ಜಿಲ್ಲೆಗಳು

ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ : ಶ್ರೀ ಪ್ರಸನ್ನಾನಂದಪುರಿಸ್ವಾಮೀಜಿ

ಚಾಮರಾಜನಗರ : ರಾಜ್ಯ, ಕೇಂದ್ರದಲ್ಲಿ ೭೫ ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ. ಈ ಚಳವಳಿ ನಿಂತ ನೀರಲ್ಲ ಸದಾ ಹರಿಯುವ ನೀರು ಇದ್ದಂತೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಪ್ರಸನ್ನಾನಂದಪುರಿಸ್ವಾಮೀಜಿ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸ್ವಾಭಿಮಾನಿ ಎಸ್‌ಸಿ ಮತ್ತು ಎಸ್‌ಟಿ ಸಂಘಟನೆಗಳ ಒಕ್ಕೂಟದ ಜಿಲ್ಲಾ ಘಟಕದ ವತಿಯಿಂದ ನಡೆದ ಎಸ್‌ಸಿ, ಎಸ್‌ಟಿ ಸಮುದಾಯಗಳು ಏಕೆ ಒಂದಾಗಬೇಕು ? ಒಂದು ಚೆರ್ಚೆ, ಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಭಿಮಾನಿಗಳಾದ ಎಸ್‌ಸಿ, ಎಸ್‌ಟಿಗಳು ಚುನಾವಣೆ ಸಂದರ್ಭದಲ್ಲಿ ಮಾತ್ರ ನಿಮ್ಮ ಶಾಸಕರು, ಸಚಿವರು, ಮುಖ್ಯಮಂತ್ರಿಗಳಿಗೆ ಪಕ್ಷ, ನಾಯಕರುಗಳಿಗೆ ಅಭಿಮಾನಯಾಗಿ ಇರಬೇಕು ಹೊರತು ಅನುಯಾಯಿಯಾಗಬಾರದು. ಚುನಾವಣೆಗಳು ಮುಗಿದ ಮೇಲೆ ನಾವು ಎಸ್‌ಸಿ, ಎಸ್‌ಟಿಗಳು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ವಾಲ್ಮೀಕಿಯವರಿಗೆ ಅನುಯಾಯಿಯಾಗಬೇಕು. ಎಸ್‌ಸಿ, ಎಸ್‌ಟಿಗಳಲ್ಲಿ ಸಾಮರಸ್ಯದ ಬೆಸುಗೆ ಮೂಡಿಸುವ ಸಲುವಾಗಿ ನಮ್ಮ ಎಲ್ಲ ಪರಮಪೂಜ್ಯರು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಶ್ರೇಣಿಕೃತ ಜಾತಿ ವ್ಯವಸ್ಥೆಯಲ್ಲಿ ಎಸ್‌ಸಿ, ಎಸ್‌ಟಿಗಳು ೧೫೧ ಜಾತಿಗಳಿದ್ದು, ಮರಳುಬೇರೆ, ಜಲ್ಲಿಬೇರೆ, ನೀರು ಬೇರೆ, ಸಿಮೆಂಟ್ ಬೇರೆ, ಕಬ್ಬಿಣಬೇರೆ ಆಗಿದ್ದು, ಇಂದು ನಾವೆಲ್ಲರೂ ಸಿಮೆಂಟ್ ಕಾಂಕ್ರಿಟ್ ತರ ಒಂದಾಗಿದ್ದೇವೆ. ಎಸ್‌ಸಿ, ಎಸ್‌ಟಿಗಳಲ್ಲಿ ಒಗ್ಗಟ್ಟು ಮೂಡಿಸಲು ಪರಮಪೂಜ್ಯರು ಈ ಒಂದು ಸಂಕಲ್ಪ ಮಾಡಿದ್ದೇವೆ. ಅದಕ್ಕಾಗಿ ಕರ್ನಾಟಕ ರಾಜ್ಯದಲ್ಲಿರುವ ಒಂದು ಮೂಕ್ಕಾಲು ಕೋಟೆ ಈ ಸಮುದಾಯಗಳು ನಾವೆಲ್ಲರೂ ಕೂಡ ಬಹುಸಂಖ್ಯಾತರು. ದೇಶ, ರಾಜ್ಯದಲ್ಲಿ ೭೫ ವರ್ಷಗಳಿಂದ ನಮ್ಮನ್ನು ಆಳುತ್ತಿರುವ ಸರ್ಕಾರಗಳು ನಮ್ಮ ಹಿತ ಕಾಯಲಿಲ್ಲ. ಇವತ್ತು ಮೀಸಲಾತಿ ಹೆಚ್ಚಳ ಆಗಿದೆ ಎಂದರೆ ಬಹುತೇಕ ಕರ್ನಾಟಕದ್ಯಂತ ಎಸ್‌ಸಿ,ಎಸ್‌ಟಿ ವರ್ಗದವರು ಹಳ್ಳಿಯಿಂದ, ಹೋಬಳಿಯಿÄಂದ ಹೋರಾಟ P ತಾಲೂಕು ಕೇಂದ್ರಗಳಲ್ಲಿ ನಮ್ಮ ಸಂವಿಧಾನ ಬದ್ದ ಹಕ್ಕುನ್ನು ಕೊಡಲೇಬೇಕು ಎಂದು ಹೋರಾಟ ಕೈಗೆತ್ತಿಕೊಂಡು ತಹಸೀಲ್ದಾರ್ ಅವರ ಮುಖೇನಾ ಮುಖ್ಯಮಂತ್ರಿ ಸಂದೇಶ ರವಾನೆ ಮಾಡಿದ್ರಿ ನಂತರ ೧೫೨ ದಿನಕ್ಕೆ ರಾಜ್ಯದ ೩೧ ಜಿಲ್ಲೆಗಳಲ್ಲಿ ಹೋರಾಟವನ್ನು ಕೈಗೆತ್ತಿಕೊಂಡು ಜಿಲ್ಲಾಧಿಕಾರಿಗಳ ಮುಖೇನಾ ಸಂದೇಶವನ್ನು ಮುಖ್ಯಮಂತ್ರಿ ರವಾನಿಸುವ ಮೂಲಕ ಎಸ್‌ಸಿ,ಎಸ್‌ಟಿಗಳು ನಾವೆಲ್ಲ ಒಂದಾಗಿದ್ದೇವೆ ಎಂಬ ಉತ್ತರವನ್ನು ಕೊಟ್ರಿ. ಕರ್ನಾಟಕ ಎಸ್‌ಸಿ, ಎಸ್‌ಟಿಗಳು ಒಂದು ಹೆಜ್ಜೆ ಇಟ್ಟಿದ್ದೇವೆ. ಇನ್ನೂ ೨೨ ಹೆಜ್ಜೆ ಇಡಬೇಕು. ಇದಕ್ಕಾಗಿ ಜಾಗೃತರಾಗಬೇPಕಿದೆ ಎಂದರು. ರುವಂದನಾ ಸ್ವೀಕರಿಸಿ ಮಾತನಾಡಿದರು.

andolanait

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

4 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

4 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

4 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

7 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

7 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

7 hours ago