ಜಿಲ್ಲೆಗಳು

ಪ್ರವಾಸಿತಾಣಗಳಲ್ಲಿ ಭಾರೀ ನೂಕು ನುಗ್ಗಲು; ಚಾಮುಂಡಿಬೆಟ್ಟ, ಕೆಆರ್‌ಎಸ್, ಮೃಗಾಲಯದಲ್ಲಿ ಜನವೋ ಜನ

ಮೈಸೂರು: ಜಂಬೂಸವಾರಿ ಮುಗಿದರೂ ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಪ್ರವಾಸಿಗರ ದಂಡು ಆಗಮಿಸುತ್ತಿದೆ. ಎಲ್ಲಿ ನೋಡಿದರೂ ಜನಜಂಗುಳಿ ಕಾಣಿಸುತ್ತಿತ್ತು. ದಸರೆಯ ಮಾರನೇ ದಿನವಾದ ಗುರುವಾರ ಅರಮನೆಗೆ ಭೇಟಿ ನೀಡುವ ಜನರ ಸಂಖ್ಯೆ ಹೆಚ್ಚಾಗಿತ್ತು. 

ಮೃಗಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಟಿಕೆಟ್ ಕೌಂಟರ್ ಬಳಿ ನೂಕುನುಗ್ಗಲು ಉಂಟಾಗಿತ್ತು. ಚಾಮುಂಡಿ ಬೆಟ್ಟ ಪ್ರವಾಸಿಗರಿಂದ ತುಂಬಿತ್ತು. ಸಾಲು ಸಾಲು ವಾಹನಗಳಿಂದ ಬೆಟ್ಟದ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಪರದಾಡುವಂತಾಯಿತು. ಸಂಚಾರ ನಿರ್ವಹಣೆಗೆ ಪೊಲೀಸರು ಹರಸಾಹಸಪಟ್ಟರು.

ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ಜಗನ್ಮೋಹನ ಅರಮನೆ ವೀಕ್ಷಿಸಿದ ಜನರು ದಸರಾ ವಸ್ತು ಪ್ರದರ್ಶನಕ್ಕೆ ಲಗ್ಗೆ ಇಟ್ಟಿದ್ದರು. ಸಂಜೆ ಐದು ಗಂಟೆಯ ನಂತರ ವಸ್ತುಪ್ರದರ್ಶನ ಆವರಣ ಜನರಿಂದ ತುಂಬಿ ತುಳುಕುತಿತ್ತು. ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಿದ ಜನರು ರಾತ್ರಿ ಕೆಆರ್‌ಎಸ್‌ಗೆ ಭೇಟಿ ನೀಡಿ ಚಿಮ್ಮುವ ಕಾರಂಜಿ ನೋಡಿದರು.

ಟ್ರಾಫಿಕ್ ಜಾಮ್ 

ಅರಮನೆ ಸುತ್ತಮುತ್ತಲ ಮಾರ್ಗದಲ್ಲಿ ನೂರಾರು ವಾಹನಗಳು ಓಡಾಡುತ್ತಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿ ಸಾರ್ವಜನಿಕರು ಪರದಾಡುವಂತಾಯಿತು. ಕೆ.ಆರ್.ವೃತ್ತ, ಹಾರ್ಡಿಂಜ್ ವೃತ್ತ, ವಸ್ತು ಪ್ರದರ್ಶನದ ಬಳಿ ಸಾಲು ಸಾಲು ವಾಹನಗಳು ಬರುತ್ತಿದ್ದರಿಂದ ಜಾಮ್ ಆಗುತ್ತಿತ್ತು. ನಿನ್ನೆ ಪೂರ್ತಿ ಕೆಲಸ ಮಾಡಿ ದಣಿದಿದ್ದ ಸಂಚಾರಿ ಪೊಲೀಸರು ಕರ್ತವ್ಯಕ್ಕೆ ನಿೋಂಜನೆಗೊಂಡಿದ್ದರೂ ನಿರ್ವಹಣೆ ಬಗ್ಗೆ ಗಮನಹರಿಸದ ಕಾರಣ ಕೆಲವು ಕಡೆ ಬಹು ಹೊತ್ತಿನ ತನಕ ಕಾದು ಮುಂದೆ ಸಾಗಬೇಕಾಯಿತು.

andolana

Recent Posts

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

31 mins ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

3 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

4 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

6 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

6 hours ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

10 hours ago