ಜಿಲ್ಲೆಗಳು

ಸ್ವಂತ ಜಮೀನಿನಲ್ಲಿ ನಡೆದ ಸಿದ್ದು ಸಹೋದರ ರಾಮೇಗೌಡರ ಅಂತ್ಯಕ್ರಿಯೆ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅವರ ಅಂತ್ಯಕ್ರಿಯೆಯು ಶನಿವಾರ ಸಿದ್ದರಾಮನಹುಂಡಿ ಪಕ್ಕದ ಹೊಸಹಳ್ಳಿ ಬಳಿ ಇರುವ ಜಮೀನಿನಲ್ಲಿ ನೆರವೇರಿತು. ಸಿದ್ದರಾಮಯ್ಯ ಅವರ ತಂದೆ, ತಾಯಿ, ಅಣ್ಣನ ಸಮಾಧಿ ಬಳಿಯೇ ಕಿರಿಯ ತಮ್ಮನ ಪಾರ್ಥೀವ ಶರೀರವನ್ನು ಮಣ್ಣು ಮಾಡಲಾಯಿತು.

ತೀವ್ರ ಅನಾರೋಗ್ಯದಿಂದ ರಾಮೇಗೌಡ ಶುಕ್ರವಾರ ರಾತ್ರಿ ಮೃತಪಟ್ಟಿದ್ದರು. ಬೆಳಿಗ್ಗೆಯೇ ಬೆಂಗಳೂರಿನಿಂದ ಹೊರಟು ಸಿದ್ದರಾಮನಹುಂಡಿಗೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯ, ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪಾರ್ಥೀವ ಶರೀರದ ದರ್ಶನ ಪಡೆದರು. ಬಳಿಕ ಚಿಕ್ಕಪ್ಪನ ಪಾರ್ಥೀವ ಶರೀರಕ್ಕೆ ಹೆಗಲು ಕೊಟ್ಟ ಶಾಸಕ ಡಾ. ಯತೀಂದ್ರ ಭಾವುಕರಾದರು.

ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಶಾಸಕರಾದ ಜಿ.ಟಿ.ದೇವೇಗೌಡ, ಎಚ್.ಪಿ.ಮಂಜುನಾಥ್, ಅನಿಲ್ ಚಿಕ್ಕಮಾದು, ಎಂ.ಅಶ್ವಿನ್‌ಕುಮಾರ್, ಡಾ.ಡಿ.ತಿಮ್ಮಯ್ಯ, ಮಾಜಿ ಶಾಸಕ ಕೆ.ವೆಂಕಟೇಶ್, ಎಂ.ಕೆ.ಸೋಮಶೇಖರ್, ಎಸ್.ಬಾಲರಾಜ್, ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ, ಬಿ.ಎಂ.ರಾಮು, ಬೀರಿಹುಂಡಿ ಬಸವಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು, ಮಾಜಿ ಮೇಯರ್ ಪುರುಷೋತ್ತಮ್, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಕಾಂಗ್ರೆಸ್ ಮುಖಂಡ ಡಿ.ರವಿಶಂಕರ್, ಡಿಸಿಸಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ಕೆಪಿಸಿಸಿವಕ್ತಾರ ಎಂ.ಲಕ್ಷ್ಮಣ್, ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ.ಸೀತಾರಾಂ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕವೀಶ್ ಗೌಡ, ಜಿಲ್ಲಾ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಸದಾನಂದ, ಜೆಎಸ್‌ಎಸ್ ಮಹಾವಿದ್ಯಾಪೀಠದ ಎಸ್.ಪಿ.ಮಂಜುನಾಥಸ್ವಾಮಿ, ಕೆಪಿಎಸ್‌ಸಿ ಮಾಜಿ ಸದಸ್ಯರಾದ ಷಡಕ್ಷರಿ, ಬ್ರಾಡ್‌ವೇ ಕಿರಣ್, ಹಿನಕಲ್ ಪ್ರಕಾಶ್, ಮಾರ್ಬಳ್ಳಿ ಕುಮಾರ್, ಜೆ.ಜೆ.ಆನಂದ, ಮಾವಿನಹಳ್ಳಿ ಸಿದ್ದೇಗೌಡ, ಮಾದೇಗೌಡ, ಟಿ.ಬಿ.ಚಿಕ್ಕಣ್ಣ, ಎಸ್.ಆರ್.ರವಿ ಸೇರಿದಂತೆ ಸುಮಾರು ೬ ಸಾವಿರಕ್ಕೂ ಅಧಿಕ ಮಂದಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ನನ್ನ ಪ್ರೀತಿಯ ತಮ್ಮ ರಾಮೇಗೌಡ : ಸಿದ್ದರಾಮಯ್ಯ ಭಾವುಕ

ನನ್ನ ಪ್ರೀತಿಯ ತಮ್ಮ ರಾಮೇಗೌಡ. ಅವನು ಯಾವಾಗಲೂ ‘ನೀನು ಮುಖ್ಯಮಂತ್ರಿ ಆಗಿದ್ದೀಯ, ಹಂಗೆ ಚೆನ್ನಾಗಿರುವ. ಮನೆ, ಹೊಲ, ಗದ್ದೆ ನಾನು ನೋಡಿಕೊಳ್ಳುತ್ತೇನೆ. ನೀ ಚೆನ್ನಾಗಿರು ಅಷ್ಟೇ ಸಾಕು’ ಅನ್ನುತ್ತಿದ್ದ ಎಲ್ಲ ಕೆಲಸನೂ ಅವನೇ ಮಾಡುತ್ತಿದ್ದೆ. ಪ್ರೀತಿಯ ಸಹೋದರ. ನಮ್ಮಣ್ಣ ಚೆನ್ನಾಗಿರಲಿ ಅಂತ ಭಾವಿಸುತ್ತಿದ್ದ. ಅವನಾಯಿತು, ಗದ್ದೆ ಆಯಿತು, ಮನೆ ಆಯಿತು, ಬೇಸಾಯ ಆಯಿತು ಅಷ್ಟೆ. ಎಂದೂ ನನ್ನ ರಾಜಕೀಯಕ್ಕೆ ತೊಂದರೆ ಕೊಡಲಿಲ್ಲ. ಬೆನ್ನಲುಬಾಗಿ ನಿಂತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಹೋದರನ ಜತೆಗಿನದ್ದ ಒಡನಾಟ ನೆನೆದು ಕಣ್ಣೀರಾದರು.

 

andolanait

Recent Posts

ಮೈಸೂರು ಮೃಗಾಲಯದ ಹುಲಿ ʼಪೃಥ್ವಿʼ ಇನ್ನಿಲ್ಲ

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತನ್ನ ಕಟ್ಟುಮಸ್ತಿನ ಆಕಾರದಿಂದ ಸಂದರ್ಶಕರನ್ನು ಆಕರ್ಷಿಸುತ್ತಿದ್ದ ಗಂಡು ಹುಲಿ ‘ಪೃಥ್ವಿ’ ಅನಾರೋಗ್ಯ ಕಾರಣಗಳಿಂದ…

52 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಏಪ್ರಿಲ್‌ 9  

1 hour ago

ಕೇರಳ,ಪುದುಚೇರಿ,ಅಸ್ಸಾಂ ವಿಧಾನಸಭಾ ಚುನಾವಣೆ : ಮತದಾನ ಆರಂಭ

ನವದೆಹಲಿ : ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ಇಂದು ಬೆಳಿಗ್ಗೆ ಮತದಾನ ಆರಂಭವಾಗಿದೆ. ಜೊತೆಗೆ ನಾಗಾಲ್ಯಾಂಡ್‌ನ ಕೊರಿಡಾಂಗ್…

2 hours ago

ಬಾಗಲಕೋಟೆ, ದಾವಣೆಗರೆ ದಕ್ಷಿಣ ಉಪಚುನಾವಣೆಗೆ ಮತದಾನ ಆರಂಭ

ಬಾಗಲಕೋಟೆ : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದೆ. ಗುರುವಾರ, ಏಪ್ರಿಲ್ 9ರಂದು…

2 hours ago

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

12 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

14 hours ago