ಜಿಲ್ಲೆಗಳು

ಸ್ವಂತ ಜಮೀನಿನಲ್ಲಿ ನಡೆದ ಸಿದ್ದು ಸಹೋದರ ರಾಮೇಗೌಡರ ಅಂತ್ಯಕ್ರಿಯೆ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅವರ ಅಂತ್ಯಕ್ರಿಯೆಯು ಶನಿವಾರ ಸಿದ್ದರಾಮನಹುಂಡಿ ಪಕ್ಕದ ಹೊಸಹಳ್ಳಿ ಬಳಿ ಇರುವ ಜಮೀನಿನಲ್ಲಿ ನೆರವೇರಿತು. ಸಿದ್ದರಾಮಯ್ಯ ಅವರ ತಂದೆ, ತಾಯಿ, ಅಣ್ಣನ ಸಮಾಧಿ ಬಳಿಯೇ ಕಿರಿಯ ತಮ್ಮನ ಪಾರ್ಥೀವ ಶರೀರವನ್ನು ಮಣ್ಣು ಮಾಡಲಾಯಿತು.

ತೀವ್ರ ಅನಾರೋಗ್ಯದಿಂದ ರಾಮೇಗೌಡ ಶುಕ್ರವಾರ ರಾತ್ರಿ ಮೃತಪಟ್ಟಿದ್ದರು. ಬೆಳಿಗ್ಗೆಯೇ ಬೆಂಗಳೂರಿನಿಂದ ಹೊರಟು ಸಿದ್ದರಾಮನಹುಂಡಿಗೆ ಬಂದ ಮಾಜಿ ಸಿಎಂ ಸಿದ್ದರಾಮಯ್ಯ, ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪಾರ್ಥೀವ ಶರೀರದ ದರ್ಶನ ಪಡೆದರು. ಬಳಿಕ ಚಿಕ್ಕಪ್ಪನ ಪಾರ್ಥೀವ ಶರೀರಕ್ಕೆ ಹೆಗಲು ಕೊಟ್ಟ ಶಾಸಕ ಡಾ. ಯತೀಂದ್ರ ಭಾವುಕರಾದರು.

ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಶಾಸಕರಾದ ಜಿ.ಟಿ.ದೇವೇಗೌಡ, ಎಚ್.ಪಿ.ಮಂಜುನಾಥ್, ಅನಿಲ್ ಚಿಕ್ಕಮಾದು, ಎಂ.ಅಶ್ವಿನ್‌ಕುಮಾರ್, ಡಾ.ಡಿ.ತಿಮ್ಮಯ್ಯ, ಮಾಜಿ ಶಾಸಕ ಕೆ.ವೆಂಕಟೇಶ್, ಎಂ.ಕೆ.ಸೋಮಶೇಖರ್, ಎಸ್.ಬಾಲರಾಜ್, ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ, ಬಿ.ಎಂ.ರಾಮು, ಬೀರಿಹುಂಡಿ ಬಸವಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು, ಮಾಜಿ ಮೇಯರ್ ಪುರುಷೋತ್ತಮ್, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಕಾಂಗ್ರೆಸ್ ಮುಖಂಡ ಡಿ.ರವಿಶಂಕರ್, ಡಿಸಿಸಿ ಅಧ್ಯಕ್ಷ ಬಿ.ಜೆ.ವಿಜಯಕುಮಾರ್, ಕೆಪಿಸಿಸಿವಕ್ತಾರ ಎಂ.ಲಕ್ಷ್ಮಣ್, ಭೋವಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ.ಸೀತಾರಾಂ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕವೀಶ್ ಗೌಡ, ಜಿಲ್ಲಾ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಸದಾನಂದ, ಜೆಎಸ್‌ಎಸ್ ಮಹಾವಿದ್ಯಾಪೀಠದ ಎಸ್.ಪಿ.ಮಂಜುನಾಥಸ್ವಾಮಿ, ಕೆಪಿಎಸ್‌ಸಿ ಮಾಜಿ ಸದಸ್ಯರಾದ ಷಡಕ್ಷರಿ, ಬ್ರಾಡ್‌ವೇ ಕಿರಣ್, ಹಿನಕಲ್ ಪ್ರಕಾಶ್, ಮಾರ್ಬಳ್ಳಿ ಕುಮಾರ್, ಜೆ.ಜೆ.ಆನಂದ, ಮಾವಿನಹಳ್ಳಿ ಸಿದ್ದೇಗೌಡ, ಮಾದೇಗೌಡ, ಟಿ.ಬಿ.ಚಿಕ್ಕಣ್ಣ, ಎಸ್.ಆರ್.ರವಿ ಸೇರಿದಂತೆ ಸುಮಾರು ೬ ಸಾವಿರಕ್ಕೂ ಅಧಿಕ ಮಂದಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ನನ್ನ ಪ್ರೀತಿಯ ತಮ್ಮ ರಾಮೇಗೌಡ : ಸಿದ್ದರಾಮಯ್ಯ ಭಾವುಕ

ನನ್ನ ಪ್ರೀತಿಯ ತಮ್ಮ ರಾಮೇಗೌಡ. ಅವನು ಯಾವಾಗಲೂ ‘ನೀನು ಮುಖ್ಯಮಂತ್ರಿ ಆಗಿದ್ದೀಯ, ಹಂಗೆ ಚೆನ್ನಾಗಿರುವ. ಮನೆ, ಹೊಲ, ಗದ್ದೆ ನಾನು ನೋಡಿಕೊಳ್ಳುತ್ತೇನೆ. ನೀ ಚೆನ್ನಾಗಿರು ಅಷ್ಟೇ ಸಾಕು’ ಅನ್ನುತ್ತಿದ್ದ ಎಲ್ಲ ಕೆಲಸನೂ ಅವನೇ ಮಾಡುತ್ತಿದ್ದೆ. ಪ್ರೀತಿಯ ಸಹೋದರ. ನಮ್ಮಣ್ಣ ಚೆನ್ನಾಗಿರಲಿ ಅಂತ ಭಾವಿಸುತ್ತಿದ್ದ. ಅವನಾಯಿತು, ಗದ್ದೆ ಆಯಿತು, ಮನೆ ಆಯಿತು, ಬೇಸಾಯ ಆಯಿತು ಅಷ್ಟೆ. ಎಂದೂ ನನ್ನ ರಾಜಕೀಯಕ್ಕೆ ತೊಂದರೆ ಕೊಡಲಿಲ್ಲ. ಬೆನ್ನಲುಬಾಗಿ ನಿಂತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಹೋದರನ ಜತೆಗಿನದ್ದ ಒಡನಾಟ ನೆನೆದು ಕಣ್ಣೀರಾದರು.

 

andolanait

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

3 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

5 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

7 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

12 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

12 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

14 hours ago