ಮೈಸೂರು: ಜಂಬೂಸವಾರಿ ಮುಗಿದರೂ ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಪ್ರವಾಸಿಗರ ದಂಡು ಆಗಮಿಸುತ್ತಿದೆ. ಎಲ್ಲಿ ನೋಡಿದರೂ ಜನಜಂಗುಳಿ ಕಾಣಿಸುತ್ತಿತ್ತು. ದಸರೆಯ ಮಾರನೇ ದಿನವಾದ ಗುರುವಾರ ಅರಮನೆಗೆ ಭೇಟಿ ನೀಡುವ ಜನರ ಸಂಖ್ಯೆ ಹೆಚ್ಚಾಗಿತ್ತು.
ಮೃಗಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಟಿಕೆಟ್ ಕೌಂಟರ್ ಬಳಿ ನೂಕುನುಗ್ಗಲು ಉಂಟಾಗಿತ್ತು. ಚಾಮುಂಡಿ ಬೆಟ್ಟ ಪ್ರವಾಸಿಗರಿಂದ ತುಂಬಿತ್ತು. ಸಾಲು ಸಾಲು ವಾಹನಗಳಿಂದ ಬೆಟ್ಟದ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಪರದಾಡುವಂತಾಯಿತು. ಸಂಚಾರ ನಿರ್ವಹಣೆಗೆ ಪೊಲೀಸರು ಹರಸಾಹಸಪಟ್ಟರು.
ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ಜಗನ್ಮೋಹನ ಅರಮನೆ ವೀಕ್ಷಿಸಿದ ಜನರು ದಸರಾ ವಸ್ತು ಪ್ರದರ್ಶನಕ್ಕೆ ಲಗ್ಗೆ ಇಟ್ಟಿದ್ದರು. ಸಂಜೆ ಐದು ಗಂಟೆಯ ನಂತರ ವಸ್ತುಪ್ರದರ್ಶನ ಆವರಣ ಜನರಿಂದ ತುಂಬಿ ತುಳುಕುತಿತ್ತು. ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಿದ ಜನರು ರಾತ್ರಿ ಕೆಆರ್ಎಸ್ಗೆ ಭೇಟಿ ನೀಡಿ ಚಿಮ್ಮುವ ಕಾರಂಜಿ ನೋಡಿದರು.
ಟ್ರಾಫಿಕ್ ಜಾಮ್
ಅರಮನೆ ಸುತ್ತಮುತ್ತಲ ಮಾರ್ಗದಲ್ಲಿ ನೂರಾರು ವಾಹನಗಳು ಓಡಾಡುತ್ತಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿ ಸಾರ್ವಜನಿಕರು ಪರದಾಡುವಂತಾಯಿತು. ಕೆ.ಆರ್.ವೃತ್ತ, ಹಾರ್ಡಿಂಜ್ ವೃತ್ತ, ವಸ್ತು ಪ್ರದರ್ಶನದ ಬಳಿ ಸಾಲು ಸಾಲು ವಾಹನಗಳು ಬರುತ್ತಿದ್ದರಿಂದ ಜಾಮ್ ಆಗುತ್ತಿತ್ತು. ನಿನ್ನೆ ಪೂರ್ತಿ ಕೆಲಸ ಮಾಡಿ ದಣಿದಿದ್ದ ಸಂಚಾರಿ ಪೊಲೀಸರು ಕರ್ತವ್ಯಕ್ಕೆ ನಿೋಂಜನೆಗೊಂಡಿದ್ದರೂ ನಿರ್ವಹಣೆ ಬಗ್ಗೆ ಗಮನಹರಿಸದ ಕಾರಣ ಕೆಲವು ಕಡೆ ಬಹು ಹೊತ್ತಿನ ತನಕ ಕಾದು ಮುಂದೆ ಸಾಗಬೇಕಾಯಿತು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…