ಮೈಸೂರು: ಜಂಬೂಸವಾರಿ ಮುಗಿದರೂ ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಪ್ರವಾಸಿಗರ ದಂಡು ಆಗಮಿಸುತ್ತಿದೆ. ಎಲ್ಲಿ ನೋಡಿದರೂ ಜನಜಂಗುಳಿ ಕಾಣಿಸುತ್ತಿತ್ತು. ದಸರೆಯ ಮಾರನೇ ದಿನವಾದ ಗುರುವಾರ ಅರಮನೆಗೆ ಭೇಟಿ ನೀಡುವ ಜನರ ಸಂಖ್ಯೆ ಹೆಚ್ಚಾಗಿತ್ತು.
ಮೃಗಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಟಿಕೆಟ್ ಕೌಂಟರ್ ಬಳಿ ನೂಕುನುಗ್ಗಲು ಉಂಟಾಗಿತ್ತು. ಚಾಮುಂಡಿ ಬೆಟ್ಟ ಪ್ರವಾಸಿಗರಿಂದ ತುಂಬಿತ್ತು. ಸಾಲು ಸಾಲು ವಾಹನಗಳಿಂದ ಬೆಟ್ಟದ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಪರದಾಡುವಂತಾಯಿತು. ಸಂಚಾರ ನಿರ್ವಹಣೆಗೆ ಪೊಲೀಸರು ಹರಸಾಹಸಪಟ್ಟರು.
ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ಜಗನ್ಮೋಹನ ಅರಮನೆ ವೀಕ್ಷಿಸಿದ ಜನರು ದಸರಾ ವಸ್ತು ಪ್ರದರ್ಶನಕ್ಕೆ ಲಗ್ಗೆ ಇಟ್ಟಿದ್ದರು. ಸಂಜೆ ಐದು ಗಂಟೆಯ ನಂತರ ವಸ್ತುಪ್ರದರ್ಶನ ಆವರಣ ಜನರಿಂದ ತುಂಬಿ ತುಳುಕುತಿತ್ತು. ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಿದ ಜನರು ರಾತ್ರಿ ಕೆಆರ್ಎಸ್ಗೆ ಭೇಟಿ ನೀಡಿ ಚಿಮ್ಮುವ ಕಾರಂಜಿ ನೋಡಿದರು.
ಟ್ರಾಫಿಕ್ ಜಾಮ್
ಅರಮನೆ ಸುತ್ತಮುತ್ತಲ ಮಾರ್ಗದಲ್ಲಿ ನೂರಾರು ವಾಹನಗಳು ಓಡಾಡುತ್ತಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿ ಸಾರ್ವಜನಿಕರು ಪರದಾಡುವಂತಾಯಿತು. ಕೆ.ಆರ್.ವೃತ್ತ, ಹಾರ್ಡಿಂಜ್ ವೃತ್ತ, ವಸ್ತು ಪ್ರದರ್ಶನದ ಬಳಿ ಸಾಲು ಸಾಲು ವಾಹನಗಳು ಬರುತ್ತಿದ್ದರಿಂದ ಜಾಮ್ ಆಗುತ್ತಿತ್ತು. ನಿನ್ನೆ ಪೂರ್ತಿ ಕೆಲಸ ಮಾಡಿ ದಣಿದಿದ್ದ ಸಂಚಾರಿ ಪೊಲೀಸರು ಕರ್ತವ್ಯಕ್ಕೆ ನಿೋಂಜನೆಗೊಂಡಿದ್ದರೂ ನಿರ್ವಹಣೆ ಬಗ್ಗೆ ಗಮನಹರಿಸದ ಕಾರಣ ಕೆಲವು ಕಡೆ ಬಹು ಹೊತ್ತಿನ ತನಕ ಕಾದು ಮುಂದೆ ಸಾಗಬೇಕಾಯಿತು.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…