ಜಿಲ್ಲೆಗಳು

ಪ್ರವಾಸಿತಾಣಗಳಲ್ಲಿ ಭಾರೀ ನೂಕು ನುಗ್ಗಲು; ಚಾಮುಂಡಿಬೆಟ್ಟ, ಕೆಆರ್‌ಎಸ್, ಮೃಗಾಲಯದಲ್ಲಿ ಜನವೋ ಜನ

ಮೈಸೂರು: ಜಂಬೂಸವಾರಿ ಮುಗಿದರೂ ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಪ್ರವಾಸಿಗರ ದಂಡು ಆಗಮಿಸುತ್ತಿದೆ. ಎಲ್ಲಿ ನೋಡಿದರೂ ಜನಜಂಗುಳಿ ಕಾಣಿಸುತ್ತಿತ್ತು. ದಸರೆಯ ಮಾರನೇ ದಿನವಾದ ಗುರುವಾರ ಅರಮನೆಗೆ ಭೇಟಿ ನೀಡುವ ಜನರ ಸಂಖ್ಯೆ ಹೆಚ್ಚಾಗಿತ್ತು. 

ಮೃಗಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಟಿಕೆಟ್ ಕೌಂಟರ್ ಬಳಿ ನೂಕುನುಗ್ಗಲು ಉಂಟಾಗಿತ್ತು. ಚಾಮುಂಡಿ ಬೆಟ್ಟ ಪ್ರವಾಸಿಗರಿಂದ ತುಂಬಿತ್ತು. ಸಾಲು ಸಾಲು ವಾಹನಗಳಿಂದ ಬೆಟ್ಟದ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಪರದಾಡುವಂತಾಯಿತು. ಸಂಚಾರ ನಿರ್ವಹಣೆಗೆ ಪೊಲೀಸರು ಹರಸಾಹಸಪಟ್ಟರು.

ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ಜಗನ್ಮೋಹನ ಅರಮನೆ ವೀಕ್ಷಿಸಿದ ಜನರು ದಸರಾ ವಸ್ತು ಪ್ರದರ್ಶನಕ್ಕೆ ಲಗ್ಗೆ ಇಟ್ಟಿದ್ದರು. ಸಂಜೆ ಐದು ಗಂಟೆಯ ನಂತರ ವಸ್ತುಪ್ರದರ್ಶನ ಆವರಣ ಜನರಿಂದ ತುಂಬಿ ತುಳುಕುತಿತ್ತು. ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಿದ ಜನರು ರಾತ್ರಿ ಕೆಆರ್‌ಎಸ್‌ಗೆ ಭೇಟಿ ನೀಡಿ ಚಿಮ್ಮುವ ಕಾರಂಜಿ ನೋಡಿದರು.

ಟ್ರಾಫಿಕ್ ಜಾಮ್ 

ಅರಮನೆ ಸುತ್ತಮುತ್ತಲ ಮಾರ್ಗದಲ್ಲಿ ನೂರಾರು ವಾಹನಗಳು ಓಡಾಡುತ್ತಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿ ಸಾರ್ವಜನಿಕರು ಪರದಾಡುವಂತಾಯಿತು. ಕೆ.ಆರ್.ವೃತ್ತ, ಹಾರ್ಡಿಂಜ್ ವೃತ್ತ, ವಸ್ತು ಪ್ರದರ್ಶನದ ಬಳಿ ಸಾಲು ಸಾಲು ವಾಹನಗಳು ಬರುತ್ತಿದ್ದರಿಂದ ಜಾಮ್ ಆಗುತ್ತಿತ್ತು. ನಿನ್ನೆ ಪೂರ್ತಿ ಕೆಲಸ ಮಾಡಿ ದಣಿದಿದ್ದ ಸಂಚಾರಿ ಪೊಲೀಸರು ಕರ್ತವ್ಯಕ್ಕೆ ನಿೋಂಜನೆಗೊಂಡಿದ್ದರೂ ನಿರ್ವಹಣೆ ಬಗ್ಗೆ ಗಮನಹರಿಸದ ಕಾರಣ ಕೆಲವು ಕಡೆ ಬಹು ಹೊತ್ತಿನ ತನಕ ಕಾದು ಮುಂದೆ ಸಾಗಬೇಕಾಯಿತು.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

4 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

5 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

10 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

10 hours ago