹಕ್ಕುನ್ನು ಕೊಡಲೇಬೇಕು ಎಂದು ಹೋರಾಟ ಕೈಗೆತ್ತಿಕೊಂಡು ತಹಸೀಲ್ದಾರ್ ಅವರ ಮುಖೇನಾ ಮುಖ್ಯಮಂತ್ರಿ ಸಂದೇಶ ರವಾನೆ ಮಾಡಿದ್ರಿ ನಂತರ ೧೫೨ ದಿನಕ್ಕೆ ರಾಜ್ಯದ ೩೧ ಜಿಲ್ಲೆಗಳಲ್ಲಿ ಹೋರಾಟವನ್ನು ಕೈಗೆತ್ತಿಕೊಂಡು ಜಿಲ್ಲಾಧಿಕಾರಿಗಳ ಮುಖೇನಾ ಸಂದೇಶವನ್ನು ಮುಖ್ಯಮಂತ್ರಿ ರವಾನಿಸುವ ಮೂಲಕ ಎಸ್‌ಸಿ,ಎಸ್‌ಟಿಗಳು ನಾವೆಲ್ಲ ಒಂದಾಗಿದ್ದೇವೆ ಎಂಬ ಉತ್ತರವನ್ನು ಕೊಟ್ರಿ. ಕರ್ನಾಟಕ ಎಸ್‌ಸಿ, ಎಸ್‌ಟಿಗಳು ಒಂದು ಹೆಜ್ಜೆ ಇಟ್ಟಿದ್ದೇವೆ. ಇನ್ನೂ ೨೨ ಹೆಜ್ಜೆ ಇಡಬೇಕು. ಇದಕ್ಕಾಗಿ ಜಾಗೃತರಾಗಬೇPಕಿದೆ ಎಂದರು. ರುವಂದನಾ ಸ್ವೀಕರಿಸಿ ಮಾತನಾಡಿದರು.

andolanait

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

22 mins ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

4 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

4 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

5 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

5 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

6 hours ago