ಜಿಲ್ಲೆಗಳು

ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ : ಶ್ರೀ ಪ್ರಸನ್ನಾನಂದಪುರಿಸ್ವಾಮೀಜಿ

ಚಾಮರಾಜನಗರ : ರಾಜ್ಯ, ಕೇಂದ್ರದಲ್ಲಿ ೭೫ ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ. ಈ ಚಳವಳಿ ನಿಂತ ನೀರಲ್ಲ ಸದಾ ಹರಿಯುವ ನೀರು ಇದ್ದಂತೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿಸ್ವಾಮೀಜಿ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸ್ವಾಭಿಮಾನಿ ಎಸ್‌ಸಿ ಮತ್ತು ಎಸ್‌ಟಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಘಟಕದ ವತಿಯಿಂದ ನಡೆದ ಎಸ್‌ಸಿ, ಎಸ್‌ಟಿ ಸಮುದಾಯಗಳು ಏಕೆ ಒಂದಾಗಬೇಕು ? ಒಂದು ಚೆರ್ಚೆ, ಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಭಿಮಾನಿಗಳಾದ ಎಸ್‌ಸಿ, ಎಸ್‌ಟಿಗಳು ಚುನಾವಣೆ ಸಂದರ್ಭದಲ್ಲಿ ಮಾತ್ರ ನಿಮ್ಮ ಶಾಸಕರು, ಸಚಿವರು, ಮುಖ್ಯಮಂತ್ರಿಗಳಿಗೆ ಪಕ್ಷ, ನಾಯಕರುಗಳಿಗೆ ಅಭಿಮಾನಯಾಗಿ ಇರಬೇಕು ಹೊರತು ಅನುಯಾಯಿಯಾಗಬಾರದು. ಚುನಾವಣೆಗಳು ಮುಗಿದ ಮೇಲೆ ನಾವು ಎಸ್‌ಸಿ, ಎಸ್‌ಟಿಗಳು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ವಾಲ್ಮೀಕಿಯವರಿಗೆ ಅನುಯಾಯಿಯಾಗಬೇಕು. ಎಸ್‌ಸಿ, ಎಸ್‌ಟಿಗಳಲ್ಲಿ ಸಾಮರಸ್ಯದ ಬೆಸುಗೆ ಮೂಡಿಸುವ ಸಲುವಾಗಿ ನಮ್ಮ ಎಲ್ಲ ಪರಮಪೂಜ್ಯರು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಶ್ರೇಣಿಕೃತ ಜಾತಿ ವ್ಯವಸ್ಥೆಯಲ್ಲಿ ಎಸ್‌ಸಿ, ಎಸ್‌ಟಿಗಳು ೧೫೧ ಜಾತಿಗಳಿದ್ದು, ಮರಳುಬೇರೆ, ಜಲ್ಲಿಬೇರೆ, ನೀರು ಬೇರೆ, ಸಿಮೆಂಟ್ ಬೇರೆ, ಕಬ್ಬಿಣಬೇರೆ ಆಗಿದ್ದು, ಇಂದು ನಾವೆಲ್ಲರೂ ಸಿಮೆಂಟ್ ಕಾಂಕ್ರಿಟ್ ತರ ಒಂದಾಗಿದ್ದೇವೆ. ಎಸ್‌ಸಿ, ಎಸ್‌ಟಿಗಳಲ್ಲಿ ಒಗ್ಗಟ್ಟು ಮೂಡಿಸಲು ಪರಮಪೂಜ್ಯರು ಈ ಒಂದು ಸಂಕಲ್ಪ ಮಾಡಿದ್ದೇವೆ. ಅದಕ್ಕಾಗಿ ಕರ್ನಾಟಕ ರಾಜ್ಯದಲ್ಲಿರುವ ಒಂದು ಮೂಕ್ಕಾಲು ಕೋಟೆ ಈ ಸಮುದಾಯಗಳು ನಾವೆಲ್ಲರೂ ಕೂಡ ಬಹುಸಂಖ್ಯಾತರು. ದೇಶ, ರಾಜ್ಯದಲ್ಲಿ ೭೫ ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ. ಇವತ್ತು ಮೀಸಲಾತಿ ಹೆಚ್ಚಳ ಆಗಿದೆ ಎಂದರೆ ಬಹುತೇಕ ಕರ್ನಾಟಕದ್ಯಂತ ಎಸ್‌ಸಿ,ಎಸ್‌ಟಿ ವರ್ಗದವರು ಹಳ್ಳಿಯಿಂದ, ಹೋಬಳಿಯಿÄಂದ ಹೋರಾಟ P ತಾಲೂಕು ಕೇಂದ್ರಗಳಲ್ಲಿ ನಮ್ಮ ಸಂವಿಧಾನ ಬದ್ದ ಹಕ್ಕುನ್ನು ಕೊಡಲೇಬೇಕು ಎಂದು ಹೋರಾಟ ಕೈಗೆತ್ತಿಕೊಂಡು ತಹಸೀಲ್ದಾರ್ ಅವರ ಮುಖೇನಾ ಮುಖ್ಯಮಂತ್ರಿ ಸಂದೇಶ ರವಾನೆ ಮಾಡಿದ್ರಿ ನಂತರ ೧೫೨ ದಿನಕ್ಕೆ ರಾಜ್ಯದ ೩೧ ಜಿಲ್ಲೆಗಳಲ್ಲಿ ಹೋರಾಟವನ್ನು ಕೈಗೆತ್ತಿಕೊಂಡು ಜಿಲ್ಲಾಧಿಕಾರಿಗಳ ಮುಖೇನಾ ಸಂದೇಶವನ್ನು ಮುಖ್ಯಮಂತ್ರಿ ರವಾನಿಸುವ ಮೂಲಕ ಎಸ್‌ಸಿ,ಎಸ್‌ಟಿಗಳು ನಾವೆಲ್ಲ ಒಂದಾಗಿದ್ದೇವೆ ಎಂಬ ಉತ್ತರವನ್ನು ಕೊಟ್ರಿ. ಕರ್ನಾಟಕ ಎಸ್‌ಸಿ, ಎಸ್‌ಟಿಗಳು ಒಂದು ಹೆಜ್ಜೆ ಇಟ್ಟಿದ್ದೇವೆ. ಇನ್ನೂ ೨೨ ಹೆಜ್ಜೆ ಇಡಬೇಕು. ಇದಕ್ಕಾಗಿ ಜಾಗೃತರಾಗಬೇPಕಿದೆ ಎಂದರು. ರುವಂದನಾ ಸ್ವೀಕರಿಸಿ ಮಾತನಾಡಿದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

54 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago