ಜಿಲ್ಲೆಗಳು

ಪ್ರವಾಸಿತಾಣಗಳಲ್ಲಿ ಭಾರೀ ನೂಕು ನುಗ್ಗಲು; ಚಾಮುಂಡಿಬೆಟ್ಟ, ಕೆಆರ್‌ಎಸ್, ಮೃಗಾಲಯದಲ್ಲಿ ಜನವೋ ಜನ

ಮೈಸೂರು: ಜಂಬೂಸವಾರಿ ಮುಗಿದರೂ ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಪ್ರವಾಸಿಗರ ದಂಡು ಆಗಮಿಸುತ್ತಿದೆ. ಎಲ್ಲಿ ನೋಡಿದರೂ ಜನಜಂಗುಳಿ ಕಾಣಿಸುತ್ತಿತ್ತು. ದಸರೆಯ ಮಾರನೇ ದಿನವಾದ ಗುರುವಾರ ಅರಮನೆಗೆ ಭೇಟಿ ನೀಡುವ ಜನರ ಸಂಖ್ಯೆ ಹೆಚ್ಚಾಗಿತ್ತು. 

ಮೃಗಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಟಿಕೆಟ್ ಕೌಂಟರ್ ಬಳಿ ನೂಕುನುಗ್ಗಲು ಉಂಟಾಗಿತ್ತು. ಚಾಮುಂಡಿ ಬೆಟ್ಟ ಪ್ರವಾಸಿಗರಿಂದ ತುಂಬಿತ್ತು. ಸಾಲು ಸಾಲು ವಾಹನಗಳಿಂದ ಬೆಟ್ಟದ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಪರದಾಡುವಂತಾಯಿತು. ಸಂಚಾರ ನಿರ್ವಹಣೆಗೆ ಪೊಲೀಸರು ಹರಸಾಹಸಪಟ್ಟರು.

ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ಜಗನ್ಮೋಹನ ಅರಮನೆ ವೀಕ್ಷಿಸಿದ ಜನರು ದಸರಾ ವಸ್ತು ಪ್ರದರ್ಶನಕ್ಕೆ ಲಗ್ಗೆ ಇಟ್ಟಿದ್ದರು. ಸಂಜೆ ಐದು ಗಂಟೆಯ ನಂತರ ವಸ್ತುಪ್ರದರ್ಶನ ಆವರಣ ಜನರಿಂದ ತುಂಬಿ ತುಳುಕುತಿತ್ತು. ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಿದ ಜನರು ರಾತ್ರಿ ಕೆಆರ್‌ಎಸ್‌ಗೆ ಭೇಟಿ ನೀಡಿ ಚಿಮ್ಮುವ ಕಾರಂಜಿ ನೋಡಿದರು.

ಟ್ರಾಫಿಕ್ ಜಾಮ್ 

ಅರಮನೆ ಸುತ್ತಮುತ್ತಲ ಮಾರ್ಗದಲ್ಲಿ ನೂರಾರು ವಾಹನಗಳು ಓಡಾಡುತ್ತಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿ ಸಾರ್ವಜನಿಕರು ಪರದಾಡುವಂತಾಯಿತು. ಕೆ.ಆರ್.ವೃತ್ತ, ಹಾರ್ಡಿಂಜ್ ವೃತ್ತ, ವಸ್ತು ಪ್ರದರ್ಶನದ ಬಳಿ ಸಾಲು ಸಾಲು ವಾಹನಗಳು ಬರುತ್ತಿದ್ದರಿಂದ ಜಾಮ್ ಆಗುತ್ತಿತ್ತು. ನಿನ್ನೆ ಪೂರ್ತಿ ಕೆಲಸ ಮಾಡಿ ದಣಿದಿದ್ದ ಸಂಚಾರಿ ಪೊಲೀಸರು ಕರ್ತವ್ಯಕ್ಕೆ ನಿೋಂಜನೆಗೊಂಡಿದ್ದರೂ ನಿರ್ವಹಣೆ ಬಗ್ಗೆ ಗಮನಹರಿಸದ ಕಾರಣ ಕೆಲವು ಕಡೆ ಬಹು ಹೊತ್ತಿನ ತನಕ ಕಾದು ಮುಂದೆ ಸಾಗಬೇಕಾಯಿತು.

andolana

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

3 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

10 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

10 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

10 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

10 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

10 hours ago